<p><strong>ವಿಜಯಪುರ</strong>: ಸಂಸದ ರಮೇಶ ಜಿಗಜಿಣಗಿ ಅವರು ಮಿದುಳಿನಲ್ಲಿ ರಕ್ತಸ್ರಾವ ಸಮಸ್ಯೆಯಿಂದಾಗಿ ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.</p>.<p>ಎರಡು ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಅವರಿಗೆ ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಸದ್ಯ ಐಸಿಯುನಲ್ಲಿ ಇದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಭಾನುವಾರ ತಿಳಿಸಿವೆ.</p>.<p>‘ಸಂಸದ ಜಿಗಜಿಣಗಿ ಅವರು ಶಸ್ತ್ರ ಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುತ್ತಿದ್ದಾರೆ. ಒಂದೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ. ರಾಜಕೀಯ ಉದ್ದೇಶದಿಂದ ಕೆಲವರು ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಯಾವುದೇ ಊಹಾಪೋಹಗಳಿಗೆ ಜನರು ಕಿವಿಗೊಡಬಾರದು’ ಎಂದು ಕುಟುಂಬದವರು ತಿಳಿಸಿದ್ದಾರೆ.</p>.<p>ಈ ಹಿಂದೆ ಜ.28ರಂದು ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ಬಾಗಲಕೋಟೆಯ ಹಾನಗಲ್ ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಿದ ಬಳಿಕ ಗುಣಮುಖರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಸಂಸದ ರಮೇಶ ಜಿಗಜಿಣಗಿ ಅವರು ಮಿದುಳಿನಲ್ಲಿ ರಕ್ತಸ್ರಾವ ಸಮಸ್ಯೆಯಿಂದಾಗಿ ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.</p>.<p>ಎರಡು ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಅವರಿಗೆ ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಸದ್ಯ ಐಸಿಯುನಲ್ಲಿ ಇದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಭಾನುವಾರ ತಿಳಿಸಿವೆ.</p>.<p>‘ಸಂಸದ ಜಿಗಜಿಣಗಿ ಅವರು ಶಸ್ತ್ರ ಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುತ್ತಿದ್ದಾರೆ. ಒಂದೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ. ರಾಜಕೀಯ ಉದ್ದೇಶದಿಂದ ಕೆಲವರು ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಯಾವುದೇ ಊಹಾಪೋಹಗಳಿಗೆ ಜನರು ಕಿವಿಗೊಡಬಾರದು’ ಎಂದು ಕುಟುಂಬದವರು ತಿಳಿಸಿದ್ದಾರೆ.</p>.<p>ಈ ಹಿಂದೆ ಜ.28ರಂದು ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ಬಾಗಲಕೋಟೆಯ ಹಾನಗಲ್ ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಿದ ಬಳಿಕ ಗುಣಮುಖರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>