ಪಟ್ಟಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈಗ ಬಿಜೆಪಿ ಅವರು ತಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಜನತೆಗೆ ಗೊತ್ತಾಗಲಿ ಎಂದು ಕಾರ್ಯಕ್ರಮ ಮಾಡಿದ್ದು, ಶಾಸಕರಿಗೆ ಸಹಿಸದಂತಾಗಿದೆ. ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಕುರಿತು ಸಂಸದ ರಮೇಶ ಜಿಗಜಿಣಗಿ ಅವರು ಅಂದಿನ ಮುಖ್ಯಮಂತ್ರಿ ಬೊಮ್ಮಾಯಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಭರವಸೆ ನೀಡಿದ ನಂತರ ರೈತರು ಪ್ರತಿಭಟನೆ ಹಿಂಪಡೆದಿದ್ದರು. ಈಗ ಅದೇ ಯೋಜನೆ ತಾವೇ ಮಾಡಿಸಿರುವಂತೆ ಮಾತನಾಡುತ್ತಿರುವುದು ಹಾಸ್ಯಾಸ್ಪದ’ ಎಂದರು.