<p><strong>ಹೊರ್ತಿ:</strong> ‘ಹೊರ್ತಿ ರೇವಣಸಿದ್ದೇಶ್ವರ ಏತನೀರಾವರಿ ಯೋಜನೆ ಮಹತ್ವಕಾಂಕ್ಷಿ<strong> </strong>ಯೋಜನೆಯಾಗಿದ್ದು,ಇಂಡಿ, ನಾಗಠಾಣ ಮತಕ್ಷೇತ್ರದ ರೈತರ ಪಾಲಿನ ವರದಾನವಾಗಿದೆ’ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.</p>.<p>ಸಮೀಪದ ಅಗಸನಾಳ ಹತ್ತಿರ ಕೆರೆ ತುಂಬುವ ಯೋಜನೆಯ ಜಾಕವೇಲ್ ಹಾಗೂ ನೀರಾವರಿ ಯೋಜನೆ ನೀಲನಕ್ಷೆಯನ್ನು ಅಧಿಕಾರಿಗಳ ಜತೆ ಬುಧವಾರ ವೀಕ್ಷಿಸಿ, ಕಾಮಗಾರಿಯ ಪ್ರಗತಿಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ನಂತರ ಹೊರ್ತಿಯ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.</p>.<p>‘ಇಂಡಿ ಮತಕ್ಷೇತ್ರದ 32 ಹಳ್ಳಿಗಳ 21,500 ಹೆಕ್ಟೇರ್ ಪ್ರದೇಶಕ್ಕೆ ಹಾಗೂ ನಾಗಠಾಣ ಮತಕ್ಷೇತ್ರದ 10 ಹಳ್ಳಿಗಳ 6,500 ಹೆಕ್ಟೇರ್ ಪ್ರದೇಶಗಳಿಗೆ ಈ ಯೋಜನೆಯಿಂದ ಅನುಕೂಲವಾಗುವಾಗಲಿದ್ದು, ತ್ವರಿತವಾಗಿ ಮುಗಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>‘ಈ ಯೋಜನೆ ಕುರಿತು ಸಮಸ್ಯೆಗಳು ಇದ್ದರೆ ಗಮನಕ್ಕೆ ತನ್ನಿ. ತಾಂತ್ರಿಕ ತೊಂದರೆ ಇದ್ದರೆ ಸರ್ಕಾರದ ಜೊತೆ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ’ ಎಂದರು.</p>.<p>ಕೃಷ್ಣಾ ಭಾಗ್ಯ ಜಲನಿಗಮ ಎಂ.ಡಿ ಜಯರಾಮ, ಎಚ್.ಎಂ.ಶ್ರೀನಿವಾಸ, ಕೆ.ಬಿ.ಜೆ.ಎನ್.ಎಲ್ ಅಧಿಕಾರಿ ಗೋವಿಂದ ರಾಠೋಡ, ರಾಮಪೂರ ಕೃಷ್ಣಾ ಭಾಗ್ಯ ಜಲನಿಗಮದ ಅಧಿಕಾರಿ ಮನೋಜಕುಮಾರ ಗಡಬಳ್ಳಿ, ಎಸ್.ಆರ್ ರುದ್ರವಾಡಿ, ಕೆ.ಪಿ.ಟಿ.ಸಿ.ಎಲ್ ಅಧೀಕ್ಷಕ ಗುರುನಾಥ ಗೋಟ್ಯಾಳ, ಕೃಷಿ ಅಧಿಕಾರಿ ಮಹಾದೇವಪ್ಪ ಏವೂರ ಸೇರಿದಂತೆ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊರ್ತಿ:</strong> ‘ಹೊರ್ತಿ ರೇವಣಸಿದ್ದೇಶ್ವರ ಏತನೀರಾವರಿ ಯೋಜನೆ ಮಹತ್ವಕಾಂಕ್ಷಿ<strong> </strong>ಯೋಜನೆಯಾಗಿದ್ದು,ಇಂಡಿ, ನಾಗಠಾಣ ಮತಕ್ಷೇತ್ರದ ರೈತರ ಪಾಲಿನ ವರದಾನವಾಗಿದೆ’ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.</p>.<p>ಸಮೀಪದ ಅಗಸನಾಳ ಹತ್ತಿರ ಕೆರೆ ತುಂಬುವ ಯೋಜನೆಯ ಜಾಕವೇಲ್ ಹಾಗೂ ನೀರಾವರಿ ಯೋಜನೆ ನೀಲನಕ್ಷೆಯನ್ನು ಅಧಿಕಾರಿಗಳ ಜತೆ ಬುಧವಾರ ವೀಕ್ಷಿಸಿ, ಕಾಮಗಾರಿಯ ಪ್ರಗತಿಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ನಂತರ ಹೊರ್ತಿಯ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.</p>.<p>‘ಇಂಡಿ ಮತಕ್ಷೇತ್ರದ 32 ಹಳ್ಳಿಗಳ 21,500 ಹೆಕ್ಟೇರ್ ಪ್ರದೇಶಕ್ಕೆ ಹಾಗೂ ನಾಗಠಾಣ ಮತಕ್ಷೇತ್ರದ 10 ಹಳ್ಳಿಗಳ 6,500 ಹೆಕ್ಟೇರ್ ಪ್ರದೇಶಗಳಿಗೆ ಈ ಯೋಜನೆಯಿಂದ ಅನುಕೂಲವಾಗುವಾಗಲಿದ್ದು, ತ್ವರಿತವಾಗಿ ಮುಗಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>‘ಈ ಯೋಜನೆ ಕುರಿತು ಸಮಸ್ಯೆಗಳು ಇದ್ದರೆ ಗಮನಕ್ಕೆ ತನ್ನಿ. ತಾಂತ್ರಿಕ ತೊಂದರೆ ಇದ್ದರೆ ಸರ್ಕಾರದ ಜೊತೆ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ’ ಎಂದರು.</p>.<p>ಕೃಷ್ಣಾ ಭಾಗ್ಯ ಜಲನಿಗಮ ಎಂ.ಡಿ ಜಯರಾಮ, ಎಚ್.ಎಂ.ಶ್ರೀನಿವಾಸ, ಕೆ.ಬಿ.ಜೆ.ಎನ್.ಎಲ್ ಅಧಿಕಾರಿ ಗೋವಿಂದ ರಾಠೋಡ, ರಾಮಪೂರ ಕೃಷ್ಣಾ ಭಾಗ್ಯ ಜಲನಿಗಮದ ಅಧಿಕಾರಿ ಮನೋಜಕುಮಾರ ಗಡಬಳ್ಳಿ, ಎಸ್.ಆರ್ ರುದ್ರವಾಡಿ, ಕೆ.ಪಿ.ಟಿ.ಸಿ.ಎಲ್ ಅಧೀಕ್ಷಕ ಗುರುನಾಥ ಗೋಟ್ಯಾಳ, ಕೃಷಿ ಅಧಿಕಾರಿ ಮಹಾದೇವಪ್ಪ ಏವೂರ ಸೇರಿದಂತೆ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>