<p><strong>ಮುದ್ದೇಬಿಹಾಳ:</strong> ಸರ್ಕಾರಿ ನೌಕರರೆಂದರೆ ಆಲಸಿಗಳು, ಕಚೇರಿಗೆ ಹೋದರೆ ಸಿಗುವುದಿಲ್ಲ ಎಂಬ ಕೆಲವು ಅಪವಾದಗಳ ಮಧ್ಯೆಯೂ ತಾಲ್ಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ರೈತರಿಗೆ ಸರ್ಕಾರದಿಂದ ದೊರೆಯಬೇಕಾದ ನ್ಯಾಯಬದ್ಧ ಪರಿಹಾರ ದೊರಕಿಸಿಕೊಡಲು ಕಂದಾಯ ಇಲಾಖೆ ನೌಕರರು ಹಗಲು- ರಾತ್ರಿ ಲೆಕ್ಕಿಸದೇ ರಜೆಯ ದಿನದಂದು ಕೆಲಸ ಮಾಡಿ ಕರ್ತವ್ಯ ಪ್ರಜ್ಞೆ ತೋರಿದ್ದಾರೆ.</p>.<p>ಮುದ್ದೇಬಿಹಾಳ ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ಮಧ್ಯರಾತ್ರಿ 12 ನಂತರ ಹಾಗೂ ಎರಡನೇ ಶನಿವಾರ ಸಹ ಬರ ಪರಿಹಾರಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರ ಮೇಲ್ವಿಚಾರಣೆಯಲ್ಲಿ ತಾಲ್ಲೂಕಿನ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು, ಕಂದಾಯ ನಿರೀಕ್ಷಕರು ಕರ್ತವ್ಯದ ಮೇಲಿದ್ದಾರೆ.</p>.<p>ಕಳೆದ ಮೂರು ದಿನಗಳಿಂದ ರಾತ್ರಿಯಿಡಿ ರೈತರ ಬೆಳೆ ಪರಿಹಾರ ಎಫ್.ಐ.ಡಿ (ಫ್ರೂಟ್ಸ್ ಐಡಿ) ಮಾಡಿರುವುದನ್ನು ಅನುಮೋದಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಚಳಿ, ನಿದ್ದೆ ಲೆಕ್ಕಿಸದೇ ಮಹಿಳಾ ನೌಕರರು ಪಾಲ್ಗೊಂಡು ಈ ಕಾರ್ಯದಲ್ಲಿ ತೊಡಗಿರುವುದಕ್ಕೆ ರೈತಾಪಿ ವರ್ಗದಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ.</p>.<p>ತಾಲ್ಲೂಕಿನಲ್ಲಿ 40 ಸಾವಿರಕ್ಕೂ ಅಧಿಕ ರೈತರು ಬೆಳೆ ಪರಿಹಾರಕ್ಕೆ ನೋಂದಾಯಿಸಿದ್ದು, 26,409 ಖಾತೆಗಳು ಆಧಾರ್ನೊಂದಿಗೆ ಆರ್.ಟಿ.ಸಿಯಲ್ಲಿನ ಹೆಸರು ತಾಳೆಯಾಗದಿರುವುದರಿಂದ ಪರಿಶೀಲನೆ ನಡೆಸಿ ಅನುಮೋದಿಸುವ ಕೆಲಸ ಮಾಡುತ್ತಿದ್ದೇವೆ ಎಂದು ತಹಶೀಲ್ದಾರ್ ಬಲರಾಮ ಕಟ್ಟಿಮನಿ ತಿಳಿಸಿದ್ದಾರೆ.</p>.<p>Quote - ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ಟಾಪ್ ಒದಗಿಸಿದರೆ ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಗಂಗಾಧರ ಜೂಲಗುಡ್ಡ ಜಿಲ್ಲಾಧ್ಯಕ್ಷ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ವಿಜಯಪುರ</p>.<p>Quote - ರೈತರಿಗೆ ಸರ್ಕಾರದ ಸೌಲಭ್ಯ ದೊರಕಿಸಿಕೊಡಲು ಹಗಲು ರಾತ್ರಿ ಎನ್ನದೇ ಕೆಲಸ ಮಾಡುತ್ತಿರುವ ಕಂದಾಯ ಇಲಾಖೆ ನೌಕರರ ಕಾರ್ಯ ಶ್ಲಾಘನೀಯ. ಇತರರಿಗೆ ಮಾದರಿಯಾಗಿದೆ ಮಲ್ಲಿಕಾರ್ಜುನ ಸಿದರೆಡ್ಡಿ ಅಧ್ಯಕ್ಷ ರೈತ ಹಿತರಕ್ಷಣಾ ವೇದಿಕೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುದ್ದೇಬಿಹಾಳ:</strong> ಸರ್ಕಾರಿ ನೌಕರರೆಂದರೆ ಆಲಸಿಗಳು, ಕಚೇರಿಗೆ ಹೋದರೆ ಸಿಗುವುದಿಲ್ಲ ಎಂಬ ಕೆಲವು ಅಪವಾದಗಳ ಮಧ್ಯೆಯೂ ತಾಲ್ಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ರೈತರಿಗೆ ಸರ್ಕಾರದಿಂದ ದೊರೆಯಬೇಕಾದ ನ್ಯಾಯಬದ್ಧ ಪರಿಹಾರ ದೊರಕಿಸಿಕೊಡಲು ಕಂದಾಯ ಇಲಾಖೆ ನೌಕರರು ಹಗಲು- ರಾತ್ರಿ ಲೆಕ್ಕಿಸದೇ ರಜೆಯ ದಿನದಂದು ಕೆಲಸ ಮಾಡಿ ಕರ್ತವ್ಯ ಪ್ರಜ್ಞೆ ತೋರಿದ್ದಾರೆ.</p>.<p>ಮುದ್ದೇಬಿಹಾಳ ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ಮಧ್ಯರಾತ್ರಿ 12 ನಂತರ ಹಾಗೂ ಎರಡನೇ ಶನಿವಾರ ಸಹ ಬರ ಪರಿಹಾರಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರ ಮೇಲ್ವಿಚಾರಣೆಯಲ್ಲಿ ತಾಲ್ಲೂಕಿನ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು, ಕಂದಾಯ ನಿರೀಕ್ಷಕರು ಕರ್ತವ್ಯದ ಮೇಲಿದ್ದಾರೆ.</p>.<p>ಕಳೆದ ಮೂರು ದಿನಗಳಿಂದ ರಾತ್ರಿಯಿಡಿ ರೈತರ ಬೆಳೆ ಪರಿಹಾರ ಎಫ್.ಐ.ಡಿ (ಫ್ರೂಟ್ಸ್ ಐಡಿ) ಮಾಡಿರುವುದನ್ನು ಅನುಮೋದಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಚಳಿ, ನಿದ್ದೆ ಲೆಕ್ಕಿಸದೇ ಮಹಿಳಾ ನೌಕರರು ಪಾಲ್ಗೊಂಡು ಈ ಕಾರ್ಯದಲ್ಲಿ ತೊಡಗಿರುವುದಕ್ಕೆ ರೈತಾಪಿ ವರ್ಗದಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ.</p>.<p>ತಾಲ್ಲೂಕಿನಲ್ಲಿ 40 ಸಾವಿರಕ್ಕೂ ಅಧಿಕ ರೈತರು ಬೆಳೆ ಪರಿಹಾರಕ್ಕೆ ನೋಂದಾಯಿಸಿದ್ದು, 26,409 ಖಾತೆಗಳು ಆಧಾರ್ನೊಂದಿಗೆ ಆರ್.ಟಿ.ಸಿಯಲ್ಲಿನ ಹೆಸರು ತಾಳೆಯಾಗದಿರುವುದರಿಂದ ಪರಿಶೀಲನೆ ನಡೆಸಿ ಅನುಮೋದಿಸುವ ಕೆಲಸ ಮಾಡುತ್ತಿದ್ದೇವೆ ಎಂದು ತಹಶೀಲ್ದಾರ್ ಬಲರಾಮ ಕಟ್ಟಿಮನಿ ತಿಳಿಸಿದ್ದಾರೆ.</p>.<p>Quote - ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ಟಾಪ್ ಒದಗಿಸಿದರೆ ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಗಂಗಾಧರ ಜೂಲಗುಡ್ಡ ಜಿಲ್ಲಾಧ್ಯಕ್ಷ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ವಿಜಯಪುರ</p>.<p>Quote - ರೈತರಿಗೆ ಸರ್ಕಾರದ ಸೌಲಭ್ಯ ದೊರಕಿಸಿಕೊಡಲು ಹಗಲು ರಾತ್ರಿ ಎನ್ನದೇ ಕೆಲಸ ಮಾಡುತ್ತಿರುವ ಕಂದಾಯ ಇಲಾಖೆ ನೌಕರರ ಕಾರ್ಯ ಶ್ಲಾಘನೀಯ. ಇತರರಿಗೆ ಮಾದರಿಯಾಗಿದೆ ಮಲ್ಲಿಕಾರ್ಜುನ ಸಿದರೆಡ್ಡಿ ಅಧ್ಯಕ್ಷ ರೈತ ಹಿತರಕ್ಷಣಾ ವೇದಿಕೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>