ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: 20 ಲೀಟರ್‌ ಕಲಬೆರಿಕೆ ಸೇಂದಿ ಜಪ್ತಿ

Published 2 ಮೇ 2024, 15:43 IST
Last Updated 2 ಮೇ 2024, 15:43 IST
ಅಕ್ಷರ ಗಾತ್ರ

ಯಾದಗಿರಿ: ಗುರುಮಠಕಲ್ ತಾಲ್ಲೂಕಿನ ಮಿನಾಸಪುರ ಗ್ರಾಮದ ಮೊಗಲಪ್ಪ ಬುಗ್ಗಪ್ಪ ಎಂಬಾತನ ಮನೆಯ ಮೇಲೆ ಅಬಕಾರಿ ಇಲಾಖೆ ದಾಳಿ ಮಾಡಿ ಮಾರಾಟದ ಉದ್ದೇಶಕ್ಕಾಗಿ ತಯಾರಿಸಿ ಸಂಗ್ರಹಿಸಿಟ್ಟದ್ದ 20 ಲೀಟರ್‌ ಕಲಬೆರಕೆ ಸೇಂದಿ ಜಪ್ತಿಪಡಿಸಿಕೊಳ್ಳಲಾಗಿದೆ.

ಗುರುಮಠಕಲ್‌ ಪಟ್ಟಣದಲ್ಲಿ ಗಸ್ತಿನಲ್ಲಿದ್ದ ವೇಳೆ ಬೈಕ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ರಮ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ನವೀನ ನಾಗೇಶ ಎಂಬಾತನನ್ನು ಬಂಧಿಸಲಾಗಿದೆ.

ಓರಿಜಿನಲ್ ಚಾಯ್ಸ್‌ ಟೆಟ್ರಾ ಪ್ಯಾಕೆಟ್‌ಗಳಲ್ಲಿ 17.280 ಲೀಟರ್‌ನಷ್ಟು ಮದ್ಯ ವಶಪಡಿಸಿಕೊಳ್ಳಲಾಗಿದೆ. ಅವುಗಳ ಅಂದಾಜು ಮೌಲ್ಯ ₹77,680 ಆಗಿದೆ ಎಂದು ಯಾದಗಿರಿ ಅಬಕಾರಿ ಉಪ ಆಯುಕ್ತೆ ಶಾರದಾ ಸಿ.ಕೋಲಕಾರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT