ಯಾದಗಿರಿ: ಜಿಲ್ಲೆಯ ವಡಗೇರಾ ತಾಲ್ಲೂಕಿನ ಕುರಕುಂದಿ ಗ್ರಾಮದ ಹೊರವಲಯದಲ್ಲಿ ತೀವ್ರ ಬಿಸಿಲಿನಿಂದಾಗಿ ಕುಸಿದು ಬಿದ್ದು ನರೇಗಾ ಕೂಲಿ ಕಾರ್ಮಿಕ ಮಹಿಳೆ ಸೋಮವಾರ ಮೃತಪಟ್ಟಿದ್ದಾರೆ.
ಹಣಮಂತಿ ಮಲ್ಲಿಕಾರ್ಜನ ಗುಡ್ಡೆನವರು (57) ಮೃತ ಕಾರ್ಮಿಕ ಮಹಿಳೆ.
ಗ್ರಾಮದಲ್ಲಿ ಉದ್ಯೋಗ ಖಾತ್ರಿ ಕೂಲಿ ಕೆಲಸಕ್ಕೆ ಹೋಗಿದ್ದ ಹಣಮಂತಿ, ಬಿಸಿಲಿನ ಜಳಕ್ಕೆ ಮೂರ್ಛೆ ಹೋಗಿದ್ದು, ತಕ್ಷಣವೇ ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿಂದ ಯಿಮ್ಸ್ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಗ್ರಾಮ ಪಂಚಾಯಿತಿ ಮೂಲಗಳು ತಿಳಿಸಿವೆ.