ಲೋಕಸಭೆ ಚುನಾವಣೆ ಮೇಲೆ ಪರಿಣಾಮ?
ಜಿಲ್ಲೆಯ ನಾಲ್ಕು ಮತಕ್ಷೇತ್ರಗಳು ರಾಯಚೂರು ಲೋಕಸಭೆಯ ಎರಡು ಕ್ಷೇತ್ರಕ್ಕೆ ಹಂಚಿಕೆಯಾಗಿವೆ. ಯಾದಗಿರಿ ಸುರಪುರ ಶಹಾಪುರ ರಾಯಚೂರು ಕ್ಷೇತ್ರದ ವ್ಯಾಪ್ತಿಗೆ ಒಳಪಟ್ಟರೆ ಗುರುಮಠಕಲ್ ಮತಕ್ಷೇತ್ರ ಕಲಬುರಗಿ ಲೋಕಸಭೆ ವ್ಯಾಪ್ತಿಗೆ ಸೇರಿದೆ. ಮೊದಲೇ ಲೋಕಸಭೆ ಕ್ಷೇತ್ರ ಬಿಜೆಪಿ ವಶದಲ್ಲಿದೆ. ಈ ಬಾರಿಯ ಲೋಕಸಭೆ ಚುನಾವಣೆಗಾಗಿ ಬಿಜೆಪಿ–ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಯಾದಗಿರಿ ಗುರುಮಠಕಲ್ ಮತಕ್ಷೇತ್ರದವರಿಗೆ ನಿಗಮ ಮಂಡಳಿಯಲ್ಲಿ ಆದ್ಯತೆ ಸಿಗದ ಕಾರಣ ಯಾವ ರೀತಿ ಪರಿಣಾಮ ಬೀರಲಿದೆ ಎನ್ನುವುದನ್ನು ಮುಂದಿನ ದಿನಗಳಲ್ಲಿ ಕಾದು ನೋಡಬೇಕಾಗಿದೆ.