ಈ ಕುರಿತು ಭಾನುವಾರ ಹೇಳಿಕೆ ನೀಡಿರುವ ಅವರು, ‘ಮುಸ್ಲಿಮರು ಯಾವ ರೀತಿ ಪೆಟ್ರೋಲ್ ಬಾಂಬ್, ತಲವಾರ್ ತೋರಿಸುತ್ತಾರೆ, ಕಲ್ಲು ತೂರಾಟ ಮಾಡುತ್ತಾರೋ ನೀವೂ ಸನ್ನದ್ಧರಾಗಿ ಮೆರವಣಿಗೆಗೆ ಹೋಗಿ’ ಎಂದು ಹೇಳಿ ಒಂದು ಸಮುದಾಯವನ್ನು ಅವಮಾನಿಸುವುದರ ಜತೆಗೆ ಮತ್ತೊಂದು ಸಮುದಾಯಕ್ಕೆ ಪ್ರಚೋದನೆ ನೀಡಿದ್ದಾರೆ. ಇಂತಹ ಸಮಾಜದ ದುಷ್ಟಶಕ್ತಿಗಳಿಗೆ ಕಾನೂನು ಮೂಲಕ ಪಾಠ ಕಲಿಸಬೇಕು’ ಎಂದು ಅವರು ಆಗ್ರಹಿಸಿದರು.