<p><strong>ಸುರಪುರ:</strong> ಅನನ್ಯ ತತ್ವ ಪದಕಾರ, ನಾಡಿನಾದ್ಯಂತ ನೂರಾರು ದೇಗುಲಗಳನ್ನು ಹೊಂದಿರುವ ಪರಮಾನಂದ ಪ್ರಭುಗಳ ಮೂಲ ದೇವಸ್ಥಾನವಿರುವ ಹೆಬ್ಬಾಳ ಕೆ.ಗ್ರಾಮದಲ್ಲಿ ಭಾನುವಾರ ಜಾತ್ರೆ ಅಂಗವಾಗಿ ರಥೋತ್ಸವ ಅದ್ದೂರಿಯಾಗಿ ಜರುಗಿತು.</p>.<p>ಬೆಳಿಗ್ಗೆ ವಿಶೇಷ ಪೂಜೆ, ಅಭಿಷೇಕ, ನೈವೇದ್ಯ, ದರ್ಶನ, ದಾಸೋಹ ನಡೆಯಿತು. ಮಧ್ಯಾಹ್ನ ಜಾವಳ ಕಾರ್ಯಗಳು ನಡೆದವು. ಸಂಜೆ ಪರಮಾನಂದ ಪ್ರಭುಗಳ ಉತ್ಸವ ಮೂರ್ತಿಯ ಪಲ್ಲಕ್ಕಿ ಉತ್ಸವ ಜರುಗಿತು.</p>.<p>ನಂತರ ನೂರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ಜರುಗಿತು. ಪರಮಾನಂದ ಪ್ರಭುಗಳಿಗೆ ಜೈ ಎಂಬ ಘೋಷಣೆ ಮುಗಿಲು ಮುಟ್ಟಿತ್ತು. ಭಕ್ತರು ರಥದ ಮೇಲೆ ಖರ್ಜೂರ, ಉತ್ತತ್ತಿ ಎಸೆದರು.</p>.<p>ತಮಿಳುನಾಡು, ಆಂಧ್ರಪ್ರದೇಶ, ಚಾಮರಾಜನಗರ, ಮಡಿಕೇರಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಿಂದ ಭಕ್ತರು ಆಗಮಿಸಿ ದರ್ಶನ ಪಡೆದರು.</p>.<p>ಸೋಮವಾರದಿಂದ ಶುಕ್ರವಾರದವರೆಗೆ ದನಗಳ ಜಾತ್ರೆ ನಡೆಯಲಿದೆ. ಈ ಜಾತ್ರೆ ಪ್ರಸಿದ್ಧವಾಗಿದ್ದು, ವಿವಿಧೆಡೆಯಿಂದ ದನಗಳನ್ನು ಮಾರಾಟಕ್ಕೆ ತರಲಾಗುತ್ತದೆ. ಫೆ.18 ರಂದು ಕಳಸ ಅವರೋಹಣದೊಂದಿಗೆ ಜಾತ್ರೆ ಸಂಪನ್ನವಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ:</strong> ಅನನ್ಯ ತತ್ವ ಪದಕಾರ, ನಾಡಿನಾದ್ಯಂತ ನೂರಾರು ದೇಗುಲಗಳನ್ನು ಹೊಂದಿರುವ ಪರಮಾನಂದ ಪ್ರಭುಗಳ ಮೂಲ ದೇವಸ್ಥಾನವಿರುವ ಹೆಬ್ಬಾಳ ಕೆ.ಗ್ರಾಮದಲ್ಲಿ ಭಾನುವಾರ ಜಾತ್ರೆ ಅಂಗವಾಗಿ ರಥೋತ್ಸವ ಅದ್ದೂರಿಯಾಗಿ ಜರುಗಿತು.</p>.<p>ಬೆಳಿಗ್ಗೆ ವಿಶೇಷ ಪೂಜೆ, ಅಭಿಷೇಕ, ನೈವೇದ್ಯ, ದರ್ಶನ, ದಾಸೋಹ ನಡೆಯಿತು. ಮಧ್ಯಾಹ್ನ ಜಾವಳ ಕಾರ್ಯಗಳು ನಡೆದವು. ಸಂಜೆ ಪರಮಾನಂದ ಪ್ರಭುಗಳ ಉತ್ಸವ ಮೂರ್ತಿಯ ಪಲ್ಲಕ್ಕಿ ಉತ್ಸವ ಜರುಗಿತು.</p>.<p>ನಂತರ ನೂರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ಜರುಗಿತು. ಪರಮಾನಂದ ಪ್ರಭುಗಳಿಗೆ ಜೈ ಎಂಬ ಘೋಷಣೆ ಮುಗಿಲು ಮುಟ್ಟಿತ್ತು. ಭಕ್ತರು ರಥದ ಮೇಲೆ ಖರ್ಜೂರ, ಉತ್ತತ್ತಿ ಎಸೆದರು.</p>.<p>ತಮಿಳುನಾಡು, ಆಂಧ್ರಪ್ರದೇಶ, ಚಾಮರಾಜನಗರ, ಮಡಿಕೇರಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಿಂದ ಭಕ್ತರು ಆಗಮಿಸಿ ದರ್ಶನ ಪಡೆದರು.</p>.<p>ಸೋಮವಾರದಿಂದ ಶುಕ್ರವಾರದವರೆಗೆ ದನಗಳ ಜಾತ್ರೆ ನಡೆಯಲಿದೆ. ಈ ಜಾತ್ರೆ ಪ್ರಸಿದ್ಧವಾಗಿದ್ದು, ವಿವಿಧೆಡೆಯಿಂದ ದನಗಳನ್ನು ಮಾರಾಟಕ್ಕೆ ತರಲಾಗುತ್ತದೆ. ಫೆ.18 ರಂದು ಕಳಸ ಅವರೋಹಣದೊಂದಿಗೆ ಜಾತ್ರೆ ಸಂಪನ್ನವಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>