<p><strong>ಹುಣಸಗಿ:</strong> ಪಂ.ಪುಟ್ಟರಾಜ ಗವಾಯಿ ಸಾವಿರಾರು ಅಂಧ, ಅನಾಥ ಮಕ್ಕಳಿಗೆ ಬೆಳಕಾಗಿ ಅವರ ಜೀವನಕ್ಕೆ ದಾರಿ ತೋರಿಸಿದ ಮಹಾ ಗುರು ಎಂದು ಚುಟುಕು ಸಾಹಿತಿ ಅಮರಯ್ಯಸ್ವಾಮಿ ಜಾಲಿಬೆಂಚಿ ಅಭಿಪ್ರಾಯಪಟ್ಟರು.</p>.<p>ಸವಿತಾ ಸಮಾಜ ವಿವಿಧೋದ್ದೇಶ ಸೇವಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹುಣಸಗಿ ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಪಂ. ಪುಟ್ಟರಾಜ ಗವಾಯಿ ಅವರ 13ನೇ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.</p>.<p>‘ಪುಟ್ಟರಾಜರ ಗುರುಕುಲದಲ್ಲಿ ಸಾಕಷ್ಟು ಜನರು ತಮ್ಮ ಜೀವನ ಕಟ್ಟಿಕೊಳ್ಳುವ ಜೊತೆಗೆ ಸಂಗೀತದಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವುದಕ್ಕೆ ಗುರುಗಳ ಕುರುಣೆಯೇ ಕಾರಣ’ ಎಂದರು.</p>.<p>ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟಗಿರಿ ದೇಶಪಾಂಡೆ ಮಾತನಾಡಿ, ‘ನಾಲ್ಕು ಗೋಡೆಗಳ ಮಧ್ಯೆ ಇದ್ದ ಸಂಗೀತ ಹಾಗೂ ಕಲೆಯನ್ನು ವಿಶ್ವಮಟ್ಟದಲ್ಲಿ ಪಸರಿಸುವಂತೆ ಮಾಡಿದ ಕೀರ್ತಿ ಪಂ.ಪುಟ್ಟರಾಜ ಗವಾಯಿ ಅವರಿಗೆ ಸಲ್ಲುತ್ತದೆ’ ಎಂದರು.</p>.<p>‘ಸಂಗೀತ ಹಾಗೂ ಕಲಾ ಪ್ರಾಕಾರಗಳಿಗೆ ಪಂ. ಪುಟ್ಟರಾಜ ಗವಾಯಿಗಳ ಕೊಡುಗೆ ಅಪಾರವಾಗಿದೆ’ ಎಂದರು.</p>.<p>ಶಾಲೆಯ ಪ್ರಾಚಾರ್ಯ ಅಶೋಕ ನೀಲಗಾರ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಗುರುಪಾದಪ್ಪ ದಂಡಪ್ಪಗೌಡ್ರ ತಂಡದಿಂದ ಜನಪದ ಸಂಗೀತ, ಅಶೋಕ ತಂಡದಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಿತು.</p>.<p>ಕಲಾವಿದರಾದ ಈಶ್ವರ ಬಡಿಗೇರ, ಮಲ್ಲಯ್ಯಸ್ವಾಮಿ ವಡಗೇರಿ, ತಿಮ್ಮಪ್ಪಯ್ಯ ಗವಾಯಿ, ರವಿಕುಮಾರ ಬಂಟನೂರು, ಪ್ರವೀಣ ಪತ್ತಾರ, ಸಂಗನಗೌಡ ಧನರಡ್ಡಿ, ಮಡಿವಾಳಮ್ಮ, ಮಲ್ಲಮ್ಮ, ಮಲ್ಲಿಕಾರ್ಜುನ ಹಡಪದ ಇದ್ದರು.</p>.<p>ಯಲ್ಲಾಲಿಂಗ ಕಟ್ಟಿಮನಿ ಪ್ರಾರ್ಥಿಸಿದರು. ರಘುವೀರ ಬಡಿಗೇರ ಸ್ವಾಗತಿಸಿದರು. ರವಿಕುಮಾರ ಪತ್ತಾರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸಗಿ:</strong> ಪಂ.ಪುಟ್ಟರಾಜ ಗವಾಯಿ ಸಾವಿರಾರು ಅಂಧ, ಅನಾಥ ಮಕ್ಕಳಿಗೆ ಬೆಳಕಾಗಿ ಅವರ ಜೀವನಕ್ಕೆ ದಾರಿ ತೋರಿಸಿದ ಮಹಾ ಗುರು ಎಂದು ಚುಟುಕು ಸಾಹಿತಿ ಅಮರಯ್ಯಸ್ವಾಮಿ ಜಾಲಿಬೆಂಚಿ ಅಭಿಪ್ರಾಯಪಟ್ಟರು.</p>.<p>ಸವಿತಾ ಸಮಾಜ ವಿವಿಧೋದ್ದೇಶ ಸೇವಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹುಣಸಗಿ ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಪಂ. ಪುಟ್ಟರಾಜ ಗವಾಯಿ ಅವರ 13ನೇ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.</p>.<p>‘ಪುಟ್ಟರಾಜರ ಗುರುಕುಲದಲ್ಲಿ ಸಾಕಷ್ಟು ಜನರು ತಮ್ಮ ಜೀವನ ಕಟ್ಟಿಕೊಳ್ಳುವ ಜೊತೆಗೆ ಸಂಗೀತದಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವುದಕ್ಕೆ ಗುರುಗಳ ಕುರುಣೆಯೇ ಕಾರಣ’ ಎಂದರು.</p>.<p>ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟಗಿರಿ ದೇಶಪಾಂಡೆ ಮಾತನಾಡಿ, ‘ನಾಲ್ಕು ಗೋಡೆಗಳ ಮಧ್ಯೆ ಇದ್ದ ಸಂಗೀತ ಹಾಗೂ ಕಲೆಯನ್ನು ವಿಶ್ವಮಟ್ಟದಲ್ಲಿ ಪಸರಿಸುವಂತೆ ಮಾಡಿದ ಕೀರ್ತಿ ಪಂ.ಪುಟ್ಟರಾಜ ಗವಾಯಿ ಅವರಿಗೆ ಸಲ್ಲುತ್ತದೆ’ ಎಂದರು.</p>.<p>‘ಸಂಗೀತ ಹಾಗೂ ಕಲಾ ಪ್ರಾಕಾರಗಳಿಗೆ ಪಂ. ಪುಟ್ಟರಾಜ ಗವಾಯಿಗಳ ಕೊಡುಗೆ ಅಪಾರವಾಗಿದೆ’ ಎಂದರು.</p>.<p>ಶಾಲೆಯ ಪ್ರಾಚಾರ್ಯ ಅಶೋಕ ನೀಲಗಾರ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಗುರುಪಾದಪ್ಪ ದಂಡಪ್ಪಗೌಡ್ರ ತಂಡದಿಂದ ಜನಪದ ಸಂಗೀತ, ಅಶೋಕ ತಂಡದಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಿತು.</p>.<p>ಕಲಾವಿದರಾದ ಈಶ್ವರ ಬಡಿಗೇರ, ಮಲ್ಲಯ್ಯಸ್ವಾಮಿ ವಡಗೇರಿ, ತಿಮ್ಮಪ್ಪಯ್ಯ ಗವಾಯಿ, ರವಿಕುಮಾರ ಬಂಟನೂರು, ಪ್ರವೀಣ ಪತ್ತಾರ, ಸಂಗನಗೌಡ ಧನರಡ್ಡಿ, ಮಡಿವಾಳಮ್ಮ, ಮಲ್ಲಮ್ಮ, ಮಲ್ಲಿಕಾರ್ಜುನ ಹಡಪದ ಇದ್ದರು.</p>.<p>ಯಲ್ಲಾಲಿಂಗ ಕಟ್ಟಿಮನಿ ಪ್ರಾರ್ಥಿಸಿದರು. ರಘುವೀರ ಬಡಿಗೇರ ಸ್ವಾಗತಿಸಿದರು. ರವಿಕುಮಾರ ಪತ್ತಾರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>