<p><strong>ಸುರಪುರ</strong>: ಇಲ್ಲಿಯ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಬುಧವಾರ ಸ್ಪರ್ಶ ಕುಷ್ಠ ಅರಿವು ಆಂದೋಲನ ಕಾರ್ಯಕ್ರಮಕ್ಕೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಾಜಾ ವೆಂಕಪ್ಪನಾಯಕ ಚಾಲನೆ ನೀಡಿದರು.</p>.<p>‘ತಾಲ್ಲೂಕಿನಲ್ಲಿ ಜ.30ರಿಂದ ಫೆಬ್ರುವರಿ 13ರ ವರೆಗೆ ಪಾಕ್ಷಿಕ ಸ್ಪರ್ಶ ಕುಷ್ಠ ರೋಗ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ನಗರದ ಎಲ್ಲಾ ವಾರ್ಡ್ಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಕುಷ್ಠ ರೋಗದ ಅಭಿಯಾನ ನಡೆಯಲಿದೆ. ಕುಷ್ಠರೋಗ ನಿಯಂತ್ರಣಕ್ಕೆ ಸಹಭಾಗಿತ್ವದ ಅಗತ್ಯವಿದೆ’ ಎಂದು ಹೇಳಿದರು.</p>.<p>‘ಚರ್ಮದ ಮೇಲಿನ ಯಾವುದೇ ಗಂಟುಗಳು, ಕಣ್ಣಿನ ರೆಪ್ಪೆಗಳು ಮುಚ್ಚುವಲ್ಲಿ ತೊಂದರೆ, ಕೈ ಅಥವಾ ಕಾಲುಗಳಲ್ಲಿ ಬಹು ದಿನದ ಗಾಯ, ಬೆರಳುಗಳು ಮಡಿಚಿಕೊಂಡಿರುವುದು, ಜುಮ್ಮು ಎನಿಸುವಿಕೆ, ಮರಗಟ್ಟುವಿಕೆ, ನಡೆಯುವಾಗ ಕಾಲು ಎಳೆಯುವುದು, ಬಲಹೀನತೆ ಇವುಗಳು ಕುಷ್ಠ ರೋಗದ ಲಕ್ಷಣಗಳಾಗಿವೆ’ ಎಂದು ವಿವರಿಸಿದರು.</p>.<p>‘ಸಮಾಜದಲ್ಲಿ ಈ ರೋಗದ ಬಗ್ಗೆ ಬಹಳ ಕೀಳರಿಮೆ ಇರುತ್ತದೆ. ಆರೋಗ್ಯ ಇಲಾಖೆಯಿಂದ ಈ ರೋಗದ ಬಗ್ಗೆ ಜಾಗೃತಿ ಮೂಡಿಸಿ ಸೂಕ್ತ ಚಿಕಿತ್ಸೆ ನೀಡಲಾಗುತ್ತದೆ. ರೋಗ ಲಕ್ಷಣಗಳು ಕಂಡ ಪ್ರಾಥಮಿಕ ಹಂತದಲ್ಲೇ ಪತ್ತೆ ಹಚ್ಚಿ ಚಿಕಿತ್ಸೆ ಪಡೆದುಕೊಂಡರೆ ರೋಗಿಗಳು ಸಂಪೂರ್ಣ ಗುಣಮುಖರಾಗಬಹುದು’ ಎಂದರು.</p>.<p>ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಯಾ ಕೆ. ಪವಾರ್, ರಾಜಶೇಖರ, ಬಿಎಚ್ಇಒ ಮಲ್ಲಪ್ಪ ಇದ್ದರು. ಸುರೇಶ ಅವರು ಸ್ಪರ್ಶ ಕುಷ್ಠ ರೋಗದ ಅರಿವು ಆಂದೋಲನದ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ</strong>: ಇಲ್ಲಿಯ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಬುಧವಾರ ಸ್ಪರ್ಶ ಕುಷ್ಠ ಅರಿವು ಆಂದೋಲನ ಕಾರ್ಯಕ್ರಮಕ್ಕೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಾಜಾ ವೆಂಕಪ್ಪನಾಯಕ ಚಾಲನೆ ನೀಡಿದರು.</p>.<p>‘ತಾಲ್ಲೂಕಿನಲ್ಲಿ ಜ.30ರಿಂದ ಫೆಬ್ರುವರಿ 13ರ ವರೆಗೆ ಪಾಕ್ಷಿಕ ಸ್ಪರ್ಶ ಕುಷ್ಠ ರೋಗ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ನಗರದ ಎಲ್ಲಾ ವಾರ್ಡ್ಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಕುಷ್ಠ ರೋಗದ ಅಭಿಯಾನ ನಡೆಯಲಿದೆ. ಕುಷ್ಠರೋಗ ನಿಯಂತ್ರಣಕ್ಕೆ ಸಹಭಾಗಿತ್ವದ ಅಗತ್ಯವಿದೆ’ ಎಂದು ಹೇಳಿದರು.</p>.<p>‘ಚರ್ಮದ ಮೇಲಿನ ಯಾವುದೇ ಗಂಟುಗಳು, ಕಣ್ಣಿನ ರೆಪ್ಪೆಗಳು ಮುಚ್ಚುವಲ್ಲಿ ತೊಂದರೆ, ಕೈ ಅಥವಾ ಕಾಲುಗಳಲ್ಲಿ ಬಹು ದಿನದ ಗಾಯ, ಬೆರಳುಗಳು ಮಡಿಚಿಕೊಂಡಿರುವುದು, ಜುಮ್ಮು ಎನಿಸುವಿಕೆ, ಮರಗಟ್ಟುವಿಕೆ, ನಡೆಯುವಾಗ ಕಾಲು ಎಳೆಯುವುದು, ಬಲಹೀನತೆ ಇವುಗಳು ಕುಷ್ಠ ರೋಗದ ಲಕ್ಷಣಗಳಾಗಿವೆ’ ಎಂದು ವಿವರಿಸಿದರು.</p>.<p>‘ಸಮಾಜದಲ್ಲಿ ಈ ರೋಗದ ಬಗ್ಗೆ ಬಹಳ ಕೀಳರಿಮೆ ಇರುತ್ತದೆ. ಆರೋಗ್ಯ ಇಲಾಖೆಯಿಂದ ಈ ರೋಗದ ಬಗ್ಗೆ ಜಾಗೃತಿ ಮೂಡಿಸಿ ಸೂಕ್ತ ಚಿಕಿತ್ಸೆ ನೀಡಲಾಗುತ್ತದೆ. ರೋಗ ಲಕ್ಷಣಗಳು ಕಂಡ ಪ್ರಾಥಮಿಕ ಹಂತದಲ್ಲೇ ಪತ್ತೆ ಹಚ್ಚಿ ಚಿಕಿತ್ಸೆ ಪಡೆದುಕೊಂಡರೆ ರೋಗಿಗಳು ಸಂಪೂರ್ಣ ಗುಣಮುಖರಾಗಬಹುದು’ ಎಂದರು.</p>.<p>ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಯಾ ಕೆ. ಪವಾರ್, ರಾಜಶೇಖರ, ಬಿಎಚ್ಇಒ ಮಲ್ಲಪ್ಪ ಇದ್ದರು. ಸುರೇಶ ಅವರು ಸ್ಪರ್ಶ ಕುಷ್ಠ ರೋಗದ ಅರಿವು ಆಂದೋಲನದ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>