<p><strong>ಲಿಂಗಸುಗೂರು</strong>: ತಾಲ್ಲೂಕಿನ ಮಾವಿನಭಾವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುನಕುಂಟಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, ಕೊಡ ನೀರಿಗಾಗಿ ಜನ ಪರದಾಡುವಂತಾಗಿದೆ.</p><p>ವಿದ್ಯುತ್ ಕಣ್ಣಾ ಮುಚ್ಚಾಲೆಗೆ ಕಿರು ನೀರು ಸರಬರಾಜು ಯೋಜನೆಯಡಿ ನೀರು ಸಮರ್ಪಕವಾಗಿ ಪೂರೈಕೆ ಆಗುತ್ತಿಲ್ಲ. ಮಳೆಗಾಲ ಆರಂಭಗೊಂಡರೂ ಅಂತರ್ಜಲಮಟ್ಟ ಹೆಚ್ಚದ ಕಾರಣ ತೆರೆದ ಬಾವಿಗಳಲ್ಲಿ ನಿರೀಕ್ಷಿತ ಪ್ರಮಾಣದ ನೀರು ಸಿಗುತ್ತಿಲ್ಲ.</p><p>ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಕೋಟ್ಯಂತರ ಹಣ ಖರ್ಚು ಮಾಡಿದ್ದರೂ ಗ್ರಾಮಕ್ಕೆ ಕೊಡ ನೀರು ಪೂರೈಕೆ ಆಗಿಲ್ಲ. ಅವೈಜ್ಞಾನಿಕ ಕೆರೆ ನಿರ್ಮಾಣದಿಂದಾಗಿ ಕಲುಷಿತ ನೀರು ಸಂಗ್ರಹಗೊಳ್ಳುತ್ತಿದೆ. ಇದು ಗ್ರಾಮಸ್ಥರಿಗೆ ಶಾಪವಾಗಿ ಪರಿಣಮಿಸಿದೆ.</p><p>ವಿದ್ಯುತ್ ಸಂಪರ್ಕ ಇದ್ದರೆ ಮಾತ್ರ ಬಳಕೆಗೆ ನೀರು. ನಾಲ್ಕು ದಿನಗಳಿಂದ ವಿದ್ಯುತ್ ಕಣ್ಣಾ ಮುಚ್ಚಾಲೆಯಿಂದ ನೀರು ಪೂರೈಕೆ ವ್ಯತ್ಯಯಗೊಂಡಿದೆ. ಕುಡಿಯುವ ನೀರಿಗೆ ತೆರೆದ ಬಾವಿಗಳಿಗೆ ಹೋದರೆ ಅಂತರ್ಜಲಮಟ್ಟ ಕುಸಿತದಿಂದ ತಾಸಿಗೆ ಆರೇಳು ಕೊಡ ಮಾತ್ರ ದೊರಕುತ್ತದೆ. ದಿನಗಟ್ಟಲೆ ಕಾದು ನೀರು ತಂದುಕೊಳ್ಳುವಂತಾಗಿದೆ.</p><p>ನಿತ್ಯ ಚಕ್ಕಡಿ, ಆಟೊ, ಟಂಟಂ, ಒತ್ತುವ ಬಂಡಿ ಬಳಸಿ ಹೊರವಲಯದ ತೋಟಗಳಿಗೆ ತೆರಳಿ ನೀರು ತಂದುಕೊಳ್ಳಬೇಕು. ಪರ್ಯಾಯ ವ್ಯವಸ್ಥೆ ಮಾಡುವಂತೆ ತಾಲ್ಲೂಕು ಮತ್ತು ಜಿಲ್ಲಾಡಳಿತದ ಬಾಗಿಲು ತಟ್ಟಿದರೂ ಪ್ರಯೋಜನವಾಗುತ್ತಿಲ್ಲ ಎಂದು ಪ್ರತಿನಿಧಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>‘ಮಾವಿನಭಾವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುನಕುಂಟಿ ಗ್ರಾಮ ಮೂಲ ಸೌಕರ್ಯಗಳ ಕೊರತೆಯಿಂದ ಬಳಲುತ್ತಿದೆ. ಅಧಿಕಾರಿಗಳ ಮಲತಾಯಿ ಧೋರಣೆಯಿಂದ ಕುಡಿಯುವ ನೀರಿಗೂ ಪರಿತಪಿಸುತ್ತಿದ್ದೇವೆ’ ಎಂದು ದಲಿತ ಸಂಘರ್ಷ ಸಮಿತಿ ಸಂಚಾಲಕ ಸಂಜೀವಪ್ಪ ಚಲವಾದಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p><p>‘ಅಂತರ್ಜಲಮಟ್ಟ ಕುಸಿದು ನಾಲ್ಕು ತಿಂಗಳಿಂದ ನೀರಿನ ಸಮಸ್ಯೆ ಎದುರಿಸುತ್ತಿದ್ದೇವೆ. ಈ ಕುರಿತು ಗಮನಕ್ಕೆ ತಂದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಕೊಡ ನೀರಿಗೆ ತಾಸುಗಟ್ಟಲೆ ತೆರೆದ ಬಾವಿ ಮೇಲೆ ಕಾದು ಕುಳಿತುಕೊಳ್ಳಬೇಕು’ ಎಂದು ಗ್ರಾಮ ಪಂಚಾಯಿತಿ ಸದಸ್ಯರಾದ ಶರಣಗೌಡ ಪಾಟೀಲ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು</strong>: ತಾಲ್ಲೂಕಿನ ಮಾವಿನಭಾವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುನಕುಂಟಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, ಕೊಡ ನೀರಿಗಾಗಿ ಜನ ಪರದಾಡುವಂತಾಗಿದೆ.</p><p>ವಿದ್ಯುತ್ ಕಣ್ಣಾ ಮುಚ್ಚಾಲೆಗೆ ಕಿರು ನೀರು ಸರಬರಾಜು ಯೋಜನೆಯಡಿ ನೀರು ಸಮರ್ಪಕವಾಗಿ ಪೂರೈಕೆ ಆಗುತ್ತಿಲ್ಲ. ಮಳೆಗಾಲ ಆರಂಭಗೊಂಡರೂ ಅಂತರ್ಜಲಮಟ್ಟ ಹೆಚ್ಚದ ಕಾರಣ ತೆರೆದ ಬಾವಿಗಳಲ್ಲಿ ನಿರೀಕ್ಷಿತ ಪ್ರಮಾಣದ ನೀರು ಸಿಗುತ್ತಿಲ್ಲ.</p><p>ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಕೋಟ್ಯಂತರ ಹಣ ಖರ್ಚು ಮಾಡಿದ್ದರೂ ಗ್ರಾಮಕ್ಕೆ ಕೊಡ ನೀರು ಪೂರೈಕೆ ಆಗಿಲ್ಲ. ಅವೈಜ್ಞಾನಿಕ ಕೆರೆ ನಿರ್ಮಾಣದಿಂದಾಗಿ ಕಲುಷಿತ ನೀರು ಸಂಗ್ರಹಗೊಳ್ಳುತ್ತಿದೆ. ಇದು ಗ್ರಾಮಸ್ಥರಿಗೆ ಶಾಪವಾಗಿ ಪರಿಣಮಿಸಿದೆ.</p><p>ವಿದ್ಯುತ್ ಸಂಪರ್ಕ ಇದ್ದರೆ ಮಾತ್ರ ಬಳಕೆಗೆ ನೀರು. ನಾಲ್ಕು ದಿನಗಳಿಂದ ವಿದ್ಯುತ್ ಕಣ್ಣಾ ಮುಚ್ಚಾಲೆಯಿಂದ ನೀರು ಪೂರೈಕೆ ವ್ಯತ್ಯಯಗೊಂಡಿದೆ. ಕುಡಿಯುವ ನೀರಿಗೆ ತೆರೆದ ಬಾವಿಗಳಿಗೆ ಹೋದರೆ ಅಂತರ್ಜಲಮಟ್ಟ ಕುಸಿತದಿಂದ ತಾಸಿಗೆ ಆರೇಳು ಕೊಡ ಮಾತ್ರ ದೊರಕುತ್ತದೆ. ದಿನಗಟ್ಟಲೆ ಕಾದು ನೀರು ತಂದುಕೊಳ್ಳುವಂತಾಗಿದೆ.</p><p>ನಿತ್ಯ ಚಕ್ಕಡಿ, ಆಟೊ, ಟಂಟಂ, ಒತ್ತುವ ಬಂಡಿ ಬಳಸಿ ಹೊರವಲಯದ ತೋಟಗಳಿಗೆ ತೆರಳಿ ನೀರು ತಂದುಕೊಳ್ಳಬೇಕು. ಪರ್ಯಾಯ ವ್ಯವಸ್ಥೆ ಮಾಡುವಂತೆ ತಾಲ್ಲೂಕು ಮತ್ತು ಜಿಲ್ಲಾಡಳಿತದ ಬಾಗಿಲು ತಟ್ಟಿದರೂ ಪ್ರಯೋಜನವಾಗುತ್ತಿಲ್ಲ ಎಂದು ಪ್ರತಿನಿಧಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>‘ಮಾವಿನಭಾವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುನಕುಂಟಿ ಗ್ರಾಮ ಮೂಲ ಸೌಕರ್ಯಗಳ ಕೊರತೆಯಿಂದ ಬಳಲುತ್ತಿದೆ. ಅಧಿಕಾರಿಗಳ ಮಲತಾಯಿ ಧೋರಣೆಯಿಂದ ಕುಡಿಯುವ ನೀರಿಗೂ ಪರಿತಪಿಸುತ್ತಿದ್ದೇವೆ’ ಎಂದು ದಲಿತ ಸಂಘರ್ಷ ಸಮಿತಿ ಸಂಚಾಲಕ ಸಂಜೀವಪ್ಪ ಚಲವಾದಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p><p>‘ಅಂತರ್ಜಲಮಟ್ಟ ಕುಸಿದು ನಾಲ್ಕು ತಿಂಗಳಿಂದ ನೀರಿನ ಸಮಸ್ಯೆ ಎದುರಿಸುತ್ತಿದ್ದೇವೆ. ಈ ಕುರಿತು ಗಮನಕ್ಕೆ ತಂದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಕೊಡ ನೀರಿಗೆ ತಾಸುಗಟ್ಟಲೆ ತೆರೆದ ಬಾವಿ ಮೇಲೆ ಕಾದು ಕುಳಿತುಕೊಳ್ಳಬೇಕು’ ಎಂದು ಗ್ರಾಮ ಪಂಚಾಯಿತಿ ಸದಸ್ಯರಾದ ಶರಣಗೌಡ ಪಾಟೀಲ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>