<p><strong>ಹುಣಸಗಿ:</strong> ‘ಕಳೆದ ಎರಡು ದಿನಗಳಿಂದ ತಾಲ್ಲೂಕಿನ ಹಳ್ಳಿಗಳ ವ್ಯಾಪ್ತಿಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜಲ ಮೂಲಗಳಿಗೆ ಜೀವಕಳೆ ಬಂದಂತಾಗಿದೆ.<br><br> ಕಳೆದ ಮೂರು ತಿಂಗಳಿನಿಂದಲೂ ಬಿಸಿಲಿನ ಪ್ರಖರತೆಯಿಂದಾಗಿ ಬತ್ತಿ ಹೋಗಿದ್ದ ಹಳ್ಳಗಳಿಗೆ ಈ ಮಳೆ ಕಳೆ ತಂದಿದ್ದು, ಗ್ರಾಮೀಣ ಭಾಗದ ದನಕರುಗಳಿಗೆ ಆಸರೆಯಾಗಿದೆ.<br><br> ತಾಲ್ಲೂಕಿನ ವಜ್ಜಲ ಕಲ್ಲದೇವನಹಳ್ಳಿ, ಹೆಬ್ಬಾಳ ಭಾಗದಲ್ಲಿ ಮಳೆಯಾಗಿದ್ದರಿಂದಾಗಿ ಹುಣಸಗಿ ದೇವಪುರ ಹಿರೇಹಳ್ಳ ತುಂಬಿ ಹರಿಯುತ್ತಿದೆ. ಇದರಿಂದಾಗಿ ಹೆಬ್ಬಾಳ.ಕೆ ಗ್ರಾಮದ ಬಳಿ ರಸ್ತೆ ಮಾರ್ಗದ ಸೇತುವೆ ಮೇಲೆ ನೀರು ನುಗ್ದಿದ್ದು, ಕೆಲ ಕಾಲ ಸಂಚಾರ ಸ್ಥಗಿತವಾಗಿತ್ತು.<br><br>‘ಹಳ್ಳದ ಬದಿಯಲ್ಲಿ ಅಳವಡಿಸಲಾಗಿದ್ದ, ಕೃಷಿ ಪಂಪ್ಸೆಟ್ ಮೊಟಾರುಗಳು ನೀರಿನಲ್ಲಿ ಮುಳುಗಿದ್ದು, ಹಳ್ಳದ ಪಕ್ಕದಲ್ಲಿರುವ ಭತ್ತದ ಗದ್ದೆಗಳಿಗೆ ನೀರು ನುಗ್ಗಿವೆ’ ಎಂದು ಗ್ರಾಮದ ನಿಂಗು ಪಾಟೀಲ ತಿಳಿಸಿದರು.<br><br>ಮಳೆಯಾಶ್ರಿತ ಪ್ರದೇಶದ ಗ್ರಾಮಗಳಾದ ಬರದೇವನಾಳ, ಬಪ್ಪರಗಿ, ಹೊರಟ್ಟಿ, ಮದಲಿಂಗನಾಳ, ಶ್ರೀನಿವಾಸಪುರ, ಗುಂಡಲಗೇರಾ, ಅಮಲಿಹಾಳ, ಕರಿಬಾವಿ, ಮತ್ತಿತರ ಗ್ರಾಮಗಲ್ಲಿರುವ ರೈತರು ತಮ್ಮ ಕೃಷಿ ಚಟುವಟಿಗಕೆಗಳಲ್ಲಿ ತೊಡಗಿಕೊಂಡಿದ್ದಾರೆ.<br><br> ಈಗಾಗಲೇ ಬಹುತೇಕ ರೈತರು ಮುಂಗಾರು ಬಿತ್ತನೆಗೆ ಸಿದ್ಧತೆ ಮಾಡಿಕೊಂಡಿದ್ದರು. ಸಕಾಲಕ್ಕೆ ಮಳೆಯಾಗಿದ್ದರಿಂದಾಗಿ ತೊಗರಿ ಹಾಗೂ ಹತ್ತಿ ಬಿತ್ತನೆಯಲ್ಲಿ ಮುಂದಾಗಿರುವುದಾಗಿ ಗುಂಡಲಗೇರಾ ಗ್ರಾಮದ ರೈತ ಶಾಂತಗೌಡ ಕವಿತಾಳ ಹಾಗೂ ಮಂಜಲಾಪುರ ಹಳ್ಳಿ ಗ್ರಾಮದ ರೈತ ಪರಮಣ್ಣ ನೀಲಗಲ್ಲ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸಗಿ:</strong> ‘ಕಳೆದ ಎರಡು ದಿನಗಳಿಂದ ತಾಲ್ಲೂಕಿನ ಹಳ್ಳಿಗಳ ವ್ಯಾಪ್ತಿಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜಲ ಮೂಲಗಳಿಗೆ ಜೀವಕಳೆ ಬಂದಂತಾಗಿದೆ.<br><br> ಕಳೆದ ಮೂರು ತಿಂಗಳಿನಿಂದಲೂ ಬಿಸಿಲಿನ ಪ್ರಖರತೆಯಿಂದಾಗಿ ಬತ್ತಿ ಹೋಗಿದ್ದ ಹಳ್ಳಗಳಿಗೆ ಈ ಮಳೆ ಕಳೆ ತಂದಿದ್ದು, ಗ್ರಾಮೀಣ ಭಾಗದ ದನಕರುಗಳಿಗೆ ಆಸರೆಯಾಗಿದೆ.<br><br> ತಾಲ್ಲೂಕಿನ ವಜ್ಜಲ ಕಲ್ಲದೇವನಹಳ್ಳಿ, ಹೆಬ್ಬಾಳ ಭಾಗದಲ್ಲಿ ಮಳೆಯಾಗಿದ್ದರಿಂದಾಗಿ ಹುಣಸಗಿ ದೇವಪುರ ಹಿರೇಹಳ್ಳ ತುಂಬಿ ಹರಿಯುತ್ತಿದೆ. ಇದರಿಂದಾಗಿ ಹೆಬ್ಬಾಳ.ಕೆ ಗ್ರಾಮದ ಬಳಿ ರಸ್ತೆ ಮಾರ್ಗದ ಸೇತುವೆ ಮೇಲೆ ನೀರು ನುಗ್ದಿದ್ದು, ಕೆಲ ಕಾಲ ಸಂಚಾರ ಸ್ಥಗಿತವಾಗಿತ್ತು.<br><br>‘ಹಳ್ಳದ ಬದಿಯಲ್ಲಿ ಅಳವಡಿಸಲಾಗಿದ್ದ, ಕೃಷಿ ಪಂಪ್ಸೆಟ್ ಮೊಟಾರುಗಳು ನೀರಿನಲ್ಲಿ ಮುಳುಗಿದ್ದು, ಹಳ್ಳದ ಪಕ್ಕದಲ್ಲಿರುವ ಭತ್ತದ ಗದ್ದೆಗಳಿಗೆ ನೀರು ನುಗ್ಗಿವೆ’ ಎಂದು ಗ್ರಾಮದ ನಿಂಗು ಪಾಟೀಲ ತಿಳಿಸಿದರು.<br><br>ಮಳೆಯಾಶ್ರಿತ ಪ್ರದೇಶದ ಗ್ರಾಮಗಳಾದ ಬರದೇವನಾಳ, ಬಪ್ಪರಗಿ, ಹೊರಟ್ಟಿ, ಮದಲಿಂಗನಾಳ, ಶ್ರೀನಿವಾಸಪುರ, ಗುಂಡಲಗೇರಾ, ಅಮಲಿಹಾಳ, ಕರಿಬಾವಿ, ಮತ್ತಿತರ ಗ್ರಾಮಗಲ್ಲಿರುವ ರೈತರು ತಮ್ಮ ಕೃಷಿ ಚಟುವಟಿಗಕೆಗಳಲ್ಲಿ ತೊಡಗಿಕೊಂಡಿದ್ದಾರೆ.<br><br> ಈಗಾಗಲೇ ಬಹುತೇಕ ರೈತರು ಮುಂಗಾರು ಬಿತ್ತನೆಗೆ ಸಿದ್ಧತೆ ಮಾಡಿಕೊಂಡಿದ್ದರು. ಸಕಾಲಕ್ಕೆ ಮಳೆಯಾಗಿದ್ದರಿಂದಾಗಿ ತೊಗರಿ ಹಾಗೂ ಹತ್ತಿ ಬಿತ್ತನೆಯಲ್ಲಿ ಮುಂದಾಗಿರುವುದಾಗಿ ಗುಂಡಲಗೇರಾ ಗ್ರಾಮದ ರೈತ ಶಾಂತಗೌಡ ಕವಿತಾಳ ಹಾಗೂ ಮಂಜಲಾಪುರ ಹಳ್ಳಿ ಗ್ರಾಮದ ರೈತ ಪರಮಣ್ಣ ನೀಲಗಲ್ಲ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>