<p><strong>ಸೈದಾಪುರ</strong>: ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಕೂಡ್ಲೂರು ಗ್ರಾಮದಲ್ಲಿ ನಡೆದಿದ್ದ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.</p>.<p>ಆರೋಪಿಯಿಂದ ₹1.10 ಲಕ್ಷ ನಗದು ಜಪ್ತಿ ಮಾಡಿದ್ದಾರೆ.</p>.<p>ಏನಿದು ಪ್ರಕರಣ?: ಗ್ರಾಮದ ರೈತ ಮಲ್ಲಿಕಾರ್ಜುನ ದಾನವೋರ ಅವರು ಜಮೀನಿನಲ್ಲಿ ಬೆಳೆದ ಹತ್ತಿ ಮಾರಾಟ ಮಾಡಿದ್ದರು. ಅದರಿಂದ ಬಂದ ₹1.10 ಲಕ್ಷವನ್ನು ಮನೆಯ ಪೆಟ್ಟಿಗೆಯಲ್ಲಿಟ್ಟಿದ್ದರು. ಡಿ.27 ರಿಂದ ಜ.1ರ ಅವಧಿಯಲ್ಲಿ ಆ ಹಣ ಕಳವು ಮಾಡಲಾಗಿತ್ತು. </p>.<p>ಹಣ ಪತ್ತೆ ಮಾಡಿಕೊಡಬೇಕು ಮತ್ತು ಕಳವು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಮಲ್ಲಿಕಾರ್ಜುನ ಅವರು ಗುರುವಾರ (ಜ.4) ಇಲ್ಲಿನ ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅವರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.</p>.<p>ಜ.4 ರಂದು ತಿಮ್ಮಪ್ಪ ಲೋಹಿತ್ಕುಮಾರ ಅಂಗಡಿ (19) ಎನ್ನುವಾತನನ್ನು ವಿಚಾರಣೆಗೊಳಪಡಿಸಿದಾಗ ಹಣ ಕಳವು ಮಾಡಿದ ಕುರಿತು ತಿಳಿಸಿದ್ದಾನೆ. ನಂತರ ಆರೋಪಿಯ ಮನೆಗೆ ತೆರಳಿ ಹಣ ಜಪ್ತಿ ಮಾಡಿಕೊಂಡಿದ್ದಾರೆ.</p>.<p>ಡಿಎಸ್ಪಿ ಅವರ ಮಾರ್ಗದರ್ಶನದಲ್ಲಿ ಮತ್ತು ಸೈದಾಪುರ ಠಾಣೆಯ ಪಿಐ ವಿನಾಯಕ ಅವರ ನೇತೃತ್ವದಲ್ಲಿ ಪಿಎಸ್ಐ ಅಲ್ಲಾಭಕ್ಷ, ರಾಮುಲು, ಎಎಸ್ಐ ಭೀಮರೆಡ್ಡಿ, ಎಚ್ಸಿ ಮೋಹನರೆಡ್ಡಿ, ಬಸಪ್ಪ ಕುಂಬಾರ, ತಿಪ್ಪಣ್ಣ, ಸಾಬರೆಡ್ಡಿ, ಮಪಿಸಿ ಅನ್ನಪೂರ್ಣ ಅವರ ತಂಡ ಕಾರ್ಯಾಚರಣೆ ನಡೆಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೈದಾಪುರ</strong>: ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಕೂಡ್ಲೂರು ಗ್ರಾಮದಲ್ಲಿ ನಡೆದಿದ್ದ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.</p>.<p>ಆರೋಪಿಯಿಂದ ₹1.10 ಲಕ್ಷ ನಗದು ಜಪ್ತಿ ಮಾಡಿದ್ದಾರೆ.</p>.<p>ಏನಿದು ಪ್ರಕರಣ?: ಗ್ರಾಮದ ರೈತ ಮಲ್ಲಿಕಾರ್ಜುನ ದಾನವೋರ ಅವರು ಜಮೀನಿನಲ್ಲಿ ಬೆಳೆದ ಹತ್ತಿ ಮಾರಾಟ ಮಾಡಿದ್ದರು. ಅದರಿಂದ ಬಂದ ₹1.10 ಲಕ್ಷವನ್ನು ಮನೆಯ ಪೆಟ್ಟಿಗೆಯಲ್ಲಿಟ್ಟಿದ್ದರು. ಡಿ.27 ರಿಂದ ಜ.1ರ ಅವಧಿಯಲ್ಲಿ ಆ ಹಣ ಕಳವು ಮಾಡಲಾಗಿತ್ತು. </p>.<p>ಹಣ ಪತ್ತೆ ಮಾಡಿಕೊಡಬೇಕು ಮತ್ತು ಕಳವು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಮಲ್ಲಿಕಾರ್ಜುನ ಅವರು ಗುರುವಾರ (ಜ.4) ಇಲ್ಲಿನ ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅವರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.</p>.<p>ಜ.4 ರಂದು ತಿಮ್ಮಪ್ಪ ಲೋಹಿತ್ಕುಮಾರ ಅಂಗಡಿ (19) ಎನ್ನುವಾತನನ್ನು ವಿಚಾರಣೆಗೊಳಪಡಿಸಿದಾಗ ಹಣ ಕಳವು ಮಾಡಿದ ಕುರಿತು ತಿಳಿಸಿದ್ದಾನೆ. ನಂತರ ಆರೋಪಿಯ ಮನೆಗೆ ತೆರಳಿ ಹಣ ಜಪ್ತಿ ಮಾಡಿಕೊಂಡಿದ್ದಾರೆ.</p>.<p>ಡಿಎಸ್ಪಿ ಅವರ ಮಾರ್ಗದರ್ಶನದಲ್ಲಿ ಮತ್ತು ಸೈದಾಪುರ ಠಾಣೆಯ ಪಿಐ ವಿನಾಯಕ ಅವರ ನೇತೃತ್ವದಲ್ಲಿ ಪಿಎಸ್ಐ ಅಲ್ಲಾಭಕ್ಷ, ರಾಮುಲು, ಎಎಸ್ಐ ಭೀಮರೆಡ್ಡಿ, ಎಚ್ಸಿ ಮೋಹನರೆಡ್ಡಿ, ಬಸಪ್ಪ ಕುಂಬಾರ, ತಿಪ್ಪಣ್ಣ, ಸಾಬರೆಡ್ಡಿ, ಮಪಿಸಿ ಅನ್ನಪೂರ್ಣ ಅವರ ತಂಡ ಕಾರ್ಯಾಚರಣೆ ನಡೆಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>