<p>ಹುಣಸಗಿ: ‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವತಿಯಿಂದ ರಾಜ್ಯದ ಹಿಂದುಳಿದವರು ಹಾಗೂ ಮಹಿಳಾ ಸ್ವಾವಲಂಭನೆಗೆ ವಿಶೇಷ ಆದ್ಯತೆ ನೀಡುವ ಮೂಲಕ ಸಮಾಜಮುಖಿ ಕಾರ್ಯಕ್ರಮಗಳನ್ನು ರೂಪಿಸುತ್ತಿರುವುದು ಹೆಮ್ಮೆಯ ಸಂಗತಿ’ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಸಿ.ಪಾಟೀಲ ಹೇಳಿದರು.</p>.<p>ಹುಣಸಗಿ ತಾಲ್ಲೂಕಿನ ರಾಜನಕೋಳೂರು ಗ್ರಾಮದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ಹೊಲಿಗೆ ತರಬೇತಿ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>ನಮ್ಮ ಭಾಗದ ಗ್ರಾಮೀಣ ಮಹಿಳೆಯರನ್ನು ಗುರುತಿಸಿ ಸ್ವಾವಲಂಬನೆ ಜೀವನ ನಡೆಸಲು ಹಾಗೂ ಕುಟುಂಬಕ್ಕೆ ಆರ್ಥಿಕವಾಗಿ ಅನುಕೂಲ ಆಗುವಂತೆ ಹೊಲಿಗೆ ತರಬೇತಿ ನೀಡುವ ಮೂಲಕ ಹಲವು ಕುಟುಂಬಗಳಿಗೆ ಅನುಕೂಲ ಮಾಡಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು.</p>.<p>ವೈದ್ಯ ಮೋಹನ ಕೋರಿ ಮಾತನಾಡಿ, ಕುಟುಂಬ ನಿರ್ವಹಣೆಯಲಿ ಮಹಿಳೆಯರ ಪಾತ್ರ ಅತ್ಯಂತ ಪ್ರಮುಖವಾದ್ದು.ಈ ನಿಟ್ಟಿನಲ್ಲಿ ಅವರಿಗೆ ಇನ್ನೂ ಹೆಚ್ಚಿನ ಅನುಕೂಲ ಒದಗಿಸಿರುವುದು ಒಳ್ಳೆಯದು ಎಂದರು.</p>.<p>ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ಕಮಲಾಕ್ಷ ಮಾತನಾಡಿ, ಸಮಾಜದಲ್ಲಿ ಸಮಾನತೆ ಮತ್ತು ಮಹಿಳಾ ಸಬಲೀಕರಣಕ್ಕೆ ಪೂರಕವಾಗಿ ಹೇಮಾವತಿ.ವಿ.ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಹಲವು ಸಮಾಜಮುಖಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.</p>.<p>ಹಿರಿಯರಾದ ಸಂಗನಗೌಡ ಮಾಗನೂರ, ಸೋಮನಗೌಡ ಗುಳಬಾಳ, ಗುರುದೇವಿ ಹಿರೇಮಠ, ತಾಲ್ಲೂಕು ಯೋಜನಾಧಿಕಾರಿ ಸಂತೋಷ್ ಮಾತನಾಡಿದರು. ಬಾಹುಬಲಿ, ಅನಿತಾ ನಿರೂಪಿಸಿದರು. ಸೇವಾ ಪ್ರತಿನಿಧಿ ಸಂಗಮ್ಮ ಸ್ವಾಗತಿಸಿದರು. ಕೃಷ್ಣವೇಣಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಣಸಗಿ: ‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವತಿಯಿಂದ ರಾಜ್ಯದ ಹಿಂದುಳಿದವರು ಹಾಗೂ ಮಹಿಳಾ ಸ್ವಾವಲಂಭನೆಗೆ ವಿಶೇಷ ಆದ್ಯತೆ ನೀಡುವ ಮೂಲಕ ಸಮಾಜಮುಖಿ ಕಾರ್ಯಕ್ರಮಗಳನ್ನು ರೂಪಿಸುತ್ತಿರುವುದು ಹೆಮ್ಮೆಯ ಸಂಗತಿ’ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಸಿ.ಪಾಟೀಲ ಹೇಳಿದರು.</p>.<p>ಹುಣಸಗಿ ತಾಲ್ಲೂಕಿನ ರಾಜನಕೋಳೂರು ಗ್ರಾಮದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ಹೊಲಿಗೆ ತರಬೇತಿ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>ನಮ್ಮ ಭಾಗದ ಗ್ರಾಮೀಣ ಮಹಿಳೆಯರನ್ನು ಗುರುತಿಸಿ ಸ್ವಾವಲಂಬನೆ ಜೀವನ ನಡೆಸಲು ಹಾಗೂ ಕುಟುಂಬಕ್ಕೆ ಆರ್ಥಿಕವಾಗಿ ಅನುಕೂಲ ಆಗುವಂತೆ ಹೊಲಿಗೆ ತರಬೇತಿ ನೀಡುವ ಮೂಲಕ ಹಲವು ಕುಟುಂಬಗಳಿಗೆ ಅನುಕೂಲ ಮಾಡಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು.</p>.<p>ವೈದ್ಯ ಮೋಹನ ಕೋರಿ ಮಾತನಾಡಿ, ಕುಟುಂಬ ನಿರ್ವಹಣೆಯಲಿ ಮಹಿಳೆಯರ ಪಾತ್ರ ಅತ್ಯಂತ ಪ್ರಮುಖವಾದ್ದು.ಈ ನಿಟ್ಟಿನಲ್ಲಿ ಅವರಿಗೆ ಇನ್ನೂ ಹೆಚ್ಚಿನ ಅನುಕೂಲ ಒದಗಿಸಿರುವುದು ಒಳ್ಳೆಯದು ಎಂದರು.</p>.<p>ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ಕಮಲಾಕ್ಷ ಮಾತನಾಡಿ, ಸಮಾಜದಲ್ಲಿ ಸಮಾನತೆ ಮತ್ತು ಮಹಿಳಾ ಸಬಲೀಕರಣಕ್ಕೆ ಪೂರಕವಾಗಿ ಹೇಮಾವತಿ.ವಿ.ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಹಲವು ಸಮಾಜಮುಖಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.</p>.<p>ಹಿರಿಯರಾದ ಸಂಗನಗೌಡ ಮಾಗನೂರ, ಸೋಮನಗೌಡ ಗುಳಬಾಳ, ಗುರುದೇವಿ ಹಿರೇಮಠ, ತಾಲ್ಲೂಕು ಯೋಜನಾಧಿಕಾರಿ ಸಂತೋಷ್ ಮಾತನಾಡಿದರು. ಬಾಹುಬಲಿ, ಅನಿತಾ ನಿರೂಪಿಸಿದರು. ಸೇವಾ ಪ್ರತಿನಿಧಿ ಸಂಗಮ್ಮ ಸ್ವಾಗತಿಸಿದರು. ಕೃಷ್ಣವೇಣಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>