<p><strong>ಸುರಪುರ:</strong> ‘ರಾಜನಹಳ್ಳಿಯಲ್ಲಿ ನಡೆಯುವ ವಾಲ್ಮೀಕಿ ಜಾತ್ರೆಯಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಜಾತ್ರೆಯಿಂದ ಸಮಾಜದ ಸಂಘಟನೆ ಸಾಧ್ಯವಾಗುತ್ತದೆ’ ಎಂದು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದರು.</p>.<p>ನಗರದ ಗರುಡಾದ್ರಿ ಕಲಾ ಮಂದಿರದಲ್ಲಿ ಬುಧವಾರ ನಡೆದ ಜಾತ್ರೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಜಾತ್ರೆಯಲ್ಲಿ ಸಮಾಜದ ಸಚಿವರು, ಅಧಿಕಾರಿಗಳು, ಮುಖಂಡರು ಭಾಗವಹಿಸುವುದರಿಂದ ನಮ್ಮ ಬೇಡಿಕೆಗಳಿಗೆ ಸ್ಪಂದನೆ ಸಿಗುತ್ತದೆ. ಸಮಾಜವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಸಹಕಾರಿಯಾಗುತ್ತದೆ’ ಎಂದರು.</p>.<p>ಜಾತ್ರಾ ಸಮಿತಿಗೆ ಸುರಪುರ ತಾಲ್ಲೂಕು ಘಟಕದ ಅಧ್ಯಕ್ಷರನ್ನಾಗಿ ಅಯ್ಯಣ್ಣ ಹಾಲಭಾವಿ ಅವರನ್ನು ಆಯ್ಕೆ ಮಾಡಿ ಅವರನ್ನು ಸನ್ಮಾನಿಸಲಾಯಿತು.</p>.<p>ಆರ್ಚರಿಯಲ್ಲಿ ಸಾಧನೆ ಮಾಡಿದ ಸಮಾಜದ ಕ್ರೀಡಾಪಟುಗಳನ್ನು ಗೌರವಿಸಲಾಯಿತು. ತಾಲ್ಲೂಕಿನ ಕಕ್ಕೇರಾದಲ್ಲಿ ಡಿ.10ರಂದು ಏರ್ಪಡಿಸಿರುವ ವಾಲ್ಮೀಕಿ ಮೂರ್ತಿ ಅನಾವರಣ ಕಾರ್ಯಕ್ರಮದ ಪೋಸ್ಟರ್ಗಳನ್ನು ಬಿಡುಗಡೆ ಮಾಡಲಾಯಿತು.</p>.<p>ಮುಖಂಡರಾದ ರಾಜಾ ಮುಕುಂದನಾಯಕ, ರಾಜಾ ಪಿಡ್ಡನಾಯಕ ತಾತಾ, ಗಂಗಾಧರನಾಯಕ ತಿಂಥಣಿ, ರಮೇಶ ದೊರೆ ಆಲ್ದಾಳ, ವೆಂಕಟೇಶ ಬೇಟೆಗಾರ, ಅನೀಲ ಇಟ್ಟಂಗಿ, ಚಂದ್ರಶೇಖರ ಬಿಚಗತ್ತಗೇರಿ, ಭೀಮನಗೌಡ ಹೆಮನೂರ, ಶ್ರೀಧರನಾಯಕ, ಶರಣುನಾಯಕ ಭೈರಿಮರಡಿ, ಭೀಮಣ್ಣ ಮಿಲ್ಟ್ರಿ, ವೆಂಕಟೇಶ ಗುಡ್ಡಕಾಯಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ:</strong> ‘ರಾಜನಹಳ್ಳಿಯಲ್ಲಿ ನಡೆಯುವ ವಾಲ್ಮೀಕಿ ಜಾತ್ರೆಯಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಜಾತ್ರೆಯಿಂದ ಸಮಾಜದ ಸಂಘಟನೆ ಸಾಧ್ಯವಾಗುತ್ತದೆ’ ಎಂದು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದರು.</p>.<p>ನಗರದ ಗರುಡಾದ್ರಿ ಕಲಾ ಮಂದಿರದಲ್ಲಿ ಬುಧವಾರ ನಡೆದ ಜಾತ್ರೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಜಾತ್ರೆಯಲ್ಲಿ ಸಮಾಜದ ಸಚಿವರು, ಅಧಿಕಾರಿಗಳು, ಮುಖಂಡರು ಭಾಗವಹಿಸುವುದರಿಂದ ನಮ್ಮ ಬೇಡಿಕೆಗಳಿಗೆ ಸ್ಪಂದನೆ ಸಿಗುತ್ತದೆ. ಸಮಾಜವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಸಹಕಾರಿಯಾಗುತ್ತದೆ’ ಎಂದರು.</p>.<p>ಜಾತ್ರಾ ಸಮಿತಿಗೆ ಸುರಪುರ ತಾಲ್ಲೂಕು ಘಟಕದ ಅಧ್ಯಕ್ಷರನ್ನಾಗಿ ಅಯ್ಯಣ್ಣ ಹಾಲಭಾವಿ ಅವರನ್ನು ಆಯ್ಕೆ ಮಾಡಿ ಅವರನ್ನು ಸನ್ಮಾನಿಸಲಾಯಿತು.</p>.<p>ಆರ್ಚರಿಯಲ್ಲಿ ಸಾಧನೆ ಮಾಡಿದ ಸಮಾಜದ ಕ್ರೀಡಾಪಟುಗಳನ್ನು ಗೌರವಿಸಲಾಯಿತು. ತಾಲ್ಲೂಕಿನ ಕಕ್ಕೇರಾದಲ್ಲಿ ಡಿ.10ರಂದು ಏರ್ಪಡಿಸಿರುವ ವಾಲ್ಮೀಕಿ ಮೂರ್ತಿ ಅನಾವರಣ ಕಾರ್ಯಕ್ರಮದ ಪೋಸ್ಟರ್ಗಳನ್ನು ಬಿಡುಗಡೆ ಮಾಡಲಾಯಿತು.</p>.<p>ಮುಖಂಡರಾದ ರಾಜಾ ಮುಕುಂದನಾಯಕ, ರಾಜಾ ಪಿಡ್ಡನಾಯಕ ತಾತಾ, ಗಂಗಾಧರನಾಯಕ ತಿಂಥಣಿ, ರಮೇಶ ದೊರೆ ಆಲ್ದಾಳ, ವೆಂಕಟೇಶ ಬೇಟೆಗಾರ, ಅನೀಲ ಇಟ್ಟಂಗಿ, ಚಂದ್ರಶೇಖರ ಬಿಚಗತ್ತಗೇರಿ, ಭೀಮನಗೌಡ ಹೆಮನೂರ, ಶ್ರೀಧರನಾಯಕ, ಶರಣುನಾಯಕ ಭೈರಿಮರಡಿ, ಭೀಮಣ್ಣ ಮಿಲ್ಟ್ರಿ, ವೆಂಕಟೇಶ ಗುಡ್ಡಕಾಯಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>