<p>ಕಳೆದೆರಡು ಲೋಕಸಭಾ ಚುನಾವಣೆಗಳಲ್ಲಿ ಮಧ್ಯಪ್ರದೇಶದ ರಾಜಗಢ ಕ್ಷೇತ್ರದಲ್ಲಿ ಗೆಲುವಿನ ಸಿಹಿ ಉಂಡಿದ್ದ ಬಿಜೆಪಿಯ ರೋಡ್ಮಲ್ ನಾಗರ್ ಅವರು ಈ ಬಾರಿಯೂ ಸ್ಪರ್ಧೆಗಿಳಿದಿದ್ದಾರೆ. ಇವರ ಗೆಲುವಿನ ಓಟಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಪಕ್ಷವು, ಹಿರಿಯ ಮುಖಂಡ ದಿಗ್ವಿಜಯ ಸಿಂಗ್ ಅವರನ್ನು ಅಖಾಡಕ್ಕಿಳಿಸಿದೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಸ್ಪರ್ಧೆಗಿಳಿದಿರುವುದರಿಂದ ಕಣವು ಇನ್ನಷ್ಟು ರಂಗೇರಿದೆ. ಸದ್ಯ ರಾಜ್ಯಸಭಾ ಸದಸ್ಯರಾಗಿರುವ ಅವರು ಈ ಬಾರಿ ಅದೃಷ್ಟ ಕೈಹಿಡಿಯಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ.</p><p> 2019ರ ಲೋಕಸಭಾ ಚುನಾವಣೆಯಲ್ಲಿ ಭೋಪಾಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ದಿಗ್ವಿಜಯ್ ಅವರನ್ನು ಬಿಜೆಪಿಯ ಪ್ರಗ್ಯಾಸಿಂಗ್ ಠಾಕೂರ್ ಅವರು ಸೋಲಿಸಿದ್ದರು. ಕಳೆದ ಚುನಾವಣೆಯಲ್ಲಿ ಬಿಜೆಪಿಯ ರೋಡ್ಮಲ್ ಅವರು 8,23,824 ಮತಗಳನ್ನು ಪಡೆದು ಭರ್ಜರಿ ಜಯ ತಮ್ಮದಾಗಿಸಿಕೊಂಡಿದ್ದರು. ಆರ್ಎಸ್ಎಸ್ ಪ್ರಭಾವವಿರುವ ಈ ಕ್ಷೇತ್ರದಲ್ಲಿ ರೋಡ್ಮಲ್ ಅವರು ಮೂರನೇ ಬಾರಿಯೂ ಜಯಗಳಿಸಲಿದ್ದಾರೆ ಎಂಬ ವಿಶ್ವಾಸ ಕಮಲ ಪಕ್ಷದ್ದು. 2009ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾರಾಯಣ ಸಿಂಗ್ ಅಮ್ಲಾಬೆ ಅವರು ಇಲ್ಲಿಂದ ಸಂಸತ್ಗೆ ಆಯ್ಕೆಯಾಗಿದ್ದರು. ನಂತರದ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಈ ಬಾರಿಯಾದರೂ ಕ್ಷೇತ್ರವನ್ನು ಮರಳಿ ತೆಕ್ಕೆಗೆ ಪಡೆಯಬೇಕೆಂದು ಕಾಂಗ್ರೆಸ್ ಕೂಡ ಶ್ರಮಿಸುತ್ತಿದೆ. ದಿಗ್ವಿಜಯ್ ಅವರು ಆರ್ಎಸ್ಎಸ್ ಮುಖಂಡರೊಬ್ಬರನ್ನು ಟೀಕಿಸಿ, ಫೇಸ್ಬುಕ್ ಪೋಸ್ಟ್ ಹಾಕಿದ್ದು ಕಳೆದ ವರ್ಷ ವಿವಾದಕ್ಕೆ ಕಾರಣವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಳೆದೆರಡು ಲೋಕಸಭಾ ಚುನಾವಣೆಗಳಲ್ಲಿ ಮಧ್ಯಪ್ರದೇಶದ ರಾಜಗಢ ಕ್ಷೇತ್ರದಲ್ಲಿ ಗೆಲುವಿನ ಸಿಹಿ ಉಂಡಿದ್ದ ಬಿಜೆಪಿಯ ರೋಡ್ಮಲ್ ನಾಗರ್ ಅವರು ಈ ಬಾರಿಯೂ ಸ್ಪರ್ಧೆಗಿಳಿದಿದ್ದಾರೆ. ಇವರ ಗೆಲುವಿನ ಓಟಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಪಕ್ಷವು, ಹಿರಿಯ ಮುಖಂಡ ದಿಗ್ವಿಜಯ ಸಿಂಗ್ ಅವರನ್ನು ಅಖಾಡಕ್ಕಿಳಿಸಿದೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಸ್ಪರ್ಧೆಗಿಳಿದಿರುವುದರಿಂದ ಕಣವು ಇನ್ನಷ್ಟು ರಂಗೇರಿದೆ. ಸದ್ಯ ರಾಜ್ಯಸಭಾ ಸದಸ್ಯರಾಗಿರುವ ಅವರು ಈ ಬಾರಿ ಅದೃಷ್ಟ ಕೈಹಿಡಿಯಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ.</p><p> 2019ರ ಲೋಕಸಭಾ ಚುನಾವಣೆಯಲ್ಲಿ ಭೋಪಾಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ದಿಗ್ವಿಜಯ್ ಅವರನ್ನು ಬಿಜೆಪಿಯ ಪ್ರಗ್ಯಾಸಿಂಗ್ ಠಾಕೂರ್ ಅವರು ಸೋಲಿಸಿದ್ದರು. ಕಳೆದ ಚುನಾವಣೆಯಲ್ಲಿ ಬಿಜೆಪಿಯ ರೋಡ್ಮಲ್ ಅವರು 8,23,824 ಮತಗಳನ್ನು ಪಡೆದು ಭರ್ಜರಿ ಜಯ ತಮ್ಮದಾಗಿಸಿಕೊಂಡಿದ್ದರು. ಆರ್ಎಸ್ಎಸ್ ಪ್ರಭಾವವಿರುವ ಈ ಕ್ಷೇತ್ರದಲ್ಲಿ ರೋಡ್ಮಲ್ ಅವರು ಮೂರನೇ ಬಾರಿಯೂ ಜಯಗಳಿಸಲಿದ್ದಾರೆ ಎಂಬ ವಿಶ್ವಾಸ ಕಮಲ ಪಕ್ಷದ್ದು. 2009ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾರಾಯಣ ಸಿಂಗ್ ಅಮ್ಲಾಬೆ ಅವರು ಇಲ್ಲಿಂದ ಸಂಸತ್ಗೆ ಆಯ್ಕೆಯಾಗಿದ್ದರು. ನಂತರದ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಈ ಬಾರಿಯಾದರೂ ಕ್ಷೇತ್ರವನ್ನು ಮರಳಿ ತೆಕ್ಕೆಗೆ ಪಡೆಯಬೇಕೆಂದು ಕಾಂಗ್ರೆಸ್ ಕೂಡ ಶ್ರಮಿಸುತ್ತಿದೆ. ದಿಗ್ವಿಜಯ್ ಅವರು ಆರ್ಎಸ್ಎಸ್ ಮುಖಂಡರೊಬ್ಬರನ್ನು ಟೀಕಿಸಿ, ಫೇಸ್ಬುಕ್ ಪೋಸ್ಟ್ ಹಾಕಿದ್ದು ಕಳೆದ ವರ್ಷ ವಿವಾದಕ್ಕೆ ಕಾರಣವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>