ಪಕ್ಷದ ಚುನಾವಣಾ ಕಾರ್ಯತಂತ್ರದ ಭಾಗವಾಗಿ ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶದ ರಾಯ್ಬರೇಲಿಯಿಂದ ಸ್ಪರ್ಧಿಸುತ್ತಿದ್ದಾರೆ. ಇದರಿಂದ ಬಿಜೆಪಿ ಮುಖಂಡರು ಭಯಗೊಂಡಿದ್ದಾರೆ. ರಾಹುಲ್ ಅವರು ಉತ್ತರ ಪ್ರದೇಶದಿಂದ ಮೂರು ಬಾರಿ ಮತ್ತು ಕೇರಳದಿಂದ ಒಮ್ಮೆ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಉತ್ತರದಲ್ಲಿ ಮತ್ತು ದಕ್ಷಿಣದಲ್ಲಿ ಸ್ಪರ್ಧಿಸಿ ಗೆಲ್ಲುವ ಸಾಮರ್ಥ್ಯ ಅವರಿಗಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒಡಿಶಾ, ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣ, ಕರ್ನಾಟಕದಿಂದ ಸ್ಪರ್ಧಿಸುವ ಧೈರ್ಯ ಇದೆಯೇ? ಈ ರಾಜ್ಯಗಳ ಜನರು ಭಾರತದವರಲ್ಲವೇ?