<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದ ಘಟಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಿರಣ್ಮಯ್ ಚಟ್ಟೋಪಾಧ್ಯಾಯ ಅವರು ತಮ್ಮ ಪ್ರಮಾಣ ಪತ್ರದಲ್ಲಿ ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿರುವ ಎಎಪಿ, ಅವರ ಉಮೇದುವಾರಿಕೆಯನ್ನು ರದ್ದುಪಡಿಸಬೇಕೆಂದು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.</p>.<p>ನಟ, ರಾಜಕಾರಣಿ ಚಟ್ಟೋಪಾಧ್ಯಾಯ ಅವರು ತಾವು ಖರಗ್ಪುರದ ಐಐಟಿಯಲ್ಲಿ ಸಂಶೋಧನಾ ವಿದ್ಯಾರ್ಥಿ ಎಂದು ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.</p>.<p>‘ಚಟ್ಟೋಪಾಧ್ಯಾಯ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ನೀಡಿರುವಂತೆ ಅವರು ಸಂಶೋಧನಾ ವಿದ್ಯಾರ್ಥಿಯಾಗಲಿ, ಬೋಧಕರಾಗಲಿ, ಸಂಶೋಧನಾ ಸಹಾಯಕರಾಗಲಿ, ವಿಜ್ಞಾನಿಯಾಗಲಿ ಅಲ್ಲ ಎನ್ನುವುದು ಆರ್ಟಿಐ ಅರ್ಜಿಯಿಂದ ಬಹಿರಂಗಗೊಂಡಿದೆ’ ಎಂದು ಎಎಪಿ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಲಾಗಿದೆ.</p>.<p>ಎಎಪಿಯ ಆರೋಪವನ್ನು ನಿರಾಕರಿಸಿರುವ ಚಟ್ಟೋಪಾಧ್ಯಾಯ, ‘ಇದು ಆಡಳಿತಾರೂಢ ಟಿಎಂಸಿಯ ಕುತಂತ್ರ’ ಎಂದು ಹೇಳಿದ್ದಾರೆ. ತನಗೆ ಅಪಖ್ಯಾತಿ ತರಲು ಯತ್ನಿಸಿದವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ತಿಳಿಸಿದ್ದಾರೆ.</p>.<p>ಎಎಪಿಯ ದೂರನ್ನು ಪರಿಶೀಲಿಸಲಾಗುತ್ತಿದ್ದು, ಅಗತ್ಯ ಕ್ರಮ ಜರುಗಿಸಲಾಗುವುದು ಎಂದು ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದ ಘಟಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಿರಣ್ಮಯ್ ಚಟ್ಟೋಪಾಧ್ಯಾಯ ಅವರು ತಮ್ಮ ಪ್ರಮಾಣ ಪತ್ರದಲ್ಲಿ ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿರುವ ಎಎಪಿ, ಅವರ ಉಮೇದುವಾರಿಕೆಯನ್ನು ರದ್ದುಪಡಿಸಬೇಕೆಂದು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.</p>.<p>ನಟ, ರಾಜಕಾರಣಿ ಚಟ್ಟೋಪಾಧ್ಯಾಯ ಅವರು ತಾವು ಖರಗ್ಪುರದ ಐಐಟಿಯಲ್ಲಿ ಸಂಶೋಧನಾ ವಿದ್ಯಾರ್ಥಿ ಎಂದು ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.</p>.<p>‘ಚಟ್ಟೋಪಾಧ್ಯಾಯ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ನೀಡಿರುವಂತೆ ಅವರು ಸಂಶೋಧನಾ ವಿದ್ಯಾರ್ಥಿಯಾಗಲಿ, ಬೋಧಕರಾಗಲಿ, ಸಂಶೋಧನಾ ಸಹಾಯಕರಾಗಲಿ, ವಿಜ್ಞಾನಿಯಾಗಲಿ ಅಲ್ಲ ಎನ್ನುವುದು ಆರ್ಟಿಐ ಅರ್ಜಿಯಿಂದ ಬಹಿರಂಗಗೊಂಡಿದೆ’ ಎಂದು ಎಎಪಿ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಲಾಗಿದೆ.</p>.<p>ಎಎಪಿಯ ಆರೋಪವನ್ನು ನಿರಾಕರಿಸಿರುವ ಚಟ್ಟೋಪಾಧ್ಯಾಯ, ‘ಇದು ಆಡಳಿತಾರೂಢ ಟಿಎಂಸಿಯ ಕುತಂತ್ರ’ ಎಂದು ಹೇಳಿದ್ದಾರೆ. ತನಗೆ ಅಪಖ್ಯಾತಿ ತರಲು ಯತ್ನಿಸಿದವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ತಿಳಿಸಿದ್ದಾರೆ.</p>.<p>ಎಎಪಿಯ ದೂರನ್ನು ಪರಿಶೀಲಿಸಲಾಗುತ್ತಿದ್ದು, ಅಗತ್ಯ ಕ್ರಮ ಜರುಗಿಸಲಾಗುವುದು ಎಂದು ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>