<p>ಅಹಮದಾಬಾದ್: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರರಾಗಿದ್ದ ರೋಹನ್ ಗುಪ್ತಾ ಅವರು ‘ಅವಮಾನ’ ಮತ್ತು ‘ಚಾರಿತ್ರ್ಯಹರಣ’ದ ಕಾರಣಕ್ಕೆ ಪಕ್ಷದ ಪ್ರಾಥಮಿಕ ಸದಸ್ಯತ್ವ ಮತ್ತು ಇತರ ಎಲ್ಲ ಹುದ್ದೆಗಳಿಗೆ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ. ಇದರಿಂದ ಲೋಕಸಭಾ ಚುನಾವಣೆಯ ಸಮಯದಲ್ಲಿ ಪಕ್ಷಕ್ಕೆ ಹಿನ್ನಡೆಯಾದಂತಾಗಿದೆ.</p>.<p>ಗುಪ್ತಾ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಬರೆದಿದ್ದು, ಅದನ್ನು ‘ಎಕ್ಸ್’ ವೇದಿಕೆಯಲ್ಲೂ ಹಂಚಿಕೊಂಡಿದ್ದಾರೆ.</p>.<p>ಕಾಂಗ್ರೆಸ್ ಪಕ್ಷವು ಗುಪ್ತಾ ಅವರನ್ನು ಅಹಮದಾಬಾದ್ ಪೂರ್ವ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಘೋಷಿಸಿತ್ತು. ಆದರೆ, ತಮ್ಮ ತಂದೆಯ ಅನಾರೋಗ್ಯದ ನೆಪವೊಡ್ಡಿ ಗುಪ್ತಾ ಕಣದಿಂದ ಹಿಂದೆ ಸರಿದಿದ್ದರು.</p>.<p>‘ಪಕ್ಷದ ಸಂವಹನ ವಿಭಾಗಕ್ಕೆ ಸಂಬಂಧಿಸಿದ ಹಿರಿಯ ನಾಯಕರೊಬ್ಬರಿಂದ ನಾನು ಕಳೆದ ಎರಡು ವರ್ಷದಿಂದ ನಿರಂತರ ಅವಮಾನ ಮತ್ತು ಚಾರಿತ್ರ್ಯಹರಣ ಅನುಭವಿಸಿದ್ದೇನೆ. ಅದೇ ಹೊತ್ತಿಗೆ ಖಾಸಗಿ ಬಿಕ್ಕಟ್ಟು ನನ್ನನ್ನು ರಾಜೀನಾಮೆ ನಿರ್ಧಾರ ತೆಗೆದುಕೊಳ್ಳಲು ಕಾರಣವಾಗಿದೆ’ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.</p>.<p>ರಾಜೀನಾಮೆ ನಿರ್ಧಾರವು ಅತ್ಯಂತ ಕಠಿಣವಾಗಿತ್ತು. ಆದರೆ, ತನ್ನ ಆತ್ಮಗೌರವ ಕಾಪಾಡಿಕೊಳ್ಳಲು ಅನಿವಾರ್ಯವಾಗಿತ್ತು ಎಂದು ಗುಪ್ತಾ ತಿಳಿಸಿದ್ದಾರೆ.</p>.<p>ರೋಹನ್ ಗುಪ್ತಾ ಅವರ ತಂದೆ ರಾಜ್ಕುಮಾರ್ ಗುಪ್ತಾ ಎರಡು ದಶಕಗಳ ಹಿಂದೆ ಕಾಂಗ್ರೆಸ್ನಿಂದ ಅಹಮದಾಬಾದ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. ಅವರು ತಮ್ಮ ಮಗ ರೋಹನ್ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ತೀವ್ರವಾಗಿ ವಿರೋಧಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಹಮದಾಬಾದ್: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರರಾಗಿದ್ದ ರೋಹನ್ ಗುಪ್ತಾ ಅವರು ‘ಅವಮಾನ’ ಮತ್ತು ‘ಚಾರಿತ್ರ್ಯಹರಣ’ದ ಕಾರಣಕ್ಕೆ ಪಕ್ಷದ ಪ್ರಾಥಮಿಕ ಸದಸ್ಯತ್ವ ಮತ್ತು ಇತರ ಎಲ್ಲ ಹುದ್ದೆಗಳಿಗೆ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ. ಇದರಿಂದ ಲೋಕಸಭಾ ಚುನಾವಣೆಯ ಸಮಯದಲ್ಲಿ ಪಕ್ಷಕ್ಕೆ ಹಿನ್ನಡೆಯಾದಂತಾಗಿದೆ.</p>.<p>ಗುಪ್ತಾ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಬರೆದಿದ್ದು, ಅದನ್ನು ‘ಎಕ್ಸ್’ ವೇದಿಕೆಯಲ್ಲೂ ಹಂಚಿಕೊಂಡಿದ್ದಾರೆ.</p>.<p>ಕಾಂಗ್ರೆಸ್ ಪಕ್ಷವು ಗುಪ್ತಾ ಅವರನ್ನು ಅಹಮದಾಬಾದ್ ಪೂರ್ವ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಘೋಷಿಸಿತ್ತು. ಆದರೆ, ತಮ್ಮ ತಂದೆಯ ಅನಾರೋಗ್ಯದ ನೆಪವೊಡ್ಡಿ ಗುಪ್ತಾ ಕಣದಿಂದ ಹಿಂದೆ ಸರಿದಿದ್ದರು.</p>.<p>‘ಪಕ್ಷದ ಸಂವಹನ ವಿಭಾಗಕ್ಕೆ ಸಂಬಂಧಿಸಿದ ಹಿರಿಯ ನಾಯಕರೊಬ್ಬರಿಂದ ನಾನು ಕಳೆದ ಎರಡು ವರ್ಷದಿಂದ ನಿರಂತರ ಅವಮಾನ ಮತ್ತು ಚಾರಿತ್ರ್ಯಹರಣ ಅನುಭವಿಸಿದ್ದೇನೆ. ಅದೇ ಹೊತ್ತಿಗೆ ಖಾಸಗಿ ಬಿಕ್ಕಟ್ಟು ನನ್ನನ್ನು ರಾಜೀನಾಮೆ ನಿರ್ಧಾರ ತೆಗೆದುಕೊಳ್ಳಲು ಕಾರಣವಾಗಿದೆ’ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.</p>.<p>ರಾಜೀನಾಮೆ ನಿರ್ಧಾರವು ಅತ್ಯಂತ ಕಠಿಣವಾಗಿತ್ತು. ಆದರೆ, ತನ್ನ ಆತ್ಮಗೌರವ ಕಾಪಾಡಿಕೊಳ್ಳಲು ಅನಿವಾರ್ಯವಾಗಿತ್ತು ಎಂದು ಗುಪ್ತಾ ತಿಳಿಸಿದ್ದಾರೆ.</p>.<p>ರೋಹನ್ ಗುಪ್ತಾ ಅವರ ತಂದೆ ರಾಜ್ಕುಮಾರ್ ಗುಪ್ತಾ ಎರಡು ದಶಕಗಳ ಹಿಂದೆ ಕಾಂಗ್ರೆಸ್ನಿಂದ ಅಹಮದಾಬಾದ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. ಅವರು ತಮ್ಮ ಮಗ ರೋಹನ್ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ತೀವ್ರವಾಗಿ ವಿರೋಧಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>