<p><strong>ಅಜಂಗಢ(ಉತ್ತರಪ್ರದೇಶ)</strong>: ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷದ ಮೈತ್ರಿ ಕೂಟ ‘ಇಂಡಿಯಾ’ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ‘ದೇಶದಲ್ಲಿ ಜೂನ್ 4ರಂದು ಹೊಸ ಸಿನಿಮಾ ಬಿಡುಗಡೆಯಾಗುತ್ತಿದೆ, ಜನರು ಅದನ್ನು ಉತ್ಸಾಹದಿಂದ ನೋಡಲಿದ್ದಾರೆ’ ಎಂದು ಹೇಳಿದ್ದಾರೆ.</p><p>ಉತ್ತರ ಪ್ರದೇಶದ ಅಜಂಗಢದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಧರ್ಮೇಂದ್ರ ಯಾದವ್ ಪರ ಪ್ರಚಾರ ನಡೆಸಿ ಬುಧವಾರ ಅಖಿಲೇಶ್ ಮಾತನಾಡಿದರು.</p><p>ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಬಿಜೆಪಿಯೊಂದಿಗೆ ಕೈಜೊಡಿಸಿದ್ದು, ಸಮಾಜವಾದಿ ಪಕ್ಷದ ಮತಗಳನ್ನು ವಿಭಜಿಸುವ ಮೂಲಕ ಕೇಸರಿ ಪಕ್ಷಕ್ಕೆ ಸಹಾಯ ಮಾಡುತ್ತಿದೆ ಎಂದು ಆರೋಪಿಸಿದರು.</p><p>ಪ್ರತಿ ಹಂತದ ಮತದಾನದಲ್ಲಿ ಇಂಡಿಯಾ ಬಣ ಮುನ್ನುಗ್ಗುತ್ತಿದೆ, ಜೂನ್ 4 ರಂದು ಹೊಸ ಸಿನಿಮಾ ಬಿಡುಗಡೆಯಾಗಲಿದ್ದು, ಜನರು ನೋಡಲಿದ್ದಾರೆ ಎಂದರು. </p><p>ಐದು ಹಂತದ ಮತದಾನವನ್ನು ಗಮನಿಸಿದರೆ ಬಿಜೆಪಿ ಸರ್ಕಾರದಿಂದ ಹೊರಗುಳಿದಿರುವಂತೆ ಕಾಣುತ್ತಿದೆ. ಆರನೇ ಹಂತ ಮುಗಿಯುವಷ್ಟರಲ್ಲಿ ಅಧಿಕಾರದಿಂದ ಹೊರಹೋಗಲಿದೆ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಜಂಗಢ(ಉತ್ತರಪ್ರದೇಶ)</strong>: ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷದ ಮೈತ್ರಿ ಕೂಟ ‘ಇಂಡಿಯಾ’ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ‘ದೇಶದಲ್ಲಿ ಜೂನ್ 4ರಂದು ಹೊಸ ಸಿನಿಮಾ ಬಿಡುಗಡೆಯಾಗುತ್ತಿದೆ, ಜನರು ಅದನ್ನು ಉತ್ಸಾಹದಿಂದ ನೋಡಲಿದ್ದಾರೆ’ ಎಂದು ಹೇಳಿದ್ದಾರೆ.</p><p>ಉತ್ತರ ಪ್ರದೇಶದ ಅಜಂಗಢದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಧರ್ಮೇಂದ್ರ ಯಾದವ್ ಪರ ಪ್ರಚಾರ ನಡೆಸಿ ಬುಧವಾರ ಅಖಿಲೇಶ್ ಮಾತನಾಡಿದರು.</p><p>ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಬಿಜೆಪಿಯೊಂದಿಗೆ ಕೈಜೊಡಿಸಿದ್ದು, ಸಮಾಜವಾದಿ ಪಕ್ಷದ ಮತಗಳನ್ನು ವಿಭಜಿಸುವ ಮೂಲಕ ಕೇಸರಿ ಪಕ್ಷಕ್ಕೆ ಸಹಾಯ ಮಾಡುತ್ತಿದೆ ಎಂದು ಆರೋಪಿಸಿದರು.</p><p>ಪ್ರತಿ ಹಂತದ ಮತದಾನದಲ್ಲಿ ಇಂಡಿಯಾ ಬಣ ಮುನ್ನುಗ್ಗುತ್ತಿದೆ, ಜೂನ್ 4 ರಂದು ಹೊಸ ಸಿನಿಮಾ ಬಿಡುಗಡೆಯಾಗಲಿದ್ದು, ಜನರು ನೋಡಲಿದ್ದಾರೆ ಎಂದರು. </p><p>ಐದು ಹಂತದ ಮತದಾನವನ್ನು ಗಮನಿಸಿದರೆ ಬಿಜೆಪಿ ಸರ್ಕಾರದಿಂದ ಹೊರಗುಳಿದಿರುವಂತೆ ಕಾಣುತ್ತಿದೆ. ಆರನೇ ಹಂತ ಮುಗಿಯುವಷ್ಟರಲ್ಲಿ ಅಧಿಕಾರದಿಂದ ಹೊರಹೋಗಲಿದೆ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>