<p><strong>ಉಧಂಪುರ:</strong> ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಕಾಲ ದೂರವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದರು. </p><p>ಉಧಂಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿತೇಂದ್ರ ಸಿಂಗ್ ಅವರ ಪರವಾಗಿ ಚುನಾವಣೆ ಪ್ರಚಾರ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p><p>ಈ ಪ್ರದೇಶದ ಜನರು ಶೀಘ್ರದಲ್ಲೇ ತಮ್ಮ ಸಮಸ್ಯೆಗಳನ್ನು ಸಚಿವರು ಮತ್ತು ಶಾಸಕರೊಂದಿಗೆ ಹಂಚಿಕೊಳ್ಳಬಹುದು ಎಂದು ಅವರು ನುಡಿದರು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿರುವ ಅಭಿವೃದ್ಧಿ ಯೋಜನೆಗಳು ‘ಟ್ರೇಲರ್‘ ಮಾತ್ರ, ಮುಂದಿನ ದಿನಗಳಲ್ಲಿ ಅಭಿವೃದ್ಧಿಯ ಅದ್ಭುತ ಚಿತ್ರಣವನ್ನು ನೋಡಬಹುದು ಎಂದರು. </p><p>ಸದ್ಯ ಜಮ್ಮು ಮತ್ತು ಕಾಶ್ಮೀರ ಸಂಪೂರ್ಣವಾಗಿ ಬದಲಾಗಿದೆ, ಜನರು ನಿರಾಶೆಯಿಂದ ಭರವಸೆಯತ್ತ ಸಾಗುತ್ತಿದ್ದಾರೆ ಎಂದು ಮೋದಿ ಹೇಳಿದರು. </p><p>ಜಮ್ಮು ಮತ್ತು ಕಾಶ್ಮೀರದಲ್ಲಿ ಸಮಾಜದ ಪ್ರತಿಯೊಂದು ವರ್ಗದ ಎಲ್ಲರ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಪ್ರಧಾನಿ ಹೇಳಿದರು.</p><p>ಕಣಿವೆ ರಾಜ್ಯಕ್ಕೆ ಹೊರಗಿನಿಂದ ಕಂಪನಿಗಳು ಮತ್ತು ಕಾರ್ಖಾನೆಗಳು ಬರುತ್ತವೆ. ಹೊಸ ರೈಲ್ವೆ ಯೋಜನೆಗಳು, ರಸ್ತೆಗಳು, ಸುರಂಗ ಯೋಜನೆಗಳು ಬರಲಿವೆ ಎಂದರು. ಜಮ್ಮು ಮತ್ತು ಕಾಶ್ಮೀರ ನವೋದ್ಯಮಗಳ ಕೇಂದ್ರವಾಗಬೇಕು ಎಂದು ಪ್ರಧಾನಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಧಂಪುರ:</strong> ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಕಾಲ ದೂರವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದರು. </p><p>ಉಧಂಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿತೇಂದ್ರ ಸಿಂಗ್ ಅವರ ಪರವಾಗಿ ಚುನಾವಣೆ ಪ್ರಚಾರ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p><p>ಈ ಪ್ರದೇಶದ ಜನರು ಶೀಘ್ರದಲ್ಲೇ ತಮ್ಮ ಸಮಸ್ಯೆಗಳನ್ನು ಸಚಿವರು ಮತ್ತು ಶಾಸಕರೊಂದಿಗೆ ಹಂಚಿಕೊಳ್ಳಬಹುದು ಎಂದು ಅವರು ನುಡಿದರು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿರುವ ಅಭಿವೃದ್ಧಿ ಯೋಜನೆಗಳು ‘ಟ್ರೇಲರ್‘ ಮಾತ್ರ, ಮುಂದಿನ ದಿನಗಳಲ್ಲಿ ಅಭಿವೃದ್ಧಿಯ ಅದ್ಭುತ ಚಿತ್ರಣವನ್ನು ನೋಡಬಹುದು ಎಂದರು. </p><p>ಸದ್ಯ ಜಮ್ಮು ಮತ್ತು ಕಾಶ್ಮೀರ ಸಂಪೂರ್ಣವಾಗಿ ಬದಲಾಗಿದೆ, ಜನರು ನಿರಾಶೆಯಿಂದ ಭರವಸೆಯತ್ತ ಸಾಗುತ್ತಿದ್ದಾರೆ ಎಂದು ಮೋದಿ ಹೇಳಿದರು. </p><p>ಜಮ್ಮು ಮತ್ತು ಕಾಶ್ಮೀರದಲ್ಲಿ ಸಮಾಜದ ಪ್ರತಿಯೊಂದು ವರ್ಗದ ಎಲ್ಲರ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಪ್ರಧಾನಿ ಹೇಳಿದರು.</p><p>ಕಣಿವೆ ರಾಜ್ಯಕ್ಕೆ ಹೊರಗಿನಿಂದ ಕಂಪನಿಗಳು ಮತ್ತು ಕಾರ್ಖಾನೆಗಳು ಬರುತ್ತವೆ. ಹೊಸ ರೈಲ್ವೆ ಯೋಜನೆಗಳು, ರಸ್ತೆಗಳು, ಸುರಂಗ ಯೋಜನೆಗಳು ಬರಲಿವೆ ಎಂದರು. ಜಮ್ಮು ಮತ್ತು ಕಾಶ್ಮೀರ ನವೋದ್ಯಮಗಳ ಕೇಂದ್ರವಾಗಬೇಕು ಎಂದು ಪ್ರಧಾನಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>