<p><strong>ಮುಜಾಫರ್ಪುರ:</strong> ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಜನರಿಗೆ ಹಣ ಹಂಚಿದ್ದಾರೆ ಎಂಬ ದೂರು ಆಧರಿಸಿ ಸಾಹೇಬ್ಪುರ ಶಾಸಕ ರಾಜುಕುಮಾರ್ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>ವೈಶಾಲಿ ಲೋಕಸಭಾ ಕ್ಷೇತ್ರದ ಹಾಲಿ ಸಂಸದೆ, ಬಿಜೆಪಿ ಅಭ್ಯರ್ಥಿ ವೀಣಾ ದೇವಿ ಪರ ಎಲ್ಜೆಪಿ ಅಧ್ಯಕ್ಷ ಚಿರಾಗ್ ಪಾಸ್ವಾನ್ ರೋಡ್ ಶೋ ನಡೆಸುತ್ತಿದ್ದ ಸಂದರ್ಭದಲ್ಲಿ ರಾಜುಕುಮಾರ್ ಸಿಂಗ್ ಅವರು ನೆರೆದಿದ್ದ ಜನರಿಗೆ ಹಣ ಹಂಚಿದ್ದರು. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.</p><p>ವೈಶಾಲಿ ಲೋಕಸಭಾ ಕ್ಷೇತ್ರದ ಆರ್ಜೆಡಿ ಅಭ್ಯರ್ಥಿ ವಿಜಯ್ ಕುಮಾರ್ ಶುಕ್ಲಾ ಅವರು ರಾಜುಕುಮಾರ್ ಸಿಂಗ್ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಮುಜಾಫರ್ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಸುಬ್ರತ್ ಕುಮಾರ್ ಸೇನ್ ಹೇಳಿದ್ದಾರೆ.</p><p>ರಾಜುಕುಮಾರ್ ಸಿಂಗ್ ಹಣ ಹಂಚುವ ಮೂಲಕ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಹಾಗಾಗಿ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಸುಬ್ರತ್ ಕುಮಾರ್ ಹೇಳಿದ್ದಾರೆ. </p><p>ಈ ಕುರಿತು ಪ್ರತಿಕ್ರಿಯಿಸಿದ ರಾಜುಕುಮಾರ್, ನೀರಿನ ಬಾಟಲಿಗಳನ್ನು ತರಲು ಪಕ್ಷದ ಕಾರ್ಯಕರ್ತನಿಗೆ ಹಣ ನೀಡಿದ್ದೇನೆ. ಆದರೆ, ಪ್ರತಿಸ್ಪರ್ಧಿಗಳು ಘಟನೆಯ ಬಗ್ಗೆ ಕ್ಷುಲ್ಲಕ ರಾಜಕೀಯ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. </p>.LS polls 2024 | ದಾಖಲೆ ಪ್ರಮಾಣದಲ್ಲಿ ಮತದಾನ ಮಾಡಿ: ಪ್ರಧಾನಿ ಮೋದಿ ಕರೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಜಾಫರ್ಪುರ:</strong> ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಜನರಿಗೆ ಹಣ ಹಂಚಿದ್ದಾರೆ ಎಂಬ ದೂರು ಆಧರಿಸಿ ಸಾಹೇಬ್ಪುರ ಶಾಸಕ ರಾಜುಕುಮಾರ್ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>ವೈಶಾಲಿ ಲೋಕಸಭಾ ಕ್ಷೇತ್ರದ ಹಾಲಿ ಸಂಸದೆ, ಬಿಜೆಪಿ ಅಭ್ಯರ್ಥಿ ವೀಣಾ ದೇವಿ ಪರ ಎಲ್ಜೆಪಿ ಅಧ್ಯಕ್ಷ ಚಿರಾಗ್ ಪಾಸ್ವಾನ್ ರೋಡ್ ಶೋ ನಡೆಸುತ್ತಿದ್ದ ಸಂದರ್ಭದಲ್ಲಿ ರಾಜುಕುಮಾರ್ ಸಿಂಗ್ ಅವರು ನೆರೆದಿದ್ದ ಜನರಿಗೆ ಹಣ ಹಂಚಿದ್ದರು. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.</p><p>ವೈಶಾಲಿ ಲೋಕಸಭಾ ಕ್ಷೇತ್ರದ ಆರ್ಜೆಡಿ ಅಭ್ಯರ್ಥಿ ವಿಜಯ್ ಕುಮಾರ್ ಶುಕ್ಲಾ ಅವರು ರಾಜುಕುಮಾರ್ ಸಿಂಗ್ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಮುಜಾಫರ್ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಸುಬ್ರತ್ ಕುಮಾರ್ ಸೇನ್ ಹೇಳಿದ್ದಾರೆ.</p><p>ರಾಜುಕುಮಾರ್ ಸಿಂಗ್ ಹಣ ಹಂಚುವ ಮೂಲಕ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಹಾಗಾಗಿ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಸುಬ್ರತ್ ಕುಮಾರ್ ಹೇಳಿದ್ದಾರೆ. </p><p>ಈ ಕುರಿತು ಪ್ರತಿಕ್ರಿಯಿಸಿದ ರಾಜುಕುಮಾರ್, ನೀರಿನ ಬಾಟಲಿಗಳನ್ನು ತರಲು ಪಕ್ಷದ ಕಾರ್ಯಕರ್ತನಿಗೆ ಹಣ ನೀಡಿದ್ದೇನೆ. ಆದರೆ, ಪ್ರತಿಸ್ಪರ್ಧಿಗಳು ಘಟನೆಯ ಬಗ್ಗೆ ಕ್ಷುಲ್ಲಕ ರಾಜಕೀಯ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. </p>.LS polls 2024 | ದಾಖಲೆ ಪ್ರಮಾಣದಲ್ಲಿ ಮತದಾನ ಮಾಡಿ: ಪ್ರಧಾನಿ ಮೋದಿ ಕರೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>