<p><strong>ನವದೆಹಲಿ</strong>: ಲೋಕಸಭೆ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ಶನಿವಾರ ರಾತ್ರಿ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಪ್ರಕಟಿಸಿದ್ದು, 45 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. </p><p>ಪ್ರಧಾನಿ ನರೇಂದ್ರ ಮೋದಿ ಅವರು ಸ್ಪರ್ಧಿಸಲಿರುವ ಉತ್ತರ ಪ್ರದೇಶದ ವಾರಾಣಸಿ ಕ್ಷೇತ್ರಕ್ಕೆ ಆ ರಾಜ್ಯದ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಜಯ್ ರೈ ಅವರನ್ನು ಕಣಕ್ಕಿಳಿಸಿದೆ. ರಾಜಸ್ಥಾನದಲ್ಲಿ ನಾಗೌರ್ ಕ್ಷೇತ್ರವನ್ನು ಹನುಮಾನ್ ಬೆನಿವಾಲ್ ನೇತೃತ್ವದ ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷಕ್ಕೆ ಬಿಟ್ಟುಕೊಟ್ಟಿದೆ.</p><p>ಕಾಂಗ್ರೆಸ್ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಮಧ್ಯಪ್ರದೇಶದ ರಾಜಘರ್ ಕ್ಷೇತ್ರದಲ್ಲಿ ಮತ್ತು ಹೊಸದಾಗಿ ಪಕ್ಷಕ್ಕೆ ಸೇರಿದ್ದ ಲಾಲ್ ಸಿಂಗ್ ಅವರು ಜಮ್ಮು ಮತ್ತು ಕಾಶ್ಮೀರದ ಉದಂಪುರ್ನಿಂದ ಸ್ಪರ್ಧಿಸಲಿದ್ದಾರೆ. </p><p>ತಮಿಳುನಾಡಿನಲ್ಲಿ ಶಿವಗಂಗಾ ಕ್ಷೇತ್ರಕ್ಕೆ ಕಾರ್ತಿ ಚಿದಂಬರಂ ಹಾಗೂ ತಿರುವಳ್ಳೂರು ಮೀಸಲು ಕ್ಷೇತ್ರಕ್ಕೆ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ಹೆಸರನ್ನು ಘೋಷಿಸಲಾಗಿದೆ. ಸಸಿಕಾಂತ್ ಸೆಂಥಿಲ್ ಅವರು ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಕಾರ್ಯತಂತ್ರ ಕುರಿತು ಪ್ರಮುಖವಾಗಿ ಕಾರ್ಯನಿರ್ವಹಿಸಿದ್ದರು.</p><p>ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಜೊತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದು, 17 ಕ್ಷೇತ್ರ<br>ಗಳಲ್ಲಿ ಸ್ಪರ್ಧಿಸುತ್ತಿದೆ. ಈ ಪೈಕಿ ವಾರಾಣಸಿ ಸೇರಿದಂತೆ 9 ಕ್ಷೇತ್ರಗಳಿಗೆ ಶನಿವಾರ ಅಭ್ಯರ್ಥಿ<br>ಗಳನ್ನು ಘೋಷಿಸಿತು.</p><p>ಅಮ್ರೋಲಾ ಕ್ಷೇತ್ರದಿಂದ ಡ್ಯಾನಿಶ್ ಅಲಿ, ಸಹರಣ್ಪುರ್ನಿಂದ ಇಮ್ರಾನ್ ಮಸೂದ್, ಕಾನ್ಪುರದಿಂದ ಅಲೋಕ್ ಮಿಶ್ರಾ ಅವರನ್ನು ಕಣಕ್ಕಿಳಿಸಿದೆ. ಈ ಮೂಲಕ ಪಕ್ಷವು ಒಟ್ಟು 183 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಲೋಕಸಭೆ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ಶನಿವಾರ ರಾತ್ರಿ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಪ್ರಕಟಿಸಿದ್ದು, 45 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. </p><p>ಪ್ರಧಾನಿ ನರೇಂದ್ರ ಮೋದಿ ಅವರು ಸ್ಪರ್ಧಿಸಲಿರುವ ಉತ್ತರ ಪ್ರದೇಶದ ವಾರಾಣಸಿ ಕ್ಷೇತ್ರಕ್ಕೆ ಆ ರಾಜ್ಯದ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಜಯ್ ರೈ ಅವರನ್ನು ಕಣಕ್ಕಿಳಿಸಿದೆ. ರಾಜಸ್ಥಾನದಲ್ಲಿ ನಾಗೌರ್ ಕ್ಷೇತ್ರವನ್ನು ಹನುಮಾನ್ ಬೆನಿವಾಲ್ ನೇತೃತ್ವದ ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷಕ್ಕೆ ಬಿಟ್ಟುಕೊಟ್ಟಿದೆ.</p><p>ಕಾಂಗ್ರೆಸ್ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಮಧ್ಯಪ್ರದೇಶದ ರಾಜಘರ್ ಕ್ಷೇತ್ರದಲ್ಲಿ ಮತ್ತು ಹೊಸದಾಗಿ ಪಕ್ಷಕ್ಕೆ ಸೇರಿದ್ದ ಲಾಲ್ ಸಿಂಗ್ ಅವರು ಜಮ್ಮು ಮತ್ತು ಕಾಶ್ಮೀರದ ಉದಂಪುರ್ನಿಂದ ಸ್ಪರ್ಧಿಸಲಿದ್ದಾರೆ. </p><p>ತಮಿಳುನಾಡಿನಲ್ಲಿ ಶಿವಗಂಗಾ ಕ್ಷೇತ್ರಕ್ಕೆ ಕಾರ್ತಿ ಚಿದಂಬರಂ ಹಾಗೂ ತಿರುವಳ್ಳೂರು ಮೀಸಲು ಕ್ಷೇತ್ರಕ್ಕೆ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ಹೆಸರನ್ನು ಘೋಷಿಸಲಾಗಿದೆ. ಸಸಿಕಾಂತ್ ಸೆಂಥಿಲ್ ಅವರು ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಕಾರ್ಯತಂತ್ರ ಕುರಿತು ಪ್ರಮುಖವಾಗಿ ಕಾರ್ಯನಿರ್ವಹಿಸಿದ್ದರು.</p><p>ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಜೊತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದು, 17 ಕ್ಷೇತ್ರ<br>ಗಳಲ್ಲಿ ಸ್ಪರ್ಧಿಸುತ್ತಿದೆ. ಈ ಪೈಕಿ ವಾರಾಣಸಿ ಸೇರಿದಂತೆ 9 ಕ್ಷೇತ್ರಗಳಿಗೆ ಶನಿವಾರ ಅಭ್ಯರ್ಥಿ<br>ಗಳನ್ನು ಘೋಷಿಸಿತು.</p><p>ಅಮ್ರೋಲಾ ಕ್ಷೇತ್ರದಿಂದ ಡ್ಯಾನಿಶ್ ಅಲಿ, ಸಹರಣ್ಪುರ್ನಿಂದ ಇಮ್ರಾನ್ ಮಸೂದ್, ಕಾನ್ಪುರದಿಂದ ಅಲೋಕ್ ಮಿಶ್ರಾ ಅವರನ್ನು ಕಣಕ್ಕಿಳಿಸಿದೆ. ಈ ಮೂಲಕ ಪಕ್ಷವು ಒಟ್ಟು 183 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>