<p><strong>ಪ್ರತಾಪಗಢ/ರಾಯ್ಬರೇಲಿ (ಉತ್ತರ ಪ್ರದೇಶ):</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ‘ಅಣು ಬಾಂಬ್’ಗೆ ಹೆದರಬಹುದು ಆದರೆ ಬಿಜೆಪಿ ಹಾಗಲ್ಲ. ಪಾಕಿಸ್ತಾನ ಆಕ್ರಮಿತ ಕಾಶ್ಮೀರವು ಭಾರತಕ್ಕೆ ಸೇರಿದ್ದು, ಅದನ್ನು ನಾವು ಮರಳಿ ಪಡೆದುಕೊಳ್ಳುತ್ತೇವೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಭಾನುವಾರ ಹೇಳಿದರು.</p><p>ಪ್ರತಾಪ್ಗಢದಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ‘ಪಾಕಿಸ್ತಾನವು ಅಣು ಬಾಂಬ್ ಹೊಂದಿರುವುದರಿಂದ ಆ ದೇಶಕ್ಕೆ ಗೌರವ ನಿಡಬೇಕು’ ಎಂದು ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್ ಈಚೆಗೆ ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿದರು.</p><p><strong>ಸೋನಿಯಾ ವಿರುದ್ಧ ವಾಗ್ದಾಳಿ:</strong> ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಸಂಸದರ ಅನುದಾನದ ಶೇ 70ರಷ್ಟನ್ನು ಅಲ್ಪಸಂಖ್ಯಾತರಿಗಾಗಿ ವಿನಿಯೋಗಿಸಿದ್ದಾರೆ ಎಂದು ಆರೋಪಿಸಿದ ಅಮಿತ್ ಶಾ, ‘ಗಾಂಧಿ ಕುಟುಂಬದವರು ಸುಳ್ಳು ಹೇಳುವುದರಲ್ಲಿ ಪರಿಣತರು’ ಎಂದು ವಾಗ್ದಾಳಿ ನಡೆಸಿದರು.</p><p>‘ನೀವು ಗಾಂಧಿ ಕುಟುಂಬದವರಿಗೆ ಹಲವು ವರ್ಷಗಳಿಂದ ಅವಕಾಶ ನೀಡಿದ್ದೀರಿ. ಆದರೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಕಾಂಗ್ರೆಸ್ನವರಿಗೆ ಅಭಿವೃದ್ಧಿಯಲ್ಲಿ ನಂಬಿಕೆಯಿಲ್ಲ’ ಎಂದರು.</p><p>‘ಪ್ರತಿ ಮಹಿಳೆಗೆ ₹1 ಲಕ್ಷ ನೀಡುವುದಾಗಿ ಕಾಂಗ್ರೆಸ್ ಈಗ ಭರವಸೆ ನೀಡುತ್ತಿದೆ. ಪ್ರತಿ ಮಹಿಳೆಗೆ ₹15 ಸಾವಿರ ನೀಡುವುದಾಗಿ ತೆಲಂಗಾಣ ವಿಧಾನಸಭಾ ಚುನಾವಣೆಯ ವೇಳೆ ಅದು ಹೇಳಿತ್ತು. ಅಲ್ಲಿನ ಮಹಿಳೆಯರು ಕಾಂಗ್ರೆಸ್ ಅನ್ನು ಆಯ್ಕೆ ಮಾಡಿದ್ದಾರೆ. ಆದರೆ ₹15 ಸಾವಿರ ಬಿಡಿ ₹1,500 ಕೂಡ ನೀಡಿಲ್ಲ’ ಎಂದು ಶಾ ಆರೋಪಿಸಿದರು.</p>.ಪಾಕಿಸ್ತಾನ ಗೌರವಿಸುವಂತೆ ಸಲಹೆ | ಕಾಂಗ್ರೆಸ್ ಮುಖಂಡ ಅಯ್ಯರ್ ಮಾತಿಗೆ BJP ಕಿಡಿ .ಸಮಾನಮನಸ್ಕರು ಒಂದಾದರೆ ಉಳಿವು: ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪ್ರತಾಪಗಢ/ರಾಯ್ಬರೇಲಿ (ಉತ್ತರ ಪ್ರದೇಶ):</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ‘ಅಣು ಬಾಂಬ್’ಗೆ ಹೆದರಬಹುದು ಆದರೆ ಬಿಜೆಪಿ ಹಾಗಲ್ಲ. ಪಾಕಿಸ್ತಾನ ಆಕ್ರಮಿತ ಕಾಶ್ಮೀರವು ಭಾರತಕ್ಕೆ ಸೇರಿದ್ದು, ಅದನ್ನು ನಾವು ಮರಳಿ ಪಡೆದುಕೊಳ್ಳುತ್ತೇವೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಭಾನುವಾರ ಹೇಳಿದರು.</p><p>ಪ್ರತಾಪ್ಗಢದಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ‘ಪಾಕಿಸ್ತಾನವು ಅಣು ಬಾಂಬ್ ಹೊಂದಿರುವುದರಿಂದ ಆ ದೇಶಕ್ಕೆ ಗೌರವ ನಿಡಬೇಕು’ ಎಂದು ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್ ಈಚೆಗೆ ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿದರು.</p><p><strong>ಸೋನಿಯಾ ವಿರುದ್ಧ ವಾಗ್ದಾಳಿ:</strong> ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಸಂಸದರ ಅನುದಾನದ ಶೇ 70ರಷ್ಟನ್ನು ಅಲ್ಪಸಂಖ್ಯಾತರಿಗಾಗಿ ವಿನಿಯೋಗಿಸಿದ್ದಾರೆ ಎಂದು ಆರೋಪಿಸಿದ ಅಮಿತ್ ಶಾ, ‘ಗಾಂಧಿ ಕುಟುಂಬದವರು ಸುಳ್ಳು ಹೇಳುವುದರಲ್ಲಿ ಪರಿಣತರು’ ಎಂದು ವಾಗ್ದಾಳಿ ನಡೆಸಿದರು.</p><p>‘ನೀವು ಗಾಂಧಿ ಕುಟುಂಬದವರಿಗೆ ಹಲವು ವರ್ಷಗಳಿಂದ ಅವಕಾಶ ನೀಡಿದ್ದೀರಿ. ಆದರೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಕಾಂಗ್ರೆಸ್ನವರಿಗೆ ಅಭಿವೃದ್ಧಿಯಲ್ಲಿ ನಂಬಿಕೆಯಿಲ್ಲ’ ಎಂದರು.</p><p>‘ಪ್ರತಿ ಮಹಿಳೆಗೆ ₹1 ಲಕ್ಷ ನೀಡುವುದಾಗಿ ಕಾಂಗ್ರೆಸ್ ಈಗ ಭರವಸೆ ನೀಡುತ್ತಿದೆ. ಪ್ರತಿ ಮಹಿಳೆಗೆ ₹15 ಸಾವಿರ ನೀಡುವುದಾಗಿ ತೆಲಂಗಾಣ ವಿಧಾನಸಭಾ ಚುನಾವಣೆಯ ವೇಳೆ ಅದು ಹೇಳಿತ್ತು. ಅಲ್ಲಿನ ಮಹಿಳೆಯರು ಕಾಂಗ್ರೆಸ್ ಅನ್ನು ಆಯ್ಕೆ ಮಾಡಿದ್ದಾರೆ. ಆದರೆ ₹15 ಸಾವಿರ ಬಿಡಿ ₹1,500 ಕೂಡ ನೀಡಿಲ್ಲ’ ಎಂದು ಶಾ ಆರೋಪಿಸಿದರು.</p>.ಪಾಕಿಸ್ತಾನ ಗೌರವಿಸುವಂತೆ ಸಲಹೆ | ಕಾಂಗ್ರೆಸ್ ಮುಖಂಡ ಅಯ್ಯರ್ ಮಾತಿಗೆ BJP ಕಿಡಿ .ಸಮಾನಮನಸ್ಕರು ಒಂದಾದರೆ ಉಳಿವು: ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>