<p><strong>ಪುಣೆ</strong>: ಬಾರಾಮತಿ ಲೋಕಸಭಾ ಕ್ಷೇತ್ರದಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳನ್ನು ಇಟ್ಟಿಟ್ಟ ಗೋದಾಮಿನಲ್ಲಿ 45 ನಿಮಿಷ ಸಿ.ಸಿ.ಟಿ.ವಿ ಕ್ಯಾಮೆರಾಗಳು ಸ್ವಿಚ್ ಆಫ್ ಆಗಿದ್ದು, ಏನೋ ತಪ್ಪು ನಡೆದಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎಸ್ಪಿ) ಸೋಮವಾರ ಆರೋಪಿಸಿದೆ. </p>.<p>ಮಹಾರಾಷ್ಟ್ರದ ಪುಣೆ ಜಿಲ್ಲೆಯ ಭಾರತೀಯ ಆಹಾರ ನಿಗಮದ ಗೋದಾಮೊಂದರಲ್ಲಿ ಇವಿಎಂಗಳನ್ನು ಇರಿಸಲಾಗಿತ್ತು. ವಿದ್ಯುತ್ ಕಾಮಗಾರಿ ನಡೆದ ಕಾರಣದಿಂದಾಗಿ ಕ್ಯಾಮೆರಾದ ಕೇಬಲ್ ತೆಗೆಯಬೇಕಾಯಿತು. ಹೀಗಾಗಿ ಸಿ.ಸಿ.ಟಿ.ವಿ. ಕ್ಯಾಮೆರಾಗಳು ಅಲ್ಪಾವಧಿ ಸ್ಥಗಿತಗೊಂಡಿದ್ದವು ಎಂದು ಉಸ್ತುವಾರಿ ವಹಿಸಿದ್ದ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. </p>.<p>ಬೆಳಿಗ್ಗೆ 10.30ರಿಂದ 11.15ರವರೆಗೆ ಸಿ.ಸಿ.ಟಿ.ವಿ ಕ್ಯಾಮೆರಾಗಳು ಸ್ವಿಚ್ ಆಫ್ ಆಗಿದ್ದವು ಎಂದು, ಬಾರಾಮತಿ ಅಭ್ಯರ್ಥಿ ಸುಪ್ರಿಯಾ ಸುಳೆ ಅವರ ಚುನಾವಣಾ ಪ್ರತಿನಿಧಿಯಾದ ಲಕ್ಷ್ಮೀಕಾಂತ್ ಕೆ. ತಿಳಿಸಿದ್ದಾರೆ. </p>.<p>‘ಸಿ.ಸಿ.ಟಿ.ವಿಗಳು ಸ್ವಿಚ್ ಆಫ್ ಆದ ಕುರಿತು ಪೊಲೀಸರ ಗಮನಕ್ಕೆ ತಂದೆವು. ಇಲ್ಲಿ ಇದ್ದವರು ತಾಂತ್ರಿಕ ಕಾರಣದ ಸ್ಪಷ್ಟನೆಯನ್ನು ನೀಡಿದರು. ಆದರೂ ನಾವು ಚುನಾವಣಾಧಿಕಾರಿಗೆ ಈ ಕುರಿತು ತಕರಾರು ಅರ್ಜಿ ಸಲ್ಲಿಸುತ್ತೇವೆ’ ಎಂದು ಲಕ್ಷ್ಮೀಕಾಂತ್ ಪ್ರತಿಕ್ರಿಯಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ</strong>: ಬಾರಾಮತಿ ಲೋಕಸಭಾ ಕ್ಷೇತ್ರದಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳನ್ನು ಇಟ್ಟಿಟ್ಟ ಗೋದಾಮಿನಲ್ಲಿ 45 ನಿಮಿಷ ಸಿ.ಸಿ.ಟಿ.ವಿ ಕ್ಯಾಮೆರಾಗಳು ಸ್ವಿಚ್ ಆಫ್ ಆಗಿದ್ದು, ಏನೋ ತಪ್ಪು ನಡೆದಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎಸ್ಪಿ) ಸೋಮವಾರ ಆರೋಪಿಸಿದೆ. </p>.<p>ಮಹಾರಾಷ್ಟ್ರದ ಪುಣೆ ಜಿಲ್ಲೆಯ ಭಾರತೀಯ ಆಹಾರ ನಿಗಮದ ಗೋದಾಮೊಂದರಲ್ಲಿ ಇವಿಎಂಗಳನ್ನು ಇರಿಸಲಾಗಿತ್ತು. ವಿದ್ಯುತ್ ಕಾಮಗಾರಿ ನಡೆದ ಕಾರಣದಿಂದಾಗಿ ಕ್ಯಾಮೆರಾದ ಕೇಬಲ್ ತೆಗೆಯಬೇಕಾಯಿತು. ಹೀಗಾಗಿ ಸಿ.ಸಿ.ಟಿ.ವಿ. ಕ್ಯಾಮೆರಾಗಳು ಅಲ್ಪಾವಧಿ ಸ್ಥಗಿತಗೊಂಡಿದ್ದವು ಎಂದು ಉಸ್ತುವಾರಿ ವಹಿಸಿದ್ದ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. </p>.<p>ಬೆಳಿಗ್ಗೆ 10.30ರಿಂದ 11.15ರವರೆಗೆ ಸಿ.ಸಿ.ಟಿ.ವಿ ಕ್ಯಾಮೆರಾಗಳು ಸ್ವಿಚ್ ಆಫ್ ಆಗಿದ್ದವು ಎಂದು, ಬಾರಾಮತಿ ಅಭ್ಯರ್ಥಿ ಸುಪ್ರಿಯಾ ಸುಳೆ ಅವರ ಚುನಾವಣಾ ಪ್ರತಿನಿಧಿಯಾದ ಲಕ್ಷ್ಮೀಕಾಂತ್ ಕೆ. ತಿಳಿಸಿದ್ದಾರೆ. </p>.<p>‘ಸಿ.ಸಿ.ಟಿ.ವಿಗಳು ಸ್ವಿಚ್ ಆಫ್ ಆದ ಕುರಿತು ಪೊಲೀಸರ ಗಮನಕ್ಕೆ ತಂದೆವು. ಇಲ್ಲಿ ಇದ್ದವರು ತಾಂತ್ರಿಕ ಕಾರಣದ ಸ್ಪಷ್ಟನೆಯನ್ನು ನೀಡಿದರು. ಆದರೂ ನಾವು ಚುನಾವಣಾಧಿಕಾರಿಗೆ ಈ ಕುರಿತು ತಕರಾರು ಅರ್ಜಿ ಸಲ್ಲಿಸುತ್ತೇವೆ’ ಎಂದು ಲಕ್ಷ್ಮೀಕಾಂತ್ ಪ್ರತಿಕ್ರಿಯಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>