<p><strong>ನವದೆಹಲಿ</strong>: ಸಶಸ್ತ್ರ ಪಡೆಗಳ ವಿಚಾರವಾಗಿ ರಾಜಕೀಯ ಮಾಡಬೇಡಿ ಎಂದು ಚುನಾವಣಾ ಆಯೋಗವು ಸೂಚಿಸಿರುವುದಕ್ಕೆ ಶುಕ್ರವಾರ ಪ್ರತಿಕ್ರಿಯಿಸಿರುವ ಕಾಂಗ್ರೆಸ್ನ ಮಾಜಿ ಸೈನಿಕರ ವಿಭಾಗದ ಮುಖ್ಯಸ್ಥ ಕರ್ನಲ್ (ನಿವೃತ್ತ) ರೋಹಿತ್ ಚೌಧರಿ, ‘ನಾವು ಸಶಸ್ತ್ರ ಪಡೆಗಳನ್ನು ಟೀಕಿಸಿಲ್ಲ. ಸರ್ಕಾರದ ನೀತಿಗಳನ್ನಷ್ಟೇ ಪ್ರಶ್ನಿಸಿದ್ದೇವೆ’ ಎಂದು ಹೇಳಿದರು.</p>.<p>ಚುನಾವಣಾ ಆಯೋಗವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಹಾಯ ಮಾಡುತ್ತಿದೆ ಎಂದೂ ಅವರು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ದೇಶವನ್ನು ಸಂರಕ್ಷಿಸಲು ಸಶಸ್ತ್ರ ಪಡೆಗಳು ಉತ್ತಮವಾಗಿ ಕೆಲಸ ಮಾಡುತ್ತಿವೆ. ‘ಅಗ್ನಿಪಥ’ ಯೋಜನೆಯ ಕುರಿತು ಹೇಳಿಕೆ ನೀಡುವಾಗ ಪಕ್ಷವು ನೀತಿ ಸಂಹಿತೆಯನ್ನು ಉಲ್ಲಂಘಿಸಿಲ್ಲ’ ಎಂದರು.</p>.<p>‘ಅಗ್ನಿಪಥ’ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಮೋದಿ ಸರ್ಕಾರವು ಸೇನೆಯನ್ನು ದುರ್ಬಲಗೊಳಿಸಿದೆ. ದೇಶ, ಸೇನಾಪಡೆ ಮತ್ತು ಸೈನಿಕರ ಹಿತದೃಷ್ಟಿಯನ್ನು ಗಣನೆಗೆ ತೆಗೆದುಕೊಳ್ಳದೆ ಜಾರಿಗೊಳಿಸಿರುವ ಈ ಯೋಜನೆಗೆ ನಾವು ಸವಾಲು ಹಾಕುತ್ತೇವೆ ಎಂದರು.</p>.<p>ತಾರಾ ಪ್ರಚಾರಕರು ಸಶಸ್ತ್ರ ಪಡೆಗಳ ಕುರಿತು ಮಾತನಾಡಬಾರದು ಎಂದು ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದೆ ಎಂದೂ ವಿವರಿಸಿದರು.</p>.<p>‘ಮೋದಿ ಅವರು ಯಾವಾಗೆಲ್ಲ ತೊಂದರೆಗೆ ಸಿಲುಕುತ್ತಾರೋ ಆಗ ಅವರು ಬೇರೆಯವರ ಸಹಾಯ ಪಡೆದುಕೊಳ್ಳುತ್ತಾರೆ. ಈ ಹಿಂದೆ ಸಶಸ್ತ್ರ ಪಡೆಗಳ ಹಿಂದೆ ಅಡಗಿಕೊಂಡಿದ್ದರು. ಈಗ ಚುನಾವಣಾ ಆಯೋಗದ ಸಹಾಯ ಪಡೆದುಕೊಳ್ಳುತ್ತಿದ್ದಾರೆ’ ಎಂದು ರೋಹಿತ್ ಚೌಧರಿ ಹೇಳಿದರು.</p>.<p>‘ಅಗ್ನಿಪಥ’ ಯೋಜನೆಯು ಸೇನೆಯಲ್ಲಿ ತಾರತಮ್ಯ ಉಂಟು ಮಾಡುತ್ತಿದೆ ಮತ್ತು ದೇಶದ ಭದ್ರತೆಯನ್ನು ದುರ್ಬಲಗೊಳಿಸುತ್ತದೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸಶಸ್ತ್ರ ಪಡೆಗಳ ವಿಚಾರವಾಗಿ ರಾಜಕೀಯ ಮಾಡಬೇಡಿ ಎಂದು ಚುನಾವಣಾ ಆಯೋಗವು ಸೂಚಿಸಿರುವುದಕ್ಕೆ ಶುಕ್ರವಾರ ಪ್ರತಿಕ್ರಿಯಿಸಿರುವ ಕಾಂಗ್ರೆಸ್ನ ಮಾಜಿ ಸೈನಿಕರ ವಿಭಾಗದ ಮುಖ್ಯಸ್ಥ ಕರ್ನಲ್ (ನಿವೃತ್ತ) ರೋಹಿತ್ ಚೌಧರಿ, ‘ನಾವು ಸಶಸ್ತ್ರ ಪಡೆಗಳನ್ನು ಟೀಕಿಸಿಲ್ಲ. ಸರ್ಕಾರದ ನೀತಿಗಳನ್ನಷ್ಟೇ ಪ್ರಶ್ನಿಸಿದ್ದೇವೆ’ ಎಂದು ಹೇಳಿದರು.</p>.<p>ಚುನಾವಣಾ ಆಯೋಗವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಹಾಯ ಮಾಡುತ್ತಿದೆ ಎಂದೂ ಅವರು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ದೇಶವನ್ನು ಸಂರಕ್ಷಿಸಲು ಸಶಸ್ತ್ರ ಪಡೆಗಳು ಉತ್ತಮವಾಗಿ ಕೆಲಸ ಮಾಡುತ್ತಿವೆ. ‘ಅಗ್ನಿಪಥ’ ಯೋಜನೆಯ ಕುರಿತು ಹೇಳಿಕೆ ನೀಡುವಾಗ ಪಕ್ಷವು ನೀತಿ ಸಂಹಿತೆಯನ್ನು ಉಲ್ಲಂಘಿಸಿಲ್ಲ’ ಎಂದರು.</p>.<p>‘ಅಗ್ನಿಪಥ’ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಮೋದಿ ಸರ್ಕಾರವು ಸೇನೆಯನ್ನು ದುರ್ಬಲಗೊಳಿಸಿದೆ. ದೇಶ, ಸೇನಾಪಡೆ ಮತ್ತು ಸೈನಿಕರ ಹಿತದೃಷ್ಟಿಯನ್ನು ಗಣನೆಗೆ ತೆಗೆದುಕೊಳ್ಳದೆ ಜಾರಿಗೊಳಿಸಿರುವ ಈ ಯೋಜನೆಗೆ ನಾವು ಸವಾಲು ಹಾಕುತ್ತೇವೆ ಎಂದರು.</p>.<p>ತಾರಾ ಪ್ರಚಾರಕರು ಸಶಸ್ತ್ರ ಪಡೆಗಳ ಕುರಿತು ಮಾತನಾಡಬಾರದು ಎಂದು ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದೆ ಎಂದೂ ವಿವರಿಸಿದರು.</p>.<p>‘ಮೋದಿ ಅವರು ಯಾವಾಗೆಲ್ಲ ತೊಂದರೆಗೆ ಸಿಲುಕುತ್ತಾರೋ ಆಗ ಅವರು ಬೇರೆಯವರ ಸಹಾಯ ಪಡೆದುಕೊಳ್ಳುತ್ತಾರೆ. ಈ ಹಿಂದೆ ಸಶಸ್ತ್ರ ಪಡೆಗಳ ಹಿಂದೆ ಅಡಗಿಕೊಂಡಿದ್ದರು. ಈಗ ಚುನಾವಣಾ ಆಯೋಗದ ಸಹಾಯ ಪಡೆದುಕೊಳ್ಳುತ್ತಿದ್ದಾರೆ’ ಎಂದು ರೋಹಿತ್ ಚೌಧರಿ ಹೇಳಿದರು.</p>.<p>‘ಅಗ್ನಿಪಥ’ ಯೋಜನೆಯು ಸೇನೆಯಲ್ಲಿ ತಾರತಮ್ಯ ಉಂಟು ಮಾಡುತ್ತಿದೆ ಮತ್ತು ದೇಶದ ಭದ್ರತೆಯನ್ನು ದುರ್ಬಲಗೊಳಿಸುತ್ತದೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>