<p><strong>ಗೋರಖ್ಪುರ:</strong> ಲೋಕಸಭಾ ಚುನಾವಣೆಯ ಫಲಿತಾಂಶ ಘೋಷಣೆಯಾದ ನಂತರ ಅರ್ಧ ಡಜನ್ ವಿರೋಧ ಪಕ್ಷಗಳು ನಿರ್ನಾಮವಾಗುತ್ತವೆ ಮತ್ತು ಅವುಗಳ ಅಭ್ಯರ್ಥಿಗಳು ಠೇವಣಿಯನ್ನೂ ಕಳೆದುಕೊಳ್ಳುತ್ತಾರೆ ಎಂದು ಭೋಜ್ಪುರಿ ನಟ ಹಾಗೂ ಗೋರಖ್ಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಮುಖಂಡ ರವಿಕಿಶನ್ ಮಂಗಳವಾರ ಪ್ರತಿಪಾದಿಸಿದರು.</p>.<p>ಪಿಟಿಐ ಜತೆಗೆ ಸಂದರ್ಶನದಲ್ಲಿ ಮಾತನಾಡಿದ ಅವರು, ‘ಇಂಡಿಯಾ ಕೂಟವು ಅಧಿಕಾರಕ್ಕೆ ಬಂದರೆ, ದೇಶವು ಷರಿಯತ್ ಅನ್ವಯ ನಡೆಯುತ್ತದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸುವುದಿಲ್ಲ ಎಂದು ನಾನು ಭರವಸೆ ನೀಡುತ್ತೇನೆ’ ಎಂದು ಹೇಳಿದರು.</p>.<p>ಗೋರಖ್ಪುರದ ಹಾಲಿ ಸಂಸದರೂ ಆಗಿರುವ ರವಿಕಿಶನ್, ‘ನಾನು ಐದು ವರ್ಷಗಳಿಂದ ಇಲ್ಲಿ ಬದುಕುತ್ತಿದ್ದೇನೆ. ಮುಂಬೈನ ಐಷಾರಾಮಿ ಜೀವನ ಬಿಟ್ಟು ಇಲ್ಲಿ ಜನರ ಸೇವೆ ಮಾಡುತ್ತಿದೇನೆ’ ಎಂದು ಹೇಳಿದರು.</p>.<p>ತನ್ನನ್ನು ಹೊರಗಿನವರು ಎಂದು ವಿರೋಧಿ ಅಭ್ಯರ್ಥಿಗಳು ಟೀಕಿಸಿದ್ದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ನಾನು ಇದೇ ಕ್ಷೇತ್ರದ ಹಳ್ಳಿಯಿಂದ ಬಂದವನು. ಇಲ್ಲಿನ ಮಣ್ಣಿನ ಮಗ. ನನ್ನ ಬೇರುಗಳು ಇರುವುದು ಇಲ್ಲಿಯೇ’ ಎಂದರು.</p>.<p>‘ಮೋದಿ–ಯೋಗಿ ಅವರ ಕಲ್ಯಾಣ ಕಾರ್ಯಕ್ರಮಗಳಿಂದ ಬಡವರಿಗೆ ಒಳಿತಾಗಿದೆ. ಆ ಋಣವನ್ನು ಅವರು ಬಿಜೆಪಿಗೆ ಮತ ಹಾಕುವ ಮೂಲಕ ತೀರಿಸುತ್ತಾರೆ. ಜನರೊಂದಿಗೆ ನಡೆಸಿದ 500 ಸಣ್ಣ ಸಭೆಗಳಲ್ಲಿ ನಾನು ಇದನ್ನು ಕಂಡುಕೊಂಡಿದ್ದೇನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋರಖ್ಪುರ:</strong> ಲೋಕಸಭಾ ಚುನಾವಣೆಯ ಫಲಿತಾಂಶ ಘೋಷಣೆಯಾದ ನಂತರ ಅರ್ಧ ಡಜನ್ ವಿರೋಧ ಪಕ್ಷಗಳು ನಿರ್ನಾಮವಾಗುತ್ತವೆ ಮತ್ತು ಅವುಗಳ ಅಭ್ಯರ್ಥಿಗಳು ಠೇವಣಿಯನ್ನೂ ಕಳೆದುಕೊಳ್ಳುತ್ತಾರೆ ಎಂದು ಭೋಜ್ಪುರಿ ನಟ ಹಾಗೂ ಗೋರಖ್ಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಮುಖಂಡ ರವಿಕಿಶನ್ ಮಂಗಳವಾರ ಪ್ರತಿಪಾದಿಸಿದರು.</p>.<p>ಪಿಟಿಐ ಜತೆಗೆ ಸಂದರ್ಶನದಲ್ಲಿ ಮಾತನಾಡಿದ ಅವರು, ‘ಇಂಡಿಯಾ ಕೂಟವು ಅಧಿಕಾರಕ್ಕೆ ಬಂದರೆ, ದೇಶವು ಷರಿಯತ್ ಅನ್ವಯ ನಡೆಯುತ್ತದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸುವುದಿಲ್ಲ ಎಂದು ನಾನು ಭರವಸೆ ನೀಡುತ್ತೇನೆ’ ಎಂದು ಹೇಳಿದರು.</p>.<p>ಗೋರಖ್ಪುರದ ಹಾಲಿ ಸಂಸದರೂ ಆಗಿರುವ ರವಿಕಿಶನ್, ‘ನಾನು ಐದು ವರ್ಷಗಳಿಂದ ಇಲ್ಲಿ ಬದುಕುತ್ತಿದ್ದೇನೆ. ಮುಂಬೈನ ಐಷಾರಾಮಿ ಜೀವನ ಬಿಟ್ಟು ಇಲ್ಲಿ ಜನರ ಸೇವೆ ಮಾಡುತ್ತಿದೇನೆ’ ಎಂದು ಹೇಳಿದರು.</p>.<p>ತನ್ನನ್ನು ಹೊರಗಿನವರು ಎಂದು ವಿರೋಧಿ ಅಭ್ಯರ್ಥಿಗಳು ಟೀಕಿಸಿದ್ದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ನಾನು ಇದೇ ಕ್ಷೇತ್ರದ ಹಳ್ಳಿಯಿಂದ ಬಂದವನು. ಇಲ್ಲಿನ ಮಣ್ಣಿನ ಮಗ. ನನ್ನ ಬೇರುಗಳು ಇರುವುದು ಇಲ್ಲಿಯೇ’ ಎಂದರು.</p>.<p>‘ಮೋದಿ–ಯೋಗಿ ಅವರ ಕಲ್ಯಾಣ ಕಾರ್ಯಕ್ರಮಗಳಿಂದ ಬಡವರಿಗೆ ಒಳಿತಾಗಿದೆ. ಆ ಋಣವನ್ನು ಅವರು ಬಿಜೆಪಿಗೆ ಮತ ಹಾಕುವ ಮೂಲಕ ತೀರಿಸುತ್ತಾರೆ. ಜನರೊಂದಿಗೆ ನಡೆಸಿದ 500 ಸಣ್ಣ ಸಭೆಗಳಲ್ಲಿ ನಾನು ಇದನ್ನು ಕಂಡುಕೊಂಡಿದ್ದೇನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>