<p>ಬಹು ನಿರೀಕ್ಷಿತ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕದ ಮೂರೂ ಪ್ರಮುಖ ಪಕ್ಷಗಳಿಗೆ ಈ ಫಲಿತಾಂಶ ಸಿಹಿ–ಕಹಿಗಳೆರಡನ್ನೂ ನೀಡಿದೆ. ನಿರೀಕ್ಷಿಸಿದ್ದಕ್ಕಿಂತ ಕಡಿಮೆ ಸ್ಥಾನಗಳನ್ನು ಮೂರು ಪಕ್ಷಗಳು ಪಡೆದಿವೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ 19 ಸ್ಥಾನಗಳಲ್ಲಿ ಜಯ ಸಾಧಿಸಿದ್ದರೆ, ಕಳೆದ ಚುನಾವಣೆಯಲ್ಲಿ ಕೇವಲ ಒಂದು ಕ್ಷೇತ್ರದಲ್ಲಿ ಗೆದ್ದಿದ್ದ ಕಾಂಗ್ರೆಸ್, ಈ ಬಾರಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದರೂ 9 ಸ್ಥಾನಗಳನ್ನಷ್ಟೇ ಗೆಲ್ಲಲು ಸಫಲವಾಗಿದೆ. ಸದ್ಯ, ಯಾರಿಗೂ ಸಮಾಧಾನ ತಾರದ ಫಲಿತಾಂಶದ ಕುರಿತು ಮೂರು ಪಕ್ಷಗಳು ಪರಾಮರ್ಶೆ ನಡೆಸುತ್ತಿದ್ದು, ಸೋಲಿಗೆ ಕಾರಣಗಳೇನು ಎಂಬುದರ ವಿಶ್ಲೇಷಣೆಯಲ್ಲಿ ತೊಡಗಿವೆ. <br></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>