ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಸಚಿವರ ಆಪ್ತ, ಮಾಜಿ ಸಚಿವ ಜನಾರ್ದನ ರೆಡ್ಡಿ 2011ರಲ್ಲಿ ಜೈಲು ಸೇರಿದಾಗ ಶ್ರೀರಾಮುಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಇದೇ ಕ್ಷೇತ್ರದಲ್ಲಿ ಪಕ್ಷೇತರವಾಗಿ ಗೆದ್ದಿದ್ದರು. 2013ರಲ್ಲಿ ಬಿಎಸ್ಆರ್ ಪಕ್ಷದಿಂದ ಇಲ್ಲಿಂದಲೇ ಪುನರಾಯ್ಕೆಯಾಗಿದ್ದರು. 2014ರಲ್ಲಿ ಬಿಎಸ್ಆರ್ ಪಕ್ಷ ಬಿಜೆಪಿಯಲ್ಲಿ ವಿಲೀನವಾದ ಬಳಿಕ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. 2018ರಲ್ಲಿ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರಕ್ಕೆ ವಲಸೆ ಹೋದರು. ಬಳಿಕ ಗ್ರಾಮೀಣ ಕ್ಷೇತ್ರಕ್ಕೆ ಬಂದರು.