<p>ಬೆಂಗಳೂರು: ‘ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಪುತ್ರ ಅಲೋಕ್ ವಿಶ್ವನಾಥ್ಗೆ ನೀಡದಿದ್ದರೆ ನಾನೇ ಅಭ್ಯರ್ಥಿ ಆಗುತ್ತೇನೆ. ನನಗೇ ಟಿಕೆಟ್ ನೀಡುವಂತೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಿಗೆ ಮನವಿ ಮಾಡಿದ್ದೇನೆ’ ಎಂದು ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ವಿದ್ಯಾವಂತರಾಗಿರುವ ನನ್ನ ಪುತ್ರ ಅಲೋಕ್ ವಿಶ್ವನಾಥ್ ಬಗ್ಗೆ ಕ್ಷೇತ್ರದ ಮತದಾರರಲ್ಲಿ ಒಲವಿದೆ ಎಂಬುದನ್ನು ಸಮೀಕ್ಷೆಗಳು ಹೇಳಿವೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಒಂದು ಸುತ್ತಿನ ಪ್ರವಾಸವನ್ನೂ ಮಾಡಿ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸ ಮಾಡಲಾಗಿದೆ’ ಎಂದರು.</p>.<p>‘ನಾನು ಪಕ್ಷ ನಿಷ್ಠನಾಗಿರುವ ಶಿಸ್ತಿನ ಸಿಪಾಯಿ. ನನಗೆ ಚಮಚಾಗಿರಿ ಮಾಡಿ ಗೊತ್ತಿಲ್ಲ. ಲಾಬಿಯನ್ನೂ ಮಾಡುವುದಿಲ್ಲ. ಸಮೀಕ್ಷೆಯ ವಾಸ್ತವಾಂಶವನ್ನು ವರಿಷ್ಠರಿಗೆ ತಿಳಿಸಿದ್ದೇನೆ’ ಎಂದರು.</p>.<p>‘ಬಿಜೆಪಿಯ ಭದ್ರಕೋಟೆ ಆಗಿರುವ ಚಿಕ್ಕಬಳ್ಳಾಪುರ ಕ್ಷೇತ್ರ ಕೈತಪ್ಪಬಾರದು ಎಂಬ ಕಾರಣಕ್ಕೆ ನಾನೇ ಅಭ್ಯರ್ಥಿಯಾಗಲು ನಿರ್ಧರಿಸಿದ್ದೇನೆ’ ಎಂದೂ ಅವರು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಪುತ್ರ ಅಲೋಕ್ ವಿಶ್ವನಾಥ್ಗೆ ನೀಡದಿದ್ದರೆ ನಾನೇ ಅಭ್ಯರ್ಥಿ ಆಗುತ್ತೇನೆ. ನನಗೇ ಟಿಕೆಟ್ ನೀಡುವಂತೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಿಗೆ ಮನವಿ ಮಾಡಿದ್ದೇನೆ’ ಎಂದು ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ವಿದ್ಯಾವಂತರಾಗಿರುವ ನನ್ನ ಪುತ್ರ ಅಲೋಕ್ ವಿಶ್ವನಾಥ್ ಬಗ್ಗೆ ಕ್ಷೇತ್ರದ ಮತದಾರರಲ್ಲಿ ಒಲವಿದೆ ಎಂಬುದನ್ನು ಸಮೀಕ್ಷೆಗಳು ಹೇಳಿವೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಒಂದು ಸುತ್ತಿನ ಪ್ರವಾಸವನ್ನೂ ಮಾಡಿ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸ ಮಾಡಲಾಗಿದೆ’ ಎಂದರು.</p>.<p>‘ನಾನು ಪಕ್ಷ ನಿಷ್ಠನಾಗಿರುವ ಶಿಸ್ತಿನ ಸಿಪಾಯಿ. ನನಗೆ ಚಮಚಾಗಿರಿ ಮಾಡಿ ಗೊತ್ತಿಲ್ಲ. ಲಾಬಿಯನ್ನೂ ಮಾಡುವುದಿಲ್ಲ. ಸಮೀಕ್ಷೆಯ ವಾಸ್ತವಾಂಶವನ್ನು ವರಿಷ್ಠರಿಗೆ ತಿಳಿಸಿದ್ದೇನೆ’ ಎಂದರು.</p>.<p>‘ಬಿಜೆಪಿಯ ಭದ್ರಕೋಟೆ ಆಗಿರುವ ಚಿಕ್ಕಬಳ್ಳಾಪುರ ಕ್ಷೇತ್ರ ಕೈತಪ್ಪಬಾರದು ಎಂಬ ಕಾರಣಕ್ಕೆ ನಾನೇ ಅಭ್ಯರ್ಥಿಯಾಗಲು ನಿರ್ಧರಿಸಿದ್ದೇನೆ’ ಎಂದೂ ಅವರು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>