<p><strong>ಅಬಲೂರು(ಹಂಸಬಾವಿ):</strong> ಸರ್ವಜ್ಞನ ಹುಟ್ಟೂರನ್ನು ಅಂತರರಾಷ್ಟ್ರೀಯ ಜ್ಞಾನ ಕೇಂದ್ರವನ್ನಾಗಿ ಮಾಡಲಾಗುವುದು. ಕೇಂದ್ರ ಸರ್ಕಾರದ ಸಹಕಾರದಿಂದ ಈ ಊರನ್ನು ಪ್ರವಾಸಿ ತಾಣವನ್ನಾಗಿಸಿ ಇಡೀ ವಿಶ್ವಕ್ಕೆ ಪರಿಚಯಿಸುವ ಕೆಲಸ ಮಾಡುತ್ತೇನೆ ಈ ಎಲ್ಲ ಕಾರ್ಯಗಳನ್ನು ಮಾಡಲು ನನಗೆ ಮತದಾರ ಆಶೀರ್ವಾದ ಮಾಡಬೇಕು ಎಂದು ಹಾವೇರಿ– ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಇಲ್ಲಿಗೆ ಸಮೀಪದ ಸರ್ವಜ್ಞನ ಅಬಲೂರು ಗ್ರಾಮದಲ್ಲಿ ಮಂಗಳವಾರ ಚುನಾವಣಾ ಪ್ರಚಾರ ಮಾಡಿ ಮಾತನಾಡಿ, ನಾನು ಮುಖ್ಯಮಂತ್ರಿ ಆಗಿದ್ದಾಗ ಸರ್ವಜ್ಞನ ಪ್ರಾಧಿಕಾರ ರಚನೆಗೆ ₹25 ಕೋಟಿ ನೀಡಿದ್ದೆ. ಆದರೆ ಕಾಂಗ್ರೆಸ್ ಸರ್ಕಾರ ಅದನ್ನು ವಾಪಸ್ ಪಡೆದುಕೊಂಡಿತು. ಇವರು ಸರ್ವಜ್ಞನಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದರು.</p>.<p>‘ನಮ್ಮ ಶಿಗ್ಗಾವಿ ಕ್ಷೇತ್ರದಲ್ಲಿ ಕನಕದಾಸ ಹುಟ್ಟಿದ್ದಾರೆ. ಅವರ ಬಗ್ಗೆಯೂ ಅಷ್ಟೊಂದು ಪ್ರಚಾರ ಇರಲಿಲ್ಲ. ನಾನು ₹24 ಕೋಟಿ ಖರ್ಚು ಮಾಡಿ ಕೋಟೆ, ಅರಮನೆ ಅಭಿವೃದ್ಧಿ ಮಾಡಿದೆ. ಅದೆ ರೀತಿ ಸರ್ವಜ್ಞನ ಊರನ್ನು ಅಭಿವೃದ್ಧಿ ಪಡೆಸಬೇಕೆಂಬ ಬಯಕೆ ನನ್ನದು ಎಂದರು.</p>.<p>ಮಾಜಿ ಸಚಿವ ಬಿ.ಸಿ.ಪಾಟೀಲ ಮಾತನಾಡಿ, ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ಜನರ ಬೆವರಿನ ಹಣ ಬೇಕಾಬಿಟ್ಟಿ ಖರ್ಚು ಮಾಡಿ ಯಾವುದೇ ಅಭಿವೃದ್ಧಿ ಕಾರ್ಯ ಆಗದಂತೆ ಮಾಡಿದೆ. ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೂ ಅಭಿವೃದ್ಧಿ ಮಾಡಲು ಹಣ ಇಲ್ಲ. ಈ ಕರ್ನಾಟಕಕ್ಕೆ ಬರೇ ಬರ ಬಂದಿಲ್ಲ. ಹಣದ ಬರ, ಅಭಿವೃದ್ಧಿಗೆ ಬರ ಬಂದಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೊಮ್ಮೆ ಬರ ಗ್ಯಾರೆಂಟಿ ಎಂದು ಟೀಕಿಸಿದರು.</p>.<p>ಈ ವೇಳೆ ಹಾವೇರಿ ಬಿಜೆಪಿ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಪೂಜಾರ್, ತಾಲ್ಲೂಕು ಅಧ್ಯಕ್ಷ ಶಿವಕುಮಾರ ತಿಪ್ಪಶೆಟ್ಟಿ, ಡಿ.ಎಂ.ಸಾಲಿ, ಎನ್ ಎಂ. ಈಟೇರ, ಲಿಂಗರಾಜ ಚಪ್ಪರದಹಳ್ಳಿ, ಎಸ್. ಎಸ್.ಪಾಟೀಲ, ದೊಡ್ಡಗೌಡ ಪಾಟೀಲ, ಸೃಷ್ಠಿ ಪಾಟೀಲ, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಬಲೂರು(ಹಂಸಬಾವಿ):</strong> ಸರ್ವಜ್ಞನ ಹುಟ್ಟೂರನ್ನು ಅಂತರರಾಷ್ಟ್ರೀಯ ಜ್ಞಾನ ಕೇಂದ್ರವನ್ನಾಗಿ ಮಾಡಲಾಗುವುದು. ಕೇಂದ್ರ ಸರ್ಕಾರದ ಸಹಕಾರದಿಂದ ಈ ಊರನ್ನು ಪ್ರವಾಸಿ ತಾಣವನ್ನಾಗಿಸಿ ಇಡೀ ವಿಶ್ವಕ್ಕೆ ಪರಿಚಯಿಸುವ ಕೆಲಸ ಮಾಡುತ್ತೇನೆ ಈ ಎಲ್ಲ ಕಾರ್ಯಗಳನ್ನು ಮಾಡಲು ನನಗೆ ಮತದಾರ ಆಶೀರ್ವಾದ ಮಾಡಬೇಕು ಎಂದು ಹಾವೇರಿ– ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಇಲ್ಲಿಗೆ ಸಮೀಪದ ಸರ್ವಜ್ಞನ ಅಬಲೂರು ಗ್ರಾಮದಲ್ಲಿ ಮಂಗಳವಾರ ಚುನಾವಣಾ ಪ್ರಚಾರ ಮಾಡಿ ಮಾತನಾಡಿ, ನಾನು ಮುಖ್ಯಮಂತ್ರಿ ಆಗಿದ್ದಾಗ ಸರ್ವಜ್ಞನ ಪ್ರಾಧಿಕಾರ ರಚನೆಗೆ ₹25 ಕೋಟಿ ನೀಡಿದ್ದೆ. ಆದರೆ ಕಾಂಗ್ರೆಸ್ ಸರ್ಕಾರ ಅದನ್ನು ವಾಪಸ್ ಪಡೆದುಕೊಂಡಿತು. ಇವರು ಸರ್ವಜ್ಞನಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದರು.</p>.<p>‘ನಮ್ಮ ಶಿಗ್ಗಾವಿ ಕ್ಷೇತ್ರದಲ್ಲಿ ಕನಕದಾಸ ಹುಟ್ಟಿದ್ದಾರೆ. ಅವರ ಬಗ್ಗೆಯೂ ಅಷ್ಟೊಂದು ಪ್ರಚಾರ ಇರಲಿಲ್ಲ. ನಾನು ₹24 ಕೋಟಿ ಖರ್ಚು ಮಾಡಿ ಕೋಟೆ, ಅರಮನೆ ಅಭಿವೃದ್ಧಿ ಮಾಡಿದೆ. ಅದೆ ರೀತಿ ಸರ್ವಜ್ಞನ ಊರನ್ನು ಅಭಿವೃದ್ಧಿ ಪಡೆಸಬೇಕೆಂಬ ಬಯಕೆ ನನ್ನದು ಎಂದರು.</p>.<p>ಮಾಜಿ ಸಚಿವ ಬಿ.ಸಿ.ಪಾಟೀಲ ಮಾತನಾಡಿ, ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ಜನರ ಬೆವರಿನ ಹಣ ಬೇಕಾಬಿಟ್ಟಿ ಖರ್ಚು ಮಾಡಿ ಯಾವುದೇ ಅಭಿವೃದ್ಧಿ ಕಾರ್ಯ ಆಗದಂತೆ ಮಾಡಿದೆ. ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೂ ಅಭಿವೃದ್ಧಿ ಮಾಡಲು ಹಣ ಇಲ್ಲ. ಈ ಕರ್ನಾಟಕಕ್ಕೆ ಬರೇ ಬರ ಬಂದಿಲ್ಲ. ಹಣದ ಬರ, ಅಭಿವೃದ್ಧಿಗೆ ಬರ ಬಂದಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೊಮ್ಮೆ ಬರ ಗ್ಯಾರೆಂಟಿ ಎಂದು ಟೀಕಿಸಿದರು.</p>.<p>ಈ ವೇಳೆ ಹಾವೇರಿ ಬಿಜೆಪಿ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಪೂಜಾರ್, ತಾಲ್ಲೂಕು ಅಧ್ಯಕ್ಷ ಶಿವಕುಮಾರ ತಿಪ್ಪಶೆಟ್ಟಿ, ಡಿ.ಎಂ.ಸಾಲಿ, ಎನ್ ಎಂ. ಈಟೇರ, ಲಿಂಗರಾಜ ಚಪ್ಪರದಹಳ್ಳಿ, ಎಸ್. ಎಸ್.ಪಾಟೀಲ, ದೊಡ್ಡಗೌಡ ಪಾಟೀಲ, ಸೃಷ್ಠಿ ಪಾಟೀಲ, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>