<p><strong>ಶಿವಮೊಗ್ಗ:</strong> ಹಿಂದುಳಿದವರ ಮತ ವಿಭಜನೆ ಆದರೆ ಪುತ್ರ ಬಿ.ವೈ.ರಾಘವೇಂದ್ರ ಗೆಲುವು ಸುಲಭವಾಗಲಿದೆ ಎಂಬ ಕಾರಣಕ್ಕೆ ಕೆ.ಎಸ್.ಈಶ್ವರಪ್ಪ ಅವರನ್ನು ಬಿಜೆಪಿ ಬಂಡಾಯ ಅಭ್ಯರ್ಥಿ ಆಗಿ ಯಡಿಯೂರಪ್ಪ ಅವರೇ ಚುನಾವಣೆಗೆ ನಿಲ್ಲಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದರು.</p><p>ಗೀತಾ ಶಿವರಾಜಕುಮಾರ್ ಡಮ್ಮಿ ಅಭ್ಯರ್ಥಿ ಎಂಬ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿರುಗೇಟು ನೀಡಿದ ಆಯನೂರು ಮಂಜುನಾಥ್, ಈಶ್ವರಪ್ಪ ಅವರದ್ದು ಹುಸಿ ಬಂಡಾಯ. ಬಿಜೆಪಿಯಲ್ಲಿರುವ ನನ್ನ ಹಳೆಯ ಸ್ನೇಹಿತರು ಹೇಳುವಂತೆ ಚುನಾವಣೆಯಲ್ಲಿ ಬಿ.ವೈ.ರಾಘವೇಂದ್ರ ಗೆಲ್ಲಿಸಲು ಯಡಿಯೂರಪ್ಪ-ಈಶ್ವರಪ್ಪ ನಡುವೆ ಒಳ ಒಪ್ಪಂದ ಆಗಿದೆ. ಅದರಂತೆ ಚುನಾವಣೆ ಮುಗಿದ ನಂತರ ಕೆ.ಎಸ್.ಈಶ್ವರಪ್ಪ ರಾಜ್ಯಪಾಲ ಆಗಿ ನೇಮಕಗೊಳ್ಳಲಿದ್ದಾರೆ. ಅವರ ಪುತ್ರ ಕೆ.ಈ.ಕಾಂತೇಶ ಅವರನ್ನು ವಿಧಾನ ಪರಿಷತ್ಗೆ ನಾಮ ನಿರ್ದೇಶನ ಮಾಡಲಾಗುತ್ತಿದೆ ಎಂದರು.</p><p>ಈಶ್ವರಪ್ಪ ದೊಡ್ಡ ಕಲಾವಿದ. ನಾಲಿಗೆಗೆ ಬಣ್ಣ ಹಚ್ಚಿಕೊಂಡಿದ್ದಾರೆ. ಸ್ವತಂತ್ರವಾಗಿ ಸ್ಪರ್ಧಿಸುವಷ್ಟು ಧೈರ್ಯ ಅವರಿಗಿಲ್ಲ. ಆದರೆ ಯಡಿಯೂರಪ್ಪ, ಬಿಜೆಪಿ ಅವರನ್ನು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಕಾಂಗ್ರೆಸ್ ಪರವಾಗಿರುವ ಹಿಂದುಳಿದವರು, ದಲಿತರ ಮತಗಳನ್ನು ವಿಭಜಿಸುವ ತಂತ್ರ ಇದರಲ್ಲಿ ಅಡಗಿದೆ ಎಂದರು.</p><p>ಶಿವಮೊಗ್ಗ ಕ್ಷೇತ್ರದಲ್ಲಿ ಬಂಗಾರಪ್ಪ ಅವರ ಸೋಲಿನ ಸೇಡಿಗೆ ಅವರ ಪುತ್ರಿ ಗೀತಾ ಶಿವರಾಜಕುಮಾರ್ ಅವರನ್ನು ಮತದಾರರು ಬೆಂಬಲಿಸಲಿದ್ದಾರೆ. ಈಶ್ವರಪ್ಪ – ಬಿಜೆಪಿಯ ತಂತ್ರ ಫಲಿಸುವುದಿಲ್ಲ. ಈಶ್ವರಪ್ಪ ಹೇಳುವಂತೆ ದಿಟ್ಟ ಹೋರಾಟಗಾರ ಬಂಗಾರಪ್ಪ ನವರ ಮಕ್ಕಳು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವಷ್ಟು ದುರ್ಬಲರಲ್ಲ ಎಂದ ಆಯನೂರು ಮಂಜುನಾಥ್, ಈಶ್ವರಪ್ಪ ಅವರೇ ನೀವೇ ಡಮ್ಮಿ ಕ್ಯಾಂಡಿಡೇಟ್ ಎಂದು ಕಿಚಾಯಿಸಿದರು.</p><p>ಕೆಲವು ದಿನಗಳ ಹಿಂದೆ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಅವರು ಬಿ.ವೈ.ರಾಘವೇಂದ್ರ ಅವರನ್ನು ಲಿಂಗಾಯಿತರು ಬೆಂಬಲಿಸಬೇಕು ಎಂದು ಹೇಳಿದ್ದು ಕಾಂಗ್ರೆಸ್ ನ ಚುನಾವಣಾ ತಂತ್ರದ ಭಾಗವಾಗಿದೆ. ಇದರಿಂದಾಗಿ ಅಹಿಂದ ಮತಗಳು ಕಾಂಗ್ರೆಸ್ ಗೆ ಹರಿದು ಬರಲಿವೆ. ಗೀತಾ ಶಿವರಾಜಕುಮಾರ್ ಗೆಲುವು ನಿಶ್ಚಿತ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಹಿಂದುಳಿದವರ ಮತ ವಿಭಜನೆ ಆದರೆ ಪುತ್ರ ಬಿ.ವೈ.ರಾಘವೇಂದ್ರ ಗೆಲುವು ಸುಲಭವಾಗಲಿದೆ ಎಂಬ ಕಾರಣಕ್ಕೆ ಕೆ.ಎಸ್.ಈಶ್ವರಪ್ಪ ಅವರನ್ನು ಬಿಜೆಪಿ ಬಂಡಾಯ ಅಭ್ಯರ್ಥಿ ಆಗಿ ಯಡಿಯೂರಪ್ಪ ಅವರೇ ಚುನಾವಣೆಗೆ ನಿಲ್ಲಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದರು.</p><p>ಗೀತಾ ಶಿವರಾಜಕುಮಾರ್ ಡಮ್ಮಿ ಅಭ್ಯರ್ಥಿ ಎಂಬ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿರುಗೇಟು ನೀಡಿದ ಆಯನೂರು ಮಂಜುನಾಥ್, ಈಶ್ವರಪ್ಪ ಅವರದ್ದು ಹುಸಿ ಬಂಡಾಯ. ಬಿಜೆಪಿಯಲ್ಲಿರುವ ನನ್ನ ಹಳೆಯ ಸ್ನೇಹಿತರು ಹೇಳುವಂತೆ ಚುನಾವಣೆಯಲ್ಲಿ ಬಿ.ವೈ.ರಾಘವೇಂದ್ರ ಗೆಲ್ಲಿಸಲು ಯಡಿಯೂರಪ್ಪ-ಈಶ್ವರಪ್ಪ ನಡುವೆ ಒಳ ಒಪ್ಪಂದ ಆಗಿದೆ. ಅದರಂತೆ ಚುನಾವಣೆ ಮುಗಿದ ನಂತರ ಕೆ.ಎಸ್.ಈಶ್ವರಪ್ಪ ರಾಜ್ಯಪಾಲ ಆಗಿ ನೇಮಕಗೊಳ್ಳಲಿದ್ದಾರೆ. ಅವರ ಪುತ್ರ ಕೆ.ಈ.ಕಾಂತೇಶ ಅವರನ್ನು ವಿಧಾನ ಪರಿಷತ್ಗೆ ನಾಮ ನಿರ್ದೇಶನ ಮಾಡಲಾಗುತ್ತಿದೆ ಎಂದರು.</p><p>ಈಶ್ವರಪ್ಪ ದೊಡ್ಡ ಕಲಾವಿದ. ನಾಲಿಗೆಗೆ ಬಣ್ಣ ಹಚ್ಚಿಕೊಂಡಿದ್ದಾರೆ. ಸ್ವತಂತ್ರವಾಗಿ ಸ್ಪರ್ಧಿಸುವಷ್ಟು ಧೈರ್ಯ ಅವರಿಗಿಲ್ಲ. ಆದರೆ ಯಡಿಯೂರಪ್ಪ, ಬಿಜೆಪಿ ಅವರನ್ನು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಕಾಂಗ್ರೆಸ್ ಪರವಾಗಿರುವ ಹಿಂದುಳಿದವರು, ದಲಿತರ ಮತಗಳನ್ನು ವಿಭಜಿಸುವ ತಂತ್ರ ಇದರಲ್ಲಿ ಅಡಗಿದೆ ಎಂದರು.</p><p>ಶಿವಮೊಗ್ಗ ಕ್ಷೇತ್ರದಲ್ಲಿ ಬಂಗಾರಪ್ಪ ಅವರ ಸೋಲಿನ ಸೇಡಿಗೆ ಅವರ ಪುತ್ರಿ ಗೀತಾ ಶಿವರಾಜಕುಮಾರ್ ಅವರನ್ನು ಮತದಾರರು ಬೆಂಬಲಿಸಲಿದ್ದಾರೆ. ಈಶ್ವರಪ್ಪ – ಬಿಜೆಪಿಯ ತಂತ್ರ ಫಲಿಸುವುದಿಲ್ಲ. ಈಶ್ವರಪ್ಪ ಹೇಳುವಂತೆ ದಿಟ್ಟ ಹೋರಾಟಗಾರ ಬಂಗಾರಪ್ಪ ನವರ ಮಕ್ಕಳು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವಷ್ಟು ದುರ್ಬಲರಲ್ಲ ಎಂದ ಆಯನೂರು ಮಂಜುನಾಥ್, ಈಶ್ವರಪ್ಪ ಅವರೇ ನೀವೇ ಡಮ್ಮಿ ಕ್ಯಾಂಡಿಡೇಟ್ ಎಂದು ಕಿಚಾಯಿಸಿದರು.</p><p>ಕೆಲವು ದಿನಗಳ ಹಿಂದೆ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಅವರು ಬಿ.ವೈ.ರಾಘವೇಂದ್ರ ಅವರನ್ನು ಲಿಂಗಾಯಿತರು ಬೆಂಬಲಿಸಬೇಕು ಎಂದು ಹೇಳಿದ್ದು ಕಾಂಗ್ರೆಸ್ ನ ಚುನಾವಣಾ ತಂತ್ರದ ಭಾಗವಾಗಿದೆ. ಇದರಿಂದಾಗಿ ಅಹಿಂದ ಮತಗಳು ಕಾಂಗ್ರೆಸ್ ಗೆ ಹರಿದು ಬರಲಿವೆ. ಗೀತಾ ಶಿವರಾಜಕುಮಾರ್ ಗೆಲುವು ನಿಶ್ಚಿತ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>