‘ನನ್ನ ಮಗ ಸತ್ತಾಗ ನನಗೆ ನರೇಂದ್ರ ಮೋದಿ, ಸುಷ್ಮಾ ಸ್ವರಾಜ್ ಅವರು ಬಹಳ ಸಹಾಯ ಮಾಡಿದ್ದಾರೆ ಎನ್ನುವುದು ಶುದ್ಧ ಸುಳ್ಳು. ಆಗ ನಾನು ಇವರನ್ನು ಸಂಪರ್ಕಿಸಿಯೇ ಇಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು. 'ಸಿದ್ದರಾಮಯ್ಯ ಅವರ ಮಗ ಸತ್ತಾಗ ಮೋದಿ ಅವರು ಮಾಡಿದ ಸಹಾಯವನ್ನು ಸಿದ್ದರಾಮಯ್ಯ ಮರೆತಿದ್ದಾರೆ. ಕನಿಷ್ಠ ಸೌಜನ್ಯ ಕೂಡ ಉಳಿಸಿಕೊಂಡಿಲ್ಲ' ಎಂಬ ಎಚ್.ಡಿ. ಕುಮಾರಸ್ವಾಮಿ ಅವರ ಮಾತಿಗೆ ಬೆಳಗಾವಿ ಜಿಲ್ಲೆ ಗೋಕಾಕದಲ್ಲಿ ಮಂಗಳವಾರ ಪ್ರತಿಕ್ರಿಯಿಸಿದ ಅವರು, 'ನನ್ನ ಮಗ ವಿದೇಶದಲ್ಲಿ ಸತ್ತ. ಮೃತದೇಹ ಇಲ್ಲಿಗೆ ತರಿಸಿ ಅಂತ್ಯಕ್ರಿಯೆ ಮಾಡಿದ್ದೇನೆ ಅಷ್ಟೆ. ಆ ಸಂಸರ್ಭದಲ್ಲಿ ಸಹಾಯಕ್ಕಾಗಿ ಮೋದಿ ಅವರನ್ನಾಗಲಿ, ಬೇರೆ ಯಾರನ್ನೇ ಆಗಲಿ ಸಂಪರ್ಕಿಸುವ ಪ್ರಮೇಯವೇ ಬಂದಿಲ್ಲ. ಇವರೆಲ್ಲ ಸುಳ್ಳು ಹೇಳುತ್ತಿದ್ದಾರೆ' ಎಂದರು.