ಶಿವಮೊಗ್ಗ ಹೊರತುಪಡಿಸಿದರೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದ ಮತ್ತೊಂದು ಲೋಕಸಭಾ ಕ್ಷೇತ್ರ ದಾವಣಗೆರೆ. ತೀವ್ರ ಸ್ಪರ್ಧೆಯನ್ನು ಮೀರಿ ಕಾಂಗ್ರೆಸ್ನ ಪ್ರಭಾ ಮಲ್ಲಿಕಾರ್ಜುನ್ ಇಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಮಾವ, ಶಾಸಕ ಶಾಮನೂರು ಶಿವಶಂಕರಪ್ಪ ಮತ್ತು ಪತಿ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಬಲ ಹಾಗೂ ಕಾಂಗ್ರೆಸ್ ಗ್ಯಾರಂಟಿಗಳ ಫಲ ಪ್ರಭಾ ಅವರನ್ನು ಜಯದ ಗದ್ದುಗೆಗೆ ಏರಿಸಿದೆ. ಬೀಗರಾದ ಬಿಜೆಪಿಯ ಗಾಯತ್ರಿ ಸಿದ್ದೇಶ್ವರ್ ಮತ್ತು ಕಾಂಗ್ರೆಸ್ನ ಬಂಡಾಯ ಅಭ್ಯರ್ಥಿಯಾಗಿದ್ದ ಜಿ.ಬಿ. ವಿನಯ್ಕುಮಾರ್ ವಿರುದ್ಧ ಜಯ ಸಾಧಿಸಿರುವ ಪ್ರಭಾ, ಮೊದಲ ಬಾರಿಗೆ ಲೋಕಸಭೆ ಪ್ರವೇಶಿಸಲು ಅಣಿಯಾಗಿದ್ದಾರೆ.