ಘಟಾನುಘಟಿಗಳ ಸೋಲು–ಗೆಲುವು
ಬಾಗಲಕೋಟೆ: ಈ ಲೋಕಸಭಾ ಕ್ಷೇತ್ರದಿಂದ ಇಬ್ಬರು ಮಾಜಿ ಮುಖ್ಯಮಂತ್ರಿಗಳು ಸ್ಪರ್ಧಿಸಿದ್ದರು ಎನ್ನುವುದು ವಿಶೇಷ. ಒಬ್ಬರು ಗೆಲುವು ಸಾಧಿಸಿದರೆ, ಇನ್ನೊಬ್ಬರು ಸೋಲು ಕಂಡಿದ್ದರು.
1980ರಲ್ಲಿ ಇಂದಿರಾ ಕಾಂಗ್ರೆಸ್ನಿಂದ ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ ಸ್ಪರ್ಧಿಸಿದ್ದರು. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಹುಂಡೇಕಾರ ತೋಟಪ್ಪ ಮಲ್ಲಪ್ಪ ವಿರುದ್ಧ ಗೆಲುವು ಸಾಧಿಸಿದ್ದರು. ಅಲ್ಲದೇ ಕೇಂದ್ರ ಸರ್ಕಾರದಲ್ಲಿ ಸಚಿವರೂ ಆಗಿದ್ದರು.
1991ರಲ್ಲಿ ಜನತಾ ದಳದಿಂದ ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಸ್ಪರ್ಧಿಸಿದ್ದರು. ಅವರ ವಿರುದ್ಧ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಸಿದ್ದು ನ್ಯಾಮಗೌಡರ ಗೆಲುವು ಸಾಧಿಸಿದ್ದರು. ಮಾಜಿ ಪ್ರಧಾನಿ ರಾಜೀವ್ಗಾಂಧಿ ಅವರ ಸಾವು, ಅಂದು ಮುಖ್ಯಮಂತ್ರಿಯಾಗಿದ್ದ ಎಸ್. ಬಂಗಾರಪ್ಪ ಅವರ ಪ್ರಯತ್ನದ ಫಲವಾಗಿ ಹೆಗಡೆ ಅವರಿಗೆ ಸೋಲಾಗಿತ್ತು.