ಹರಿಯಾಣದ ಹಿಸಾರ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯು ರಣಜೀತ್ ಸಿಂಗ್ ಚೌಟಾಲ ಅವರನ್ನು ಸ್ಪರ್ಧೆಗಿಳಿಸಿದೆ. ಉದ್ಯಮಿ ಹಾಗೂ ರಾಜಕಾರಣಿಯಾಗಿರುವ ರಣಜೀತ್ ಅವರು ಈ ಹಿಂದೆ ಶಾಸಕರಾಗಿದ್ದರು. ವಿಧಾನ ಪರಿಷತ್ ಸದಸ್ಯರಾಗಿಯೂ ಆಯ್ಕೆಯಾಗಿದ್ದರು. ಐಎನ್ಎಲ್ಡಿ ಮತ್ತು ಕಾಂಗ್ರೆಸ್ನಲ್ಲಿ ಹಲವು ಕಾಲ ಇದ್ದ ಅವರು ಅನಂತರ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. 2019ರ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿಯ ಬ್ರಿಜೇಂದ್ರ ಸಿಂಗ್ ಅವರು 3,14,068 ಮತಗಳ ಅಂತರದಿಂದ ‘ಜನನಾಯಕ ಜನತಾ ಪಕ್ಷ’ದ (ಜೆಜೆಪಿ) ದುಷ್ಯಂತ ಚೌಟಾಲ ಅವರನ್ನು ಪರಾಭವಗೊಳಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮುಂದಿರಿಸಿಕೊಂಡು ರಣಜೀತ್ ಅವರು ಮತ ಯಾಚಿಸುತ್ತಿದ್ದಾರೆ. ವಿವಿಧ ಬೇಡಿಕೆಗಳನ್ನು ಮುಂದಿರಿಸಿಕೊಂಡು ರೈತರು ನಡೆಸಿರುವ ಪ್ರತಿಭಟನೆಯು ಈ ಬಾರಿ ಚುನಾವಣೆಯ ಮೇಲೂ ಪ್ರಬಾವ ಬಿರುವ ಸಾಧ್ಯತೆ ಇದೆ ಎಂದು ಚುನಾವಣಾ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.