ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರೇಣುಕಸ್ವಾಮಿ ಕೊಲೆ, ದರ್ಶನ್ ಬಂಧನ: ನಟಿ ರಚಿತಾ ರಾಮ್ ಪ್ರತಿಕ್ರಿಯೆ

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಎಕ್ಸ್‌’ನಲ್ಲಿ ಪೋಸ್ಟ್
Published : 18 ಜೂನ್ 2024, 10:59 IST
Last Updated : 18 ಜೂನ್ 2024, 10:59 IST
ಫಾಲೋ ಮಾಡಿ
Comments

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ನಟಿ ರಚಿತಾ ರಾಮ್‌, ‘ಸತ್ಯ ಏನಿದ್ದರೂ ಪೊಲೀಸ್‌ ತನಿಖೆಯಿಂದ ನಮ್ಮ ಮುಂದೆ ಬರಲಿದೆ’ ಎಂದಿದ್ದಾರೆ. 

‘ಧರ್ಮೋ ರಕ್ಷತಿ ರಕ್ಷಿತಃ’ ಎಂಬ ಅಡಿಬರಹ ನೀಡಿ ಪತ್ರವೊಂದನ್ನು ರಚಿತಾ ಪೋಸ್ಟ್‌ ಮಾಡಿದ್ದಾರೆ.

‘ಇದನ್ನು ನಾನು ನಟಿಯಾಗಿ ಅಲ್ಲ ಸಾಮಾನ್ಯ ಪ್ರಜೆಯಾಗಿ ಬರೆಯುತ್ತಿದ್ದಾನೆ. ಇತ್ತೀಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು ಇವು. ಮೊದಲನೇಯದಾಗಿ ರೇಣುಕಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ ಎಂದಿದ್ದಾರೆ.

ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆಂಬ ಭರವಸೆ ನನಗಿದೆ. ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ನಟ ದರ್ಶನ್ ಸರ್ ನನಗೆ ಗುರು ಸಮಾನರು. ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ನಂಬಲು ಸ್ವಲ್ಪ ಕಷ್ಟವಾಗುತ್ತಿದೆ ಎಂದಿದ್ದಾರೆ.

‘ಏನಿದ್ದರೂ ಸತ್ಯ ಪೊಲೀಸ್‌ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದೆ ನನ್ನ ನಂಬಿಕೆ. ನನ್ನ ಮಾಧ್ಯಮ ಮಿತ್ರರು ಈ ಕೇಸ್‌ನ ವರದಿಯಲ್ಲಿ ಪಾರದರ್ಶಕವಾಗಿರುತ್ತಿರಿ ಮತ್ತು ನಿಷ್ಪಕ್ಷವಾಗಿ ಕೆಲಸ ಮಾಡುತ್ತೀರಿ ಎಂದು ಆಶಿಸುತ್ತೇನೆ’ ಎಂದು ಆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT