<p>ನಿರ್ದೇಶಕ ಸಿಂಪಲ್ ಸುನಿ ಕುವೆಂಪು ಅವರ ಕೃತಿಯೊಂದನ್ನು ಸಿನಿಮಾವಾಗಿಸುವುದಾಗಿ ಘೋಷಿಸಿದ್ದರು. ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಚಿತ್ರಕ್ಕೆ ‘ಜಂಗಲ್ ಮಂಗಲ್’ ಎಂದು ಹೆಸರಿಡಲಾಗಿದೆ. ಯಶ್ ಶೆಟ್ಟಿ ಚಿತ್ರದ ನಾಯಕ.</p>.<p>‘ಇದು ಅರೆ ಮಲೆನಾಡಿನ ಕಾಡಿನಲ್ಲಿ ನಡೆಯುವ ಕಥೆ. ಅರೆ ಮಲೆನಾಡು ಎಂದರೆ ಘಟ್ಟದ ಮೇಲ್ಭಾಗ ಹಾಗೂ ಘಟ್ಟದ ಕೆಳಭಾಗ ಸಂಧಿಸುವ ಊರು. ಅಲ್ಲಿ ವಿವಿಧ ಸಂಸ್ಕೃತಿಯ ಜನರು ಇರುತ್ತಾರೆ. ಅಲ್ಲೊಂದು ದಟ್ಟವಾದ ಕಾಡು. ಆ ಕಾಡಿನಲ್ಲಿ ನಡೆಯುವ ಪ್ರೇಮಕಥೆಯೂ ಈ ಚಿತ್ರದಲ್ಲಿದೆ. ಚಿತ್ರದ ಅರ್ಧಕ್ಕೂ ಹೆಚ್ಚಿನ ಭಾಗದ ಚಿತ್ರೀಕರಣ ಸುಬ್ರಹ್ಮಣ್ಯದ ಬಳಿಯ ಕಾಡಿನಲ್ಲೇ ನಡೆದಿದೆ. ಇನ್ನೊಂದು ತಿಂಗಳಲ್ಲಿ ಚಿತ್ರ ತೆರೆಗೆ ಬರಲು ಸಿದ್ಧವಾಗುತ್ತದೆ’ ಎಂದರು ನಿರ್ದೇಶಕ ಸುನಿ.</p>.<p>ಯಶ್ ಶೆಟ್ಟಿಗೆ ಜೋಡಿಯಾಗಿ ಹರ್ಷಿತಾ ರಾಮಚಂದ್ರ ಕಾಣಿಸಿಕೊಂಡಿದ್ದಾರೆ. ಉಗ್ರಂ ಮಂಜು, ಬಲ ರಾಜವಾಡಿ ಮುಂತಾದವರು ಪ್ರಮುಖ ಪಾತ್ರದಲ್ಲಿದ್ದಾರೆ. ಸಹ್ಯಾದ್ರಿ ಸ್ಟುಡಿಯೋಸ್ ಸಂಸ್ಥೆ ಮೂಲಕ ಈ ಚಿತ್ರ ನಿರ್ಮಾಣವಾಗಿದೆ. ಪ್ರಸಾದ್ ಶೆಟ್ಟಿ, ಪೂರ್ಣಚಂದ್ರ ತೇಜಸ್ವಿ ಸಂಗೀತ, ವಿಷ್ಣುಪ್ರಸಾದ್ ಛಾಯಾಚಿತ್ರಗ್ರಹಣ, ಮಂಜು ಶೇಡ್ಗಾರ್ ಸಂಕಲನವಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಿರ್ದೇಶಕ ಸಿಂಪಲ್ ಸುನಿ ಕುವೆಂಪು ಅವರ ಕೃತಿಯೊಂದನ್ನು ಸಿನಿಮಾವಾಗಿಸುವುದಾಗಿ ಘೋಷಿಸಿದ್ದರು. ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಚಿತ್ರಕ್ಕೆ ‘ಜಂಗಲ್ ಮಂಗಲ್’ ಎಂದು ಹೆಸರಿಡಲಾಗಿದೆ. ಯಶ್ ಶೆಟ್ಟಿ ಚಿತ್ರದ ನಾಯಕ.</p>.<p>‘ಇದು ಅರೆ ಮಲೆನಾಡಿನ ಕಾಡಿನಲ್ಲಿ ನಡೆಯುವ ಕಥೆ. ಅರೆ ಮಲೆನಾಡು ಎಂದರೆ ಘಟ್ಟದ ಮೇಲ್ಭಾಗ ಹಾಗೂ ಘಟ್ಟದ ಕೆಳಭಾಗ ಸಂಧಿಸುವ ಊರು. ಅಲ್ಲಿ ವಿವಿಧ ಸಂಸ್ಕೃತಿಯ ಜನರು ಇರುತ್ತಾರೆ. ಅಲ್ಲೊಂದು ದಟ್ಟವಾದ ಕಾಡು. ಆ ಕಾಡಿನಲ್ಲಿ ನಡೆಯುವ ಪ್ರೇಮಕಥೆಯೂ ಈ ಚಿತ್ರದಲ್ಲಿದೆ. ಚಿತ್ರದ ಅರ್ಧಕ್ಕೂ ಹೆಚ್ಚಿನ ಭಾಗದ ಚಿತ್ರೀಕರಣ ಸುಬ್ರಹ್ಮಣ್ಯದ ಬಳಿಯ ಕಾಡಿನಲ್ಲೇ ನಡೆದಿದೆ. ಇನ್ನೊಂದು ತಿಂಗಳಲ್ಲಿ ಚಿತ್ರ ತೆರೆಗೆ ಬರಲು ಸಿದ್ಧವಾಗುತ್ತದೆ’ ಎಂದರು ನಿರ್ದೇಶಕ ಸುನಿ.</p>.<p>ಯಶ್ ಶೆಟ್ಟಿಗೆ ಜೋಡಿಯಾಗಿ ಹರ್ಷಿತಾ ರಾಮಚಂದ್ರ ಕಾಣಿಸಿಕೊಂಡಿದ್ದಾರೆ. ಉಗ್ರಂ ಮಂಜು, ಬಲ ರಾಜವಾಡಿ ಮುಂತಾದವರು ಪ್ರಮುಖ ಪಾತ್ರದಲ್ಲಿದ್ದಾರೆ. ಸಹ್ಯಾದ್ರಿ ಸ್ಟುಡಿಯೋಸ್ ಸಂಸ್ಥೆ ಮೂಲಕ ಈ ಚಿತ್ರ ನಿರ್ಮಾಣವಾಗಿದೆ. ಪ್ರಸಾದ್ ಶೆಟ್ಟಿ, ಪೂರ್ಣಚಂದ್ರ ತೇಜಸ್ವಿ ಸಂಗೀತ, ವಿಷ್ಣುಪ್ರಸಾದ್ ಛಾಯಾಚಿತ್ರಗ್ರಹಣ, ಮಂಜು ಶೇಡ್ಗಾರ್ ಸಂಕಲನವಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>