ಬೆಂಗಳೂರು: ಅನಾರೋಗ್ಯದಿಂದಾಗಿ ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದ ಸೂಪರ್ಸ್ಟಾರ್ ರಜನಿಕಾಂತ್ ಗುರುವಾರ ರಾತ್ರಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಚೆನ್ನೈ ಪೊಲೀಸರನ್ನು ಉಲ್ಲೇಖಿಸಿ ‘ಎಎನ್ಐ’ ಸುದ್ದಿ ಸಂಸ್ಥೆ ವರದಿ ಮಾಡಿದೆ.
ತೀವ್ರ ಹೊಟ್ಟೆನೋವಿನಿಂದಾಗಿ ಸೆಪ್ಟೆಂಬರ್ 30 ರ ಸಂಜೆ ರಜನಿಕಾಂತ್ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೃದಯದ ಮುಖ್ಯ ರಕ್ತನಾಳದಲ್ಲಿ ಊತ ಕಂಡು ಬಂದಿದ್ದರಿಂದ ಟ್ರಾನ್ಸ್ಕ್ಯಾಥೆಟರ್ ಚಿಕಿತ್ಸಾ ವಿಧಾನದಿಂದ ಚಿಕಿತ್ಸೆ ನೀಡಲಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಟಿಪ್ಪಣಿಯಲ್ಲಿ ಹೇಳಲಾಗಿದೆ.