ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಅಭಿಮಾನ್ ಸ್ಟುಡಿಯೊದಲ್ಲಿ ವಿಷ್ಣುವರ್ಧನ್ ಮಂಟಪಕ್ಕೆ ಹೂವಿನ ಅಲಂಕಾರ, ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಲು ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ. ಹಿಂದಿನ ರಾತ್ರಿಯೇ ಹೋಗಿ ಕೇಕ್ ಕತ್ತರಿಸುವುದು ಸೇರಿದಂತೆ ಯಾವುದೇ ಚಟುವಟಿಕೆ ನಡೆಸಿ ಗೊಂದಲ ಸೃಷ್ಟಿಸಬಾರದು ಎಂದು ಸೂಚಿಸಿದ್ದಾರೆ. ವಿಷ್ಣುವರ್ಧನ್ ಸ್ಮರಣಾರ್ಥ ಬುಧವಾರ ರಕ್ತದಾನ ಶಿಬಿರ ನಡೆಸಲಾಗುವುದು. ಅನ್ನದಾನ ಮಾಡಲಾಗುವುದು. ರಾಜ್ಯದ ವಿವಿಧ ಪ್ರದೇಶಗಳ ಸಾವಿರಾರು ಅಭಿಮಾನಿಗಳು ಭಾಗವಹಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.