‘ಕಾಲಘಟ್ಟದಲ್ಲಿ ನಡೆಯುವ ಕಥೆ. ಆಗಿನ ಕಾಲದ ರೀತಿಯ ಹಳ್ಳಿಗಳು ಈಗ ಸಿಗುವುದಿಲ್ಲ. ಹೀಗಾಗಿ ಬಹುತೇಕ ಸೆಟ್ನಲ್ಲಿಯೇ ಚಿತ್ರೀಕರಣ ನಡೆಯುತ್ತಿದೆ. ಬೆಂಗಳೂರು ಸುತ್ತಮುತ್ತ ಸೆಟ್ ಹಾಕಿ ಶೇಕಡ 60ರಷ್ಟು ಚಿತ್ರೀಕರಣ ಮುಗಿಸಿದ್ದೇವೆ. ಇನ್ನೂ 40 ದಿನದ ಚಿತ್ರೀಕರಣ ಬಾಯಿ ಇದೆ. ಉಮಾಶ್ರೀ ಮುಖ್ಯಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ವರ್ಷದೊಳಗೆ ಚಿತ್ರೀಕರಣ ಮುಗಿಸುವ ಯೋಜನೆಯಿದೆ. ರಂಗಾಯಣ ರಘು, ಗೋಪಾಲಕೃಷ್ಣ ದೇಶಪಾಂಡೆ, ಅಚ್ಯುತ್ ಕುಮಾರ್, ಬಿ.ಸುರೇಶ್ ಮೊದಲಾದವರ ಡೇಟ್ ಹೊಂದಿಸಿ ಚಿತ್ರೀಕರಣ ಮಾಡಬೇಕಿದೆ’ ಎಂದು ಜಡೇಶ್ ಮಾಹಿತಿ ನೀಡಿದರು.