<p>ಬಹು ನಿರೀಕ್ಷೆಯ ಬಿಗ್ ಬಾಸ್ ರಿಯಾಲಿಟಿ ಶೋ ಭಾನುವಾರದಿಂದ ಪ್ರಾರಂಭವಾಗಿದ್ದು, 17 ಸ್ಪರ್ಧಿಗಳು ದೊಡ್ಮನೆಯೊಳಗೆ ಕಾಲಿಟ್ಟಿದ್ದಾರೆ. ಅತಿಥಿಯಾಗಿ ಶಾಸಕ ಪ್ರದೀಪ್ ಈಶ್ವರ್ ಮನೆ ಪ್ರವೇಶಿಸಿದ್ದು, ಸ್ಪರ್ಧೆಯ ಕಿಚ್ಚು ಮತ್ತಷ್ಟು ಹೆಚ್ಚಿಸಿದೆ.</p><p>ಡ್ರೋನ್ ವಿಚಾರಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಟ್ರೋಲ್ಗೆ ಒಳಗಾಗಿದ್ದ ಡ್ರೋನ್ ಪ್ರತಾಪ್ ಅವರು ಕೂಡ ಈ ಬಾರಿ ದೊಡ್ಮನೆಗೆ ಪ್ರವೇಶ ಮಾಡಿದ್ದಾರೆ. ತಾನೇನೆಂಬುದನ್ನು ಜನರಿಗೆ ತಿಳಿಸುವ ಉದ್ದೇಶದಿಂದಲೇ ಈ ಶೋ ಆಯ್ಕೆ ಮಾಡಿದ್ದೇನೆ ಎಂದು ಸ್ವತಃ ಅವರು ಹೇಳಿಕೊಂಡಿದ್ದಾರೆ.</p><p>ಆದರೆ, ಬಿಗ್ ಬಾಸ್ ಮನೆಗೆ ಕಾಲಿಡುತ್ತಿದ್ದಂತೆ ಪ್ರತಾಪ್ ಅವರು ಮೌನಕ್ಕೆ ಶರಣಾಗಿದ್ದಾರೆ. ಹಲವಾರು ವೇದಿಕೆಗಳಲ್ಲಿ ನಿರರ್ಗಳವಾಗಿ ಮಾತನಾಡುತ್ತಿದ್ದ ಪ್ರತಾಪ್ ಅವರು ಮನೆಯೊಳಗೆ ಏಕಾಂಗಿ, ಮೌನಿಯಾಗಿರುವುದನ್ನು ಕಂಡು ಇತರ ಸ್ಪರ್ಧಿಗಳು ಅಚ್ಚರಿಪಟ್ಟಿದ್ದಾರೆ. </p><p>ನಿಮಗೆ ತುಂಬಾ ಇಷ್ಟವಾದ ಮತ್ತು ಇಷ್ಟವಲ್ಲದ ಸರ್ಧಿಯ ಹೆಸರು ಹೇಳುವಂತೆ ಶಾಸಕ ಪ್ರದೀಪ್ ಈಶ್ವರ್ ಹೇಳಿದಾಗ, ಹೆಚ್ಚಿನ ಸ್ಪರ್ಧಿಗಳು ಪ್ರತಾಪ್ ಅವರನ್ನು ಇಷ್ಟವಾಗದ ವ್ಯಕ್ತಿ ಎಂದು ಹೇಳಿದ್ದಾರೆ. ಅದಕ್ಕೆ ಅವರೆಲ್ಲ ನೀಡಿದ ಕಾರಣ ಪ್ರತಾಪ್ ಅವರ ಮೌನ.</p><p>ಸ್ಪರ್ಧಿಗಳ ನಿರ್ಧಾರವನ್ನು ಸಮ್ಮತಿಸಿರುವ ಪ್ರತಾಪ್, ಡ್ರೋನ್ ವಿಚಾರಕ್ಕೆ ಮಾನಸಿಕವಾಗಿ ಕುಗ್ಗಿದ್ದು, ಇದೆಲ್ಲದರಿಂದ ಹೊರ ಬರಲು ಸಮಯ ಬೇಕಾಗಿದೆ. ಮುಂದಿನ ದಿನಗಳಲ್ಲಿ ಎಲ್ಲರೊಂದಿಗೆ ಬೆರೆಯುವ ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಹು ನಿರೀಕ್ಷೆಯ ಬಿಗ್ ಬಾಸ್ ರಿಯಾಲಿಟಿ ಶೋ ಭಾನುವಾರದಿಂದ ಪ್ರಾರಂಭವಾಗಿದ್ದು, 17 ಸ್ಪರ್ಧಿಗಳು ದೊಡ್ಮನೆಯೊಳಗೆ ಕಾಲಿಟ್ಟಿದ್ದಾರೆ. ಅತಿಥಿಯಾಗಿ ಶಾಸಕ ಪ್ರದೀಪ್ ಈಶ್ವರ್ ಮನೆ ಪ್ರವೇಶಿಸಿದ್ದು, ಸ್ಪರ್ಧೆಯ ಕಿಚ್ಚು ಮತ್ತಷ್ಟು ಹೆಚ್ಚಿಸಿದೆ.</p><p>ಡ್ರೋನ್ ವಿಚಾರಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಟ್ರೋಲ್ಗೆ ಒಳಗಾಗಿದ್ದ ಡ್ರೋನ್ ಪ್ರತಾಪ್ ಅವರು ಕೂಡ ಈ ಬಾರಿ ದೊಡ್ಮನೆಗೆ ಪ್ರವೇಶ ಮಾಡಿದ್ದಾರೆ. ತಾನೇನೆಂಬುದನ್ನು ಜನರಿಗೆ ತಿಳಿಸುವ ಉದ್ದೇಶದಿಂದಲೇ ಈ ಶೋ ಆಯ್ಕೆ ಮಾಡಿದ್ದೇನೆ ಎಂದು ಸ್ವತಃ ಅವರು ಹೇಳಿಕೊಂಡಿದ್ದಾರೆ.</p><p>ಆದರೆ, ಬಿಗ್ ಬಾಸ್ ಮನೆಗೆ ಕಾಲಿಡುತ್ತಿದ್ದಂತೆ ಪ್ರತಾಪ್ ಅವರು ಮೌನಕ್ಕೆ ಶರಣಾಗಿದ್ದಾರೆ. ಹಲವಾರು ವೇದಿಕೆಗಳಲ್ಲಿ ನಿರರ್ಗಳವಾಗಿ ಮಾತನಾಡುತ್ತಿದ್ದ ಪ್ರತಾಪ್ ಅವರು ಮನೆಯೊಳಗೆ ಏಕಾಂಗಿ, ಮೌನಿಯಾಗಿರುವುದನ್ನು ಕಂಡು ಇತರ ಸ್ಪರ್ಧಿಗಳು ಅಚ್ಚರಿಪಟ್ಟಿದ್ದಾರೆ. </p><p>ನಿಮಗೆ ತುಂಬಾ ಇಷ್ಟವಾದ ಮತ್ತು ಇಷ್ಟವಲ್ಲದ ಸರ್ಧಿಯ ಹೆಸರು ಹೇಳುವಂತೆ ಶಾಸಕ ಪ್ರದೀಪ್ ಈಶ್ವರ್ ಹೇಳಿದಾಗ, ಹೆಚ್ಚಿನ ಸ್ಪರ್ಧಿಗಳು ಪ್ರತಾಪ್ ಅವರನ್ನು ಇಷ್ಟವಾಗದ ವ್ಯಕ್ತಿ ಎಂದು ಹೇಳಿದ್ದಾರೆ. ಅದಕ್ಕೆ ಅವರೆಲ್ಲ ನೀಡಿದ ಕಾರಣ ಪ್ರತಾಪ್ ಅವರ ಮೌನ.</p><p>ಸ್ಪರ್ಧಿಗಳ ನಿರ್ಧಾರವನ್ನು ಸಮ್ಮತಿಸಿರುವ ಪ್ರತಾಪ್, ಡ್ರೋನ್ ವಿಚಾರಕ್ಕೆ ಮಾನಸಿಕವಾಗಿ ಕುಗ್ಗಿದ್ದು, ಇದೆಲ್ಲದರಿಂದ ಹೊರ ಬರಲು ಸಮಯ ಬೇಕಾಗಿದೆ. ಮುಂದಿನ ದಿನಗಳಲ್ಲಿ ಎಲ್ಲರೊಂದಿಗೆ ಬೆರೆಯುವ ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>