‘ಜನಾಂದೋಲನ ರೂಪಿಸುತ್ತೇವೆ’ ಒಳ ಮೀಸಲಾತಿ ವಿಚಾರದಲ್ಲಿ ನಮಗೆ ಸ್ಪಷ್ಟತೆ ಇದೆ. ಪಕ್ಷದಲ್ಲಿ ಎಲ್ಲ ನಾಯಕರ ಸಹಮತ ಇದೆ. ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಸರ್ಕಾರಗಳು ತೆಗೆದುಕೊಂಡ ನಿರ್ಣಯವನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಲಿ. ಪರಿಶಿಷ್ಟ ಜಾತಿ ಮತ್ತು ಪಂಗಡಗಳು ಹಾಗೂ ಹಿಂದುಳಿದವರಿಗೆ ನ್ಯಾಯೋಚಿತವಾಗಿ ಮೀಸಲಾತಿ ವರ್ಗೀಕರಣ ಮಾಡಲಾಗಿದೆ. ಬೊಮ್ಮಾಯಿ ಸರ್ಕಾರ ಕೇಂದ್ರಕ್ಕೆ ನೀಡಿದ ಶಿಫಾರಸನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಈ ವಿಷಯದ ಕುರಿತಾಗಿ ರಾಜ್ಯವ್ಯಾಪಿ ಜನರಲ್ಲಿ ಅರಿವು ಮೂಡಿಸುವ ಜನಾಂದೋಲನ ರೂಪಿಸುತ್ತೇವೆ. ಅದಕ್ಕೂ ಮುನ್ನ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ನಮ್ಮ ಸರ್ಕಾರದ ನಿರ್ಧಾರವನ್ನು ಜಾರಿ ಮಾಡುವಂತೆ ಆಗ್ರಹಿಸುತ್ತೇವೆ.