ಬೆಂಗಳೂರು: ಕಳೆದ ಒಂದು ವಾರದಿಂದ ರಾಜ್ಯದಲ್ಲಿ ತಾಪಮಾನ ಹೆಚ್ಚಾಗುತ್ತಿದೆ. ದಿನದ 24 ಗಂಟೆಯೂ ಕನಿಷ್ಠ 28-43 ಡಿಗ್ರಿ ಸೆಲ್ಸಿಯಸ್ ಉಷ್ಟಾಂಶ ದಾಖಲಾಗುತ್ತಿದೆ.
ಇದರ ಪರಿಣಾಮ ಬಿಸಿಗಾಳಿ ಬೀಸುತ್ತಿದ್ದು, ಬೇಸಿಗೆಯ ಝಳ ದಿನೇ ದಿನೇ ಹೆಚ್ಚಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರಿಂದ ಶಾಖಾಘಾತವಾಗುವ ಸಾಧ್ಯತೆ ಇರಲಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಶಾಖಾಘಾತದ ಲಕ್ಷಣಗಳಿವು
ಅರೆ ಪ್ರಜ್ಞಾವಸ್ಥೆ, ಪ್ರಜ್ಞೆ ತಪ್ಪುವುದು
ತಲೆ ಸುತ್ತುವಿಕೆ, ತಲೆನೋವು,
ಸುಸ್ತು ಅಥವಾ ಸೆಳೆತ, ವಾಕರಿಕೆ ಮತ್ತು ವಾಂತಿ
ಮಕ್ಕಳಲ್ಲಿ ಆಹಾರ ಸೇವಿಸಲು ನಿರಾಕರಿಸುವುದು
ಆಲಸ್ಯ, ಗಾಬರಿಗೊಳ್ಳುವುದು, ಆತಂಕ, ಸಿಡಿಮಿಡಿಗೊಳ್ಳುವುದು
ಬಾಯಿ ಒಣಗುವಿಕೆ, ಚರ್ಮವು ಬಿಸಿಯಾಗುವುದು,
ಈ ಲಕ್ಷಣಗಳು ಕಂಡುಬಂದರೆ ವೈದ್ಯರನ್ನು ಭೇಟಿ ಮಾಡಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ.