ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ದಿನ
ವಾರ
ಮಾಸ
ವಾರ್ಷಿಕ
ದಿನ ಭವಿಷ್ಯ: ಶತ್ರುಗಳ ಗಾಳಕ್ಕೆ ಸಿಕ್ಕಿಕೊಳ್ಳದಂತೆ ಎಚ್ಚರವಹಿಸಬೇಕು
Published 21 ಜುಲೈ 2024, 23:47 IST
ವಿದ್ಯಾಶಂಕರ ಸೋಮಯಾಜಿ, ಕಮ್ಮರಡಿ
ಮೇಷ
ಅವಶ್ಯಕತೆ ಇರುವ ಜಾಗದಲ್ಲಿ ಜಿಪುಣತನವನ್ನು ತೋರಿಸಿ ಸಮಾಜದಲ್ಲಿ ಗೌರವ ಕಳೆದುಕೊಳ್ಳುವಂತಾಗಬಹುದು ಎಚ್ಚರಿಕೆ. ಶತ್ರುಗಳ ಗಾಳಕ್ಕೆ ಸಿಕ್ಕಿಕೊಳ್ಳದಂತೆ ಎಚ್ಚರವಹಿಸಬೇಕು. ‌
ವೃಷಭ
ವಂಶಪಾರಂಪರಿಕವಾಗಿ ಬಂದ ವ್ಯವಹಾರ ಅಥವಾ ವೃತ್ತಿಯಲ್ಲಿ ಮತ್ತಷ್ಟು ಏಳಿಗೆ ಕಾಣಲಿದೆ. ಕಾರ್ಮಿಕರ ಸಮಸ್ಯೆಗಳಿಗೆ ಪ್ರತಿಕ್ರಿಯೆ ನೀಡಿ ಅವರ ಮನಸ್ಸಿನಲ್ಲಿ ಉತ್ತಮ ಸ್ಥಾನ ಸಂಪಾದಿಸಿಕೊಳ್ಳುವಿರಿ.
ಮಿಥುನ
ಅಗತ್ಯ ವಸ್ತುಗಳ ಖರೀದಿಗೆ ಹಣ ವಿನಿಯೋಗ ಆಗುವುದು. ರಾಜಕಾರಣಿಗಳೊಂದಿಗೆ ಬೆಳೆಸಿಕೊಂಡ ಒಡನಾಟ ಕಾರಾಗೃಹ ವಾಸದಂಥ ಅಪಾಯದ ಪರಿಸ್ಥಿತಿ ತಂದೊಡ್ಡಲಿದೆ. ಸಮ್ಮಿಶ್ರ ಫಲ ಕಾಣುವಿರಿ.
ಕರ್ಕಾಟಕ
ಗೃಹ ನಿರ್ಮಾಣದಂತಹ ಕಾರ್ಯ ಕೈಗೊಂಡವರಿಗೆ ಆರ್ಥಿಕತೆ ಸ್ವಲ್ಪ ಮಟ್ಟಿನ ತೊಂದರೆಯನ್ನು ಸೃಷ್ಟಿ ಮಾಡುವುದು. ವ್ಯಾಪಾರ-ವ್ಯವಹಾರದಲ್ಲಿ ಲಾಭಾಂಶ ಕಡಿಮೆಯಾದರೂ ಮೂಲಧನಕ್ಕೆ ಮೋಸವಾಗುವುದಿಲ್ಲ.
ಸಿಂಹ
ಸರಿಯಾದ ಪರಿಶೀಲನೆ ಇಲ್ಲದೆ ಯಾವ ಕೆಲಸಗಳಲ್ಲೂ ಹೂಡಿಕೆ ಮಾಡುವುದು ಸಮಂಜಸವಲ್ಲ.ಹಾಸ್ಯ ಪ್ರಜ್ಞೆ ಹೆಚ್ಚಾಗುವುದು. ಆದರೆ, ಬೇರೆಯವರ ಮನಸ್ಸಿಗೆ ನೋವು ಉಂಟಾಗದಂತೆ ನೋಡಿಕೊಳ್ಳಿ.
ಕನ್ಯಾ
ಅನಿರೀಕ್ಷಿತ ಅವಕಾಶಗಳನ್ನು ಯಾವುದೇ ಮುಜುಗರವಿಲ್ಲದೆ ಬಳಸಿಕೊಳ್ಳದ್ದಿದ್ದರೆ ದಡ್ಡತನ ಪ್ರದರ್ಶಿಸಿದಂತಾಗುವುದು. ವಿಮಾ ಕ್ಷೇತ್ರದಿಂದ ಆಗಬೇಕಾದ ಸಹಕಾರದಲ್ಲಿ ಗೊಂದಲಗಳು ಉದ್ಭವಿಸಬಹುದು.
ತುಲಾ
ಮನೆಯಲ್ಲಿ ಶಾಂತ ವಾತಾವರಣವಿದ್ದು ನಿಧಾನಗತಿಯ ಕೆಲಸ ಕಾರ್ಯಗಳು ಚುರುಕಾಗಿ ಮನಸ್ಸಿಗೆ ತುಸು ನೆಮ್ಮದಿ ಬರುವುದು. ಅವಿವಾಹಿತ ಹೆಣ್ಣು ಮಕ್ಕಳಿಗೆ ಅನಿರೀಕ್ಷಿತ ಕಂಕಣಬಲ ಕೂಡಿಬರುವುದು.
ವೃಶ್ಚಿಕ
ಕುಟುಂಬ ವರ್ಗದಲ್ಲಿ ಸಲಹೆಗಳಿಗೆ ಆದ್ಯತೆ ದೊರೆಯಲಿದೆ. ಹೊಂದಾಣಿಕೆಯು ಜಗದ ನಿಯಮ. ಆಸ್ತಿ ಕೊಳ್ಳುವ ನಿರ್ಧಾರದಲ್ಲಿ ಮನೋಭಾವವನ್ನು ಬದಲಿಸಿಕೊಳ್ಳಬೇಕಾಗುತ್ತದೆ.
ಧನು
ದವಸ ಧಾನ್ಯ ಹಾಗೂ ಮಸಾಲಾ ಸಾಮಗ್ರಿಗಳ ಸಗಟು ಹಾಗೂ ರಫ್ತು ವ್ಯಾಪಾರಿಗಳಿಗೆ ಈ ದಿನ ವ್ಯವಹಾರದಲ್ಲಿ ಅನುಕೂಲವಾಗುವುದು. ವೃತ್ತಿರಂಗದ ಕೆಲವು ಸೂಕ್ಷ್ಮ ವಿಚಾರಗಳನ್ನು ಅರ್ಥಮಾಡಿಕೊಳ್ಳಿ.
ಮಕರ
ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದಿದ್ದರೆ ಎಲ್ಲವನ್ನೂ ಸುಲಭವಾಗಿ ನಿಭಾಯಿಸಬಹುದು. ನಿಮ್ಮ ವೃತ್ತಿ ಜೀವನಕ್ಕೆ ಸಂಬಂಧಪಟ್ಟಂಥ ವಿಚಾರದಲ್ಲಿ ನಿರ್ಣಯ ಕೈಗೊಳ್ಳಲು ಆಪ್ತರೊಬ್ಬರ ಸಲಹೆ ಕೇಳುವಿರಿ.
ಕುಂಭ
ರಿಯಲ್ ಎಸ್ಟೇಟುದಾರರಿಗೆ ಉತ್ತಮ ಧನಲಾಭವಿರುವ ಅವಕಾಶಗಳಿಂದ ವ್ಯವಹಾರಗಳು ವೃದ್ಧಿಗೊಳ್ಳಲಿದೆ. ಗುಮಾಸ್ತ ಕೆಲಸದಲ್ಲಿದ್ದವರಿಗೆ ಪೂರ್ಣ ವಿರಾಮ ಸಿಗುವಂತೆ ಆಗುವ ಸಾಧ್ಯತೆ ಇದೆ.
ಮೀನ
ಭವಿಷ್ಯದ ದೃಷ್ಟಿಯಿಂದ ಯಾವುದೇ ವಿಷಯವನ್ನು ದೊಡ್ಡದು ಸಣ್ಣದು ಎಂಬ ಭೇದ ಮಾಡದೇ ತಕ್ಷಣ ಕಾರ್ಯೋನ್ಮುಖರಾಗುವುದು ಉತ್ತಮ. ಪೊಲೀಸ್ ವೃತ್ತಿಯಲ್ಲಿರುವವರಿಗೆ ಸಂಚಾರ ಕಂಡುಬರಲಿದೆ.