ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ದಿನ
ವಾರ
ಮಾಸ
ವಾರ್ಷಿಕ
ದಿನ ಭವಿಷ್ಯ: ರಾಜಕೀಯ ಸೇರ್ಪಡೆಗೆ ಆಹ್ವಾನ ಬರಲಿದೆ, ದೂರ ಉಳಿಯುವುದು ಕ್ಷೇಮ
Published 22 ಜುಲೈ 2024, 23:30 IST
ವಿದ್ಯಾಶಂಕರ ಸೋಮಯಾಜಿ, ಕಮ್ಮರಡಿ
ಮೇಷ
ವೈಯಕ್ತಿಕ ಆಸೆ ಆಕಾಂಕ್ಷೆಗಳು ಪೂರ್ಣಗೊಳ್ಳುವತ್ತ ಸಾಗುವುದು. ವಾಹನದ ವಹಿವಾಟುಗಳನ್ನು ಮಾಡುವವರು ಲಾಭ ಪಡೆಯಬಹುದು. ಚಿಲ್ಲರೆ ವ್ಯಾಪಾರಿಗಳಿಗೆ, ಸಿಹಿ ತಿನಿಸು ಮಾರಾಟಗಾರರಿಗೆ ಹೆಚ್ಚಿನ ಲಾಭ.
ವೃಷಭ
ಷೇರು ವ್ಯವಹಾರ, ಸಿನಿಮಾ ತಯಾರಿಕೆಯಂಥ ಕಾರ್ಯ ಲಾಭ ತರಲಿದೆ. ವೃತ್ತಿ ಜೀವನವನ್ನು ಗಂಭೀರವಾಗಿ ಪರಿಗಣಿಸುವಿರಿ. ಗಣ್ಯ ವ್ಯಕ್ತಿಯೊಬ್ಬರನ್ನು ಭೇಟಿಯಾಗುವ ಸಂದರ್ಭ ಬರುವುದು.
ಮಿಥುನ
ದೈನಂದಿನ ಬದುಕಿನ ವಿಚಾರಗಳಲ್ಲಿ ನಡೆದಿರುವ ಸಣ್ಣ ಪುಟ್ಟ ಬದಲಾವಣೆಯಿಂದ ಮಾನಸಿಕ ನೆಮ್ಮದಿ ಕಳೆದುಕೊಳ್ಳುವಿರಿ. ಕೆಲಸದ ಒತ್ತಡದಿಂದ ದೇಹಾಯಾಸವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ.
ಕರ್ಕಾಟಕ
ಶೈಕ್ಷಣಿಕ ರಂಗದಲ್ಲಿ ಚಟುವಟಿಕೆಗಳಿಂದ ಉತ್ತಮ ಹೆಸರನ್ನು ಗಳಿಸಿಕೊಳ್ಳಬಹುದು. ರಾಜಕೀಯ ಸೇರ್ಪಡೆಗೆ ಆಹ್ವಾನ ಬರಲಿದೆ. ದೂರ ಉಳಿಯುವುದು ಕ್ಷೇಮ. ಕೆಲಸದ ಒತ್ತಡ ಕಡಿಮೆಯಾಗಲಿದೆ.
ಸಿಂಹ
ವಿದೇಶ ಪ್ರಯಾಣದ ಕನಸು ನೆರವೇರುವ ಅವಕಾಶ ಸಿಗುವುದು. ಧನಾದಾಯಕ್ಕೆ ಯಾವುದೇ ರೀತಿಯ ಅಡ್ಡಿ ಆತಂಕಗಳು ಇರುವುದಿಲ್ಲ. ಆತ್ಮವಿಶ್ವಾಸದಿಂದ ಎಲ್ಲವನ್ನೂ ಸಾಧಿಸಲಿದ್ದೀರಿ.
ಕನ್ಯಾ
ಎಲ್ಲಾ ಆಸೆಗಳನ್ನು ಕೈಬಿಟ್ಟು ಜೀವನ ನಡೆಸುವ ಸಮಯದಲ್ಲಿ ಅದೃಷ್ಟ ಕೈ ಬೀಸಿ ಕರೆಯುವುದು. ದೇಹದಲ್ಲಿ ಉತ್ಸಾಹವಿರುವುದರಿಂದ ಎಲ್ಲ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು.
ತುಲಾ
ವೃತ್ತಿಯಲ್ಲಿ ಪರಿಸ್ಥಿತಿಯನ್ನು ಹತೋಟಿಗೆ ತರಲು ನಾಯಕನನ್ನು ಜಾಗೃತ ಗೊಳಿಸಿ. ಒಪ್ಪಂದ ಹಾಗೂ ಸಹಕಾರಗಳು ಇಂದು ಬಹಳ ಸುಲಭವಾಗುವುದು.ಕಾರ್ಯಕ್ಷೇತ್ರದಲ್ಲಿ ಸ್ಥಾನಮಾನ, ಗೌರವ ತೋರಿಬರುವುದು.
ವೃಶ್ಚಿಕ
ಸ್ವಯಂಕೃತ ಅಪರಾಧದಿಂದ ಜೀವನದಲ್ಲಿ ಉಲ್ಲಾಸ ಕಳೆದುಕೊಳ್ಳುವ ಸಮಯ ಎದುರಾಗಲಿದೆ. ಮಂಗಳಕಾರ್ಯಗಳು ನಡೆಯುವ ಸೂಚನೆ ಕಾಣುತ್ತದೆ. ಸ್ವಂತ ಉದ್ಯೋಗ ಮಾಡುವವರು ಪ್ರಗತಿ ಕಾಣಲಿದ್ದೀರಿ.
ಧನು
ವಾಹನಗಳ ಅಥವಾ ದೊಡ್ಡ ದೊಡ್ಡ ಯಂತ್ರಗಳಲ್ಲಿ ಕೆಲಸ ಮಾಡುವವರಿಗೆ ಜಾಗ್ರತೆ ಅಗತ್ಯ.ಔದ್ಯೋಗಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಬಡ್ತಿ ದೊರೆಯುವ ಸಂಭವವಿದೆ. ಭೂ ವ್ಯವಹಾರಗಳು ಕೈಗೂಡುವುದು.
ಮಕರ
ಕೃಷಿ ಕ್ಷೇತ್ರದಲ್ಲಿ ಇರುವವರಿಗೆ ಅಧಿಕ ಲಾಭ. ಅದರಲ್ಲೂ ತರಕಾರಿ ಮಾರಾಟಗಾರರಿಗೆ ಕುಬೇರನ ಅನುಗ್ರಹ ಸಿಗಲಿದೆ. ಸಂಗೀತದಲ್ಲಿ ಪರಿಣತಿ ಹೊಂದಿರುವವರಿಗೆ ಉತ್ತಮ ಅವಕಾಶಗಳು ಅರಸಿ ಬರಲಿವೆ.
ಕುಂಭ
ಆಫೀಸಿನ ಕೆಲಸದ ವಿಚಾರದಲ್ಲಿ ಕ್ರಮ ಮತ್ತು ಉತ್ಸಾಹವನ್ನು ಕೈಗೊಳ್ಳಬೇಕಾಗುವುದು. ಸರ್ಕಾರಿ ಅಧಿಕಾರಿಗಳು ಕಾನೂನು ವಿಷಯಗಳತ್ತ ಗಮನ ಹರಿಸಬೇಕಾಗಬಹುದು. ದಿಢೀರ್ ಪ್ರಯಾಣದ ಸಂಭವವಿರಲಿದೆ.
ಮೀನ
ಸೃಜನಶೀಲ ಯೋಜನೆಯನ್ನು ಮುಂದುವರಿಸಲು ಶುಭದಿನ. ಪ್ರಿಯ ವ್ಯಕ್ತಿಯೊಂದಿಗೆ ವಿಚಾರ ವಿನಿಮಯ ಮಾಡಿಕೊಳ್ಳುವುದು ಒಳ್ಳೆಯದು. ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಕೆಲಸವಿರಲಿದೆ.
ADVERTISEMENT
ADVERTISEMENT