<p><strong>ಬೆಂಗಳೂರು</strong>: ‘ಸಚಿವರು ಇಲಾಖಾ ಕಾರ್ಯಕ್ರಮ ಹಾಗೂ ಕೋವಿಡ್ ಸಭೆಗಳಲ್ಲಿ ನಿರತರಾಗಿದ್ದರಿಂದ ಅವರ ಉಸ್ತುವಾರಿ ಜಿಲ್ಲೆಯಾದ ದಕ್ಷಿಣ ಕನ್ನಡಕ್ಕೆ ಸಾರ್ವಜನಿಕರ ಅಹವಾಲು ಸ್ವೀಕರಿಸಲು ತೆರಳಿದ್ದೆ. ಈ ಪ್ರಯಾಣದ ವೆಚ್ಚವನ್ನು ಸ್ವಂತ ಹಣದಿಂದಲೇ ಭರಿಸಿದ್ದೇನೆ’ ಎಂದು ಆರೋಗ್ಯ ಸಚಿವರ ಆಪ್ತ ಕಾರ್ಯದರ್ಶಿ (ಪಿ.ಎಸ್) ಕೆ.ಎ.ಹಿದಾಯತ್ ಉಲ್ಲಾ ತಿಳಿಸಿದ್ದಾರೆ.</p>.<p>‘ಕರ್ತವ್ಯ ನಿಮಿತ್ತ ಪ್ರವಾಸದ ವೇಳಾಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿತ್ತು. ಸರ್ಕಾರದಿಂದ ವೆಚ್ಚ ಭರಿಸಿಕೊಳ್ಳುವ ಉದ್ದೇಶ ಇಲ್ಲ’ ಎಂದು ತಿಳಿಸಿದ್ದಾರೆ.</p>.<p>‘ಸಚಿವರ ಪಿ.ಎಸ್ಗೆ ಸರ್ಕಾರದಲ್ಲಿ ಪ್ರಯಾಣ ಭತ್ಯೆಯನ್ನು ಮರುಪಾವತಿ ಮಾಡಿಕೊಳ್ಳಲು ಅವಕಾಶ ಇರುವುದಿಲ್ಲ. ಇದುವರೆಗೂ ಯಾವುದೇ ವೆಚ್ಚ ಪಡೆದಿಲ್ಲ’ ಎಂದು ಹೇಳಿದ್ದಾರೆ.</p>.<p>‘ಪ್ರವಾಸದ ವಿವರವನ್ನು ನೀಡದೇ ಅಧಿಕಾರಿಗಳು ಪ್ರವಾಸ ಕೈಗೊಳ್ಳುವುದು ಸರ್ಕಾರದ ನಿಯಮಕ್ಕೆ ವಿರುದ್ಧವಾದದ್ದು. ಆ ಕಾರಣಕ್ಕಾಗಿಯೇ ನಾನು ಸರ್ಕಾರಕ್ಕೆ ಮಾಹಿತಿ ನೀಡಿ ಪ್ರವಾಸ ಕೈಗೊಂಡಿದ್ದೇನೆ’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಸಚಿವರು ಇಲಾಖಾ ಕಾರ್ಯಕ್ರಮ ಹಾಗೂ ಕೋವಿಡ್ ಸಭೆಗಳಲ್ಲಿ ನಿರತರಾಗಿದ್ದರಿಂದ ಅವರ ಉಸ್ತುವಾರಿ ಜಿಲ್ಲೆಯಾದ ದಕ್ಷಿಣ ಕನ್ನಡಕ್ಕೆ ಸಾರ್ವಜನಿಕರ ಅಹವಾಲು ಸ್ವೀಕರಿಸಲು ತೆರಳಿದ್ದೆ. ಈ ಪ್ರಯಾಣದ ವೆಚ್ಚವನ್ನು ಸ್ವಂತ ಹಣದಿಂದಲೇ ಭರಿಸಿದ್ದೇನೆ’ ಎಂದು ಆರೋಗ್ಯ ಸಚಿವರ ಆಪ್ತ ಕಾರ್ಯದರ್ಶಿ (ಪಿ.ಎಸ್) ಕೆ.ಎ.ಹಿದಾಯತ್ ಉಲ್ಲಾ ತಿಳಿಸಿದ್ದಾರೆ.</p>.<p>‘ಕರ್ತವ್ಯ ನಿಮಿತ್ತ ಪ್ರವಾಸದ ವೇಳಾಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿತ್ತು. ಸರ್ಕಾರದಿಂದ ವೆಚ್ಚ ಭರಿಸಿಕೊಳ್ಳುವ ಉದ್ದೇಶ ಇಲ್ಲ’ ಎಂದು ತಿಳಿಸಿದ್ದಾರೆ.</p>.<p>‘ಸಚಿವರ ಪಿ.ಎಸ್ಗೆ ಸರ್ಕಾರದಲ್ಲಿ ಪ್ರಯಾಣ ಭತ್ಯೆಯನ್ನು ಮರುಪಾವತಿ ಮಾಡಿಕೊಳ್ಳಲು ಅವಕಾಶ ಇರುವುದಿಲ್ಲ. ಇದುವರೆಗೂ ಯಾವುದೇ ವೆಚ್ಚ ಪಡೆದಿಲ್ಲ’ ಎಂದು ಹೇಳಿದ್ದಾರೆ.</p>.<p>‘ಪ್ರವಾಸದ ವಿವರವನ್ನು ನೀಡದೇ ಅಧಿಕಾರಿಗಳು ಪ್ರವಾಸ ಕೈಗೊಳ್ಳುವುದು ಸರ್ಕಾರದ ನಿಯಮಕ್ಕೆ ವಿರುದ್ಧವಾದದ್ದು. ಆ ಕಾರಣಕ್ಕಾಗಿಯೇ ನಾನು ಸರ್ಕಾರಕ್ಕೆ ಮಾಹಿತಿ ನೀಡಿ ಪ್ರವಾಸ ಕೈಗೊಂಡಿದ್ದೇನೆ’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>