ಸಾಹಿತಿ ನಾ. ದಾಮೋದರ ಶೆಟ್ಟಿ ಮಾತನಾಡಿ, ‘ಎಚ್.ಎಸ್. ವೆಂಕಟೇಶಮೂರ್ತಿ ಅವರ ಬಗ್ಗೆ ಮಾತನಾಡುವುದೇ ಒಂದು ಸೊಗಸು. ಅವರ ಬಹುಪಾಲು ಕಾವ್ಯವನ್ನು ಗಮನಿಸಿದ್ದಲ್ಲಿ ಯಾವುದೇ ಸಂದರ್ಭದಲ್ಲೂ ಏಳು–ಬೀಳುಗಳನ್ನು ಕಾಣಲು ಸಾಧ್ಯವಿಲ್ಲ. ಎಚ್.ಎಸ್.ವೆಂಕಟೇಶಮೂರ್ತಿ ಅವರ ಬುದ್ಧ ಚರಣ ಮಹಾಕಾವ್ಯ ಕನ್ನಡ ಕಾವ್ಯ ಪರಂಪರೆಗೆ ಕೊಟ್ಟ ದೊಡ್ಡ ಕೊಡುಗೆ’ ಎಂದು ಹೇಳಿದರು.