<p><strong>ಬೆಂಗಳೂರು:</strong> ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಿದ ಕಾರಣಕ್ಕೆ ಮುನಿಸಿಕೊಂಡು ಬಿಜೆಪಿ ತೊರೆದಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಒಂಬತ್ತು ತಿಂಗಳಲ್ಲೇ ಬಿಜೆಪಿಗೆ ಮರಳಿದ್ದಾರೆ. ಅವರು ಕಾಂಗ್ರೆಸ್ನಲ್ಲಿದ್ದಾಗ ಮಾಡಿದ ಮಾತುಗಳು ಇವು..</p><ul><li><p>ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗ ಬೇಕು ಎಂಬುದು ನನ್ನನ್ನು ಸೇರಿಸಿ ಕೋಟ್ಯಂತರ ಜನರ ಅಭಿಲಾಷೆ. ಆದರೆ, ಬಿಜೆಪಿ ಧರ್ಮದಲ್ಲಿ ರಾಜಕೀಯ ಬೆರೆಸಿ ಸಮಾಜಕ್ಕೆ ತಪ್ಪು ಸಂದೇಶ ರವಾನಿಸುತ್ತಿದೆ</p></li></ul><ul><li><p> ರಾಮಮಂದಿರ ಉದ್ಘಾಟನೆ ಮುಖ್ಯವೋ, ಕಾಂಗ್ರೆಸ್ ಪಕ್ಷ ಟೀಕಿಸುವುದು ಮುಖ್ಯವೋ? ಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಹೋಗದಿದ್ದರೆ ಹಿಂದೂ ವಿರೋಧಿ ಎಂಬ ಪಟ್ಟ ಕಟ್ಟಿ, ಲೋಕಸಭಾ ಚುನಾವಣೆಗೆ ಉಪಯೋಗಿಸಿಕೊಳ್ಳುವುದು ಬಿಜೆಪಿಯ ಷಡ್ಯಂತ್ರ</p></li><li><p>ಕಾಂಗ್ರೆಸ್ ಹಿಂದೂ ವಿರೋಧಿಯಾಗಿದ್ದರೆ, ಹಿಂದೂಗಳು ಮತ ಹಾಕದಿದ್ದರೆ ರಾಜ್ಯದಲ್ಲಿ 136 ಸ್ಥಾನ ಬರಲು ಸಾಧ್ಯವಿತ್ತೇ? ಧಾರ್ಮಿಕ ವಿಷಯಗಳು ಭಾವನಾತ್ಮಕ ಹಾಗೂ ತಾತ್ಕಾಲಿಕವಾಗಿದ್ದು, ಬಿಜೆಪಿ ಇದನ್ನೇ ಮುಂದಿಟ್ಟುಕೊಂಡು ಮಾತನಾಡುತ್ತಿದ್ದರೆ ಜಾಸ್ತಿ ದಿನ ಇರುವುದಿಲ್ಲ</p></li><li><p> ಶ್ರೀಕಾಂತ ಪೂಜಾರಿಗೆ ಸಂಬಂಧಿಸಿದ ಬೆಳವಣಿಗೆಗಳು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಡೆದಿವೆ. ಇದರ ಹಿಂದೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಕೈವಾಡವಿದೆ. ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಅವರು ಹಿಂದೂ–ಮುಸ್ಲಿಮರ ನಡುವೆ ವೈಮನಸ್ಸು ಮೂಡಿಸುತ್ತಿದ್ದಾರೆ.</p></li><li><p> ನಾನು ಮತ್ತೆ ಬಿಜೆಪಿ ಸೇರುತ್ತೇನೆ ಎಂದು ಸುಳ್ಳು ಸುದ್ದಿ ಹಬ್ಬಿಸಿ, ಆ ಪಕ್ಷದಿಂದ ಹೊರ ಹೋಗುವವರನ್ನು ತಡೆಯುವ ಕೆಲಸವಾಗುತ್ತಿದೆ. ನಾನು ಮತ್ತೆ ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ. ಸಾರ್ವಜನಿಕರಲ್ಲಿ ಗೊಂದಲ ಮೂಡಿಸುವ ಕೆಲಸ ಬಿಜೆಪಿ ಮಾಡುತ್ತಿದೆ. ಈವರೆಗೂ ನನ್ನನ್ನು ಯಾರೂ ಭೇಟಿಯಾಗಿಲ್ಲ. ಭೇಟಿಯಾಗುವ ಅಗತ್ಯವೂ ಇಲ್ಲ.</p></li><li><p>ಯಾರದ್ದೋ ವೈಯಕ್ತಿಕ ಹಿತಾಸಕ್ತಿಗಾಗಿ ನನಗೆ ಟಿಕೆಟ್ ತಪ್ಪಿಸಿ ಅಪಮಾನ ಮಾಡಲಾಯಿತು. ಅದನ್ನು ಸಹಿಸಲು ಸಾಧ್ಯವಾಗದೆ ಅಲ್ಲಿಂದ ಹೊರಬಂದಿರುವೆ. ಪಕ್ಷಕ್ಕಾಗಿ ದುಡಿದ ವ್ಯಕ್ತಿಗೆ ಟಿಕೆಟ್ ನೀಡಿಲ್ಲ ಎಂದಾದರೆ, ತತ್ವ, ಸಿದ್ಧಾಂತ ಏಕೆ ಬೇಕು? ಕೆ.ಎಸ್.ಈಶ್ವರಪ್ಪ ಅವರಿಗೂ ನನ್ನಂತೆ ಆಗಿದ್ದರೆ ಅವರಿಗೆ ಗೊತ್ತಾಗುತ್ತಿತ್ತು.</p></li><li><p>ಚಿತ್ತಾಪುರದಲ್ಲಿ ಪ್ರಿಯಾಂಕ್ ಖರ್ಗೆ ವಿರುದ್ಧ 80 ಕ್ರಿಮಿ ನಲ್ ಪ್ರಕರಣ ಇದ್ದ ವ್ಯಕ್ತಿಗೆ ಟಿಕೆಟ್ ನೀಡಲಾಯಿತು. ಬೇರೆ ಪಕ್ಷದಿಂದ ಬಂದವರಿಗೆ ಮಣೆ ಹಾಕಲಾಯಿತು. ಅಡ್ವಾಣಿ, ವಾಜಪೇಯಿ ಅವರ ಕಾಲದಲ್ಲಿದ್ದ ಭ್ರಷ್ಟಾಚಾರ ರಹಿತ ವ್ಯವಸ್ಥೆ ಈಗಿನ ಬಿಜೆಪಿಯಲ್ಲಿಲ್ಲ.</p></li><li><p>ಬಿಜೆಪಿಯವರು ಚುನಾವಣೆ ಸಂದರ್ಭ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಾರೆ. ಅದು ಎಲ್ಲಿಂದ ಬರುತ್ತದೆ? ಅವರೇನು ಸತ್ಯ ಹರಿಶ್ಚಂದ್ರರಾ? ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಅವರಿಗೆ ಯಾವುದೇ ನೈತಿಕತೆ ಇಲ್ಲ.</p></li><li><p>ಶಕ್ತಿ ಯೋಜನೆ ಜಾರಿಯಾದ ನಂತರ ಮಹಿಳೆಯರು ಸರ್ಕಾರಿ ಬಸ್ಗಳಲ್ಲಿ ಖುಷಿಯಿಂದ ಪ್ರಯಾಣಿಸುತ್ತಿದ್ದಾರೆ. ಈಗ ಒಂದೇ ‘ಗ್ಯಾರಂಟಿ’ ಅನುಷ್ಠಾನದಿಂದ ವಿರೋಧ ಪಕ್ಷಗಳಲ್ಲಿ ನಡುಕ ಶುರುವಾಗಿದೆ.</p></li><li><p> ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು 75 ರಿಂದ 80 ವಯಸ್ಸಿನ ನಾಯಕರಿಗೆ ಟಿಕೆಟ್ ನೀಡಿದೆ. ನನಗೆ ಟಿಕೆಟ್ ನೀಡದ ಪರಿಣಾಮ ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡ ಬಿಜೆಪಿ ಎಚ್ಚೆತ್ತುಕೊಂಡಿದೆ.</p></li><li><p>ನನಗೆ ಟಿಕೆಟ್ ಕೈ ತಪ್ಪಲು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಕಾರಣ. ತಮ್ಮ ಮಾನಸ ಪುತ್ರ ಮಹೇಶ ಟೆಂಗಿನಕಾಯಿಗೆ ಹುಬ್ಬಳ್ಳಿ–ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಟಿಕೆಟ್ ಕೊಡಿಸಲು ನನಗೆ ತಪ್ಪಿಸಿದರು</p></li></ul>.ಜಗದೀಶ ಶೆಟ್ಟರ್ ಮತ್ತೆ ಬಿಜೆಪಿ ಸೇರಿದ್ದು ಯಾಕೆ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಿದ ಕಾರಣಕ್ಕೆ ಮುನಿಸಿಕೊಂಡು ಬಿಜೆಪಿ ತೊರೆದಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಒಂಬತ್ತು ತಿಂಗಳಲ್ಲೇ ಬಿಜೆಪಿಗೆ ಮರಳಿದ್ದಾರೆ. ಅವರು ಕಾಂಗ್ರೆಸ್ನಲ್ಲಿದ್ದಾಗ ಮಾಡಿದ ಮಾತುಗಳು ಇವು..</p><ul><li><p>ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗ ಬೇಕು ಎಂಬುದು ನನ್ನನ್ನು ಸೇರಿಸಿ ಕೋಟ್ಯಂತರ ಜನರ ಅಭಿಲಾಷೆ. ಆದರೆ, ಬಿಜೆಪಿ ಧರ್ಮದಲ್ಲಿ ರಾಜಕೀಯ ಬೆರೆಸಿ ಸಮಾಜಕ್ಕೆ ತಪ್ಪು ಸಂದೇಶ ರವಾನಿಸುತ್ತಿದೆ</p></li></ul><ul><li><p> ರಾಮಮಂದಿರ ಉದ್ಘಾಟನೆ ಮುಖ್ಯವೋ, ಕಾಂಗ್ರೆಸ್ ಪಕ್ಷ ಟೀಕಿಸುವುದು ಮುಖ್ಯವೋ? ಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಹೋಗದಿದ್ದರೆ ಹಿಂದೂ ವಿರೋಧಿ ಎಂಬ ಪಟ್ಟ ಕಟ್ಟಿ, ಲೋಕಸಭಾ ಚುನಾವಣೆಗೆ ಉಪಯೋಗಿಸಿಕೊಳ್ಳುವುದು ಬಿಜೆಪಿಯ ಷಡ್ಯಂತ್ರ</p></li><li><p>ಕಾಂಗ್ರೆಸ್ ಹಿಂದೂ ವಿರೋಧಿಯಾಗಿದ್ದರೆ, ಹಿಂದೂಗಳು ಮತ ಹಾಕದಿದ್ದರೆ ರಾಜ್ಯದಲ್ಲಿ 136 ಸ್ಥಾನ ಬರಲು ಸಾಧ್ಯವಿತ್ತೇ? ಧಾರ್ಮಿಕ ವಿಷಯಗಳು ಭಾವನಾತ್ಮಕ ಹಾಗೂ ತಾತ್ಕಾಲಿಕವಾಗಿದ್ದು, ಬಿಜೆಪಿ ಇದನ್ನೇ ಮುಂದಿಟ್ಟುಕೊಂಡು ಮಾತನಾಡುತ್ತಿದ್ದರೆ ಜಾಸ್ತಿ ದಿನ ಇರುವುದಿಲ್ಲ</p></li><li><p> ಶ್ರೀಕಾಂತ ಪೂಜಾರಿಗೆ ಸಂಬಂಧಿಸಿದ ಬೆಳವಣಿಗೆಗಳು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಡೆದಿವೆ. ಇದರ ಹಿಂದೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಕೈವಾಡವಿದೆ. ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಅವರು ಹಿಂದೂ–ಮುಸ್ಲಿಮರ ನಡುವೆ ವೈಮನಸ್ಸು ಮೂಡಿಸುತ್ತಿದ್ದಾರೆ.</p></li><li><p> ನಾನು ಮತ್ತೆ ಬಿಜೆಪಿ ಸೇರುತ್ತೇನೆ ಎಂದು ಸುಳ್ಳು ಸುದ್ದಿ ಹಬ್ಬಿಸಿ, ಆ ಪಕ್ಷದಿಂದ ಹೊರ ಹೋಗುವವರನ್ನು ತಡೆಯುವ ಕೆಲಸವಾಗುತ್ತಿದೆ. ನಾನು ಮತ್ತೆ ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ. ಸಾರ್ವಜನಿಕರಲ್ಲಿ ಗೊಂದಲ ಮೂಡಿಸುವ ಕೆಲಸ ಬಿಜೆಪಿ ಮಾಡುತ್ತಿದೆ. ಈವರೆಗೂ ನನ್ನನ್ನು ಯಾರೂ ಭೇಟಿಯಾಗಿಲ್ಲ. ಭೇಟಿಯಾಗುವ ಅಗತ್ಯವೂ ಇಲ್ಲ.</p></li><li><p>ಯಾರದ್ದೋ ವೈಯಕ್ತಿಕ ಹಿತಾಸಕ್ತಿಗಾಗಿ ನನಗೆ ಟಿಕೆಟ್ ತಪ್ಪಿಸಿ ಅಪಮಾನ ಮಾಡಲಾಯಿತು. ಅದನ್ನು ಸಹಿಸಲು ಸಾಧ್ಯವಾಗದೆ ಅಲ್ಲಿಂದ ಹೊರಬಂದಿರುವೆ. ಪಕ್ಷಕ್ಕಾಗಿ ದುಡಿದ ವ್ಯಕ್ತಿಗೆ ಟಿಕೆಟ್ ನೀಡಿಲ್ಲ ಎಂದಾದರೆ, ತತ್ವ, ಸಿದ್ಧಾಂತ ಏಕೆ ಬೇಕು? ಕೆ.ಎಸ್.ಈಶ್ವರಪ್ಪ ಅವರಿಗೂ ನನ್ನಂತೆ ಆಗಿದ್ದರೆ ಅವರಿಗೆ ಗೊತ್ತಾಗುತ್ತಿತ್ತು.</p></li><li><p>ಚಿತ್ತಾಪುರದಲ್ಲಿ ಪ್ರಿಯಾಂಕ್ ಖರ್ಗೆ ವಿರುದ್ಧ 80 ಕ್ರಿಮಿ ನಲ್ ಪ್ರಕರಣ ಇದ್ದ ವ್ಯಕ್ತಿಗೆ ಟಿಕೆಟ್ ನೀಡಲಾಯಿತು. ಬೇರೆ ಪಕ್ಷದಿಂದ ಬಂದವರಿಗೆ ಮಣೆ ಹಾಕಲಾಯಿತು. ಅಡ್ವಾಣಿ, ವಾಜಪೇಯಿ ಅವರ ಕಾಲದಲ್ಲಿದ್ದ ಭ್ರಷ್ಟಾಚಾರ ರಹಿತ ವ್ಯವಸ್ಥೆ ಈಗಿನ ಬಿಜೆಪಿಯಲ್ಲಿಲ್ಲ.</p></li><li><p>ಬಿಜೆಪಿಯವರು ಚುನಾವಣೆ ಸಂದರ್ಭ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಾರೆ. ಅದು ಎಲ್ಲಿಂದ ಬರುತ್ತದೆ? ಅವರೇನು ಸತ್ಯ ಹರಿಶ್ಚಂದ್ರರಾ? ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಅವರಿಗೆ ಯಾವುದೇ ನೈತಿಕತೆ ಇಲ್ಲ.</p></li><li><p>ಶಕ್ತಿ ಯೋಜನೆ ಜಾರಿಯಾದ ನಂತರ ಮಹಿಳೆಯರು ಸರ್ಕಾರಿ ಬಸ್ಗಳಲ್ಲಿ ಖುಷಿಯಿಂದ ಪ್ರಯಾಣಿಸುತ್ತಿದ್ದಾರೆ. ಈಗ ಒಂದೇ ‘ಗ್ಯಾರಂಟಿ’ ಅನುಷ್ಠಾನದಿಂದ ವಿರೋಧ ಪಕ್ಷಗಳಲ್ಲಿ ನಡುಕ ಶುರುವಾಗಿದೆ.</p></li><li><p> ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು 75 ರಿಂದ 80 ವಯಸ್ಸಿನ ನಾಯಕರಿಗೆ ಟಿಕೆಟ್ ನೀಡಿದೆ. ನನಗೆ ಟಿಕೆಟ್ ನೀಡದ ಪರಿಣಾಮ ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡ ಬಿಜೆಪಿ ಎಚ್ಚೆತ್ತುಕೊಂಡಿದೆ.</p></li><li><p>ನನಗೆ ಟಿಕೆಟ್ ಕೈ ತಪ್ಪಲು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಕಾರಣ. ತಮ್ಮ ಮಾನಸ ಪುತ್ರ ಮಹೇಶ ಟೆಂಗಿನಕಾಯಿಗೆ ಹುಬ್ಬಳ್ಳಿ–ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಟಿಕೆಟ್ ಕೊಡಿಸಲು ನನಗೆ ತಪ್ಪಿಸಿದರು</p></li></ul>.ಜಗದೀಶ ಶೆಟ್ಟರ್ ಮತ್ತೆ ಬಿಜೆಪಿ ಸೇರಿದ್ದು ಯಾಕೆ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>